AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್’ ಸಿನಿಮಾ ಬಗ್ಗೆ ಖ್ಯಾತ ಗಾಯಕ ಎಡ್ ಶೀರನ್ ಮಾತು

Ed Sheeran: ಭಾರತಕ್ಕೆ ಬಂದಿರುವ ಜಗದ್ವಿಖ್ಯಾತ ಗಾಯಕ ಎಡ್ ಶೀರನ್, ಆಸ್ಕರ್ ಗೆದ್ದ ‘ಆರ್​ಆರ್​ಆರ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ತಮಗೆ ಏಕೆ ಇಷ್ಟವಾಯ್ತು ಎಂಬುದನ್ನು ಹೇಳಿದ್ದಾರೆ.

‘ಆರ್​ಆರ್​ಆರ್’ ಸಿನಿಮಾ ಬಗ್ಗೆ ಖ್ಯಾತ ಗಾಯಕ ಎಡ್ ಶೀರನ್ ಮಾತು
ಮಂಜುನಾಥ ಸಿ.
|

Updated on: Mar 15, 2024 | 10:52 AM

Share

ಜಗದ್ವಿಖ್ಯಾತ ಗಾಯಲ ಎಡ್ ಶೀರನ್ (Ed Sheeran) ಭಾರತಕ್ಕೆ ಬಂದಿದ್ದಾರೆ. ಭಾರತದ ಸೆಲೆಬ್ರಿಟಿಗಳು ಎಡ್ ಶೀರನ್ ಅವರನ್ನು ಬಹಳ ಖುಷಿಯಿಂದ ಸ್ವಾಗತಿಸಿದ್ದು, ಪಾರ್ಟಿಗಳ ಮೇಲೆ ಪಾರ್ಟಿಗಳನ್ನು ನೀಡುತ್ತಿದ್ದಾರೆ. ಭಾರತಕ್ಕೆ ಬಂದ ಕೂಡಲೇ ಶಾಲೆಯೊಂದಕ್ಕೆ ಭೇಟಿ ನೀಡಿದ್ದ ಎಡ್ ಶೀರನ್ ಶಾಲೆಯಲ್ಲಿ ಮಕ್ಕಳ ಮುಂದೆ ಹಾಡು ಹಾಡಿದ್ದರು. ಅದಾದ ಬಳಿಕ ಶಾರುಖ್ ಖಾನ್ ಮನೆಗೆ ಹೋಗಿದ್ದರು. ಬಳಿಕ ಕಮಿಡಿಯನ್, ನಟ ಕಪಿಲ್ ಶರ್ಮಾ, ಎಡ್ ಶೀರನ್​ಗಾಗಿ ಭಾರಿ ದೊಡ್ಡ ಪಾರ್ಟಿಯನ್ನು ಆಯೋಜಿಸಿದ್ದರು. ಇದೆಲ್ಲದರ ಜೊತೆಗೆ ಸಂದರ್ಶನಗಳ ಮೇಲೆ ಸಂದರ್ಶನಗಳನ್ನು ಸಹ ಈ ಖ್ಯಾತ ಗಾಯಕ ನೀಡುತ್ತಿದ್ದಾರೆ. ಭಾರತದ ಬಗ್ಗೆ ಸಾಕಷ್ಟು ರಿಸರ್ಚ್ ಮಾಡಿಕೊಂಡೇ ಬಂದಂತಿರುವ ಎಡ್ ಶೀರನ್, ಆಸ್ಕರ್ ಗೆದ್ದ ಭಾರತದ ಸಿನಿಮಾ ‘ಆರ್​ಆರ್​ಆರ್’ ಬಗ್ಗೆ ಗೌರವದಿಂದ ಮಾತನಾಡಿದ್ದಾರೆ.

ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ಎಡ್ ಶೀರನ್​ಗೆ ‘ನಿಮಗೆ ‘ನಾಟು-ನಾಟು’ ಗೊತ್ತೆ ಎಂಬ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿರುವ ಎಡ್ ಶೀರನ್, ‘ನನ್ನ ಕೆಲವು ಆಪ್ತ ಗೆಳೆಯರೊಟ್ಟಿಗೆ ಕೂತು ನಾನು ‘ಆರ್​ಆರ್​ಆರ್’ ಸಿನಿಮಾ ನೋಡಿದ್ದೆ. ಅದೊಂದು ಅದ್ಭುತವಾದ ಸಿನಿಮಾ, ಮೂರು ಗಂಟೆಯ ಅದ್ಭುತ ಅದು. ಹಾಡುಗಳು ಅದರಲ್ಲೂ ‘ನಾಟು-ನಾಟು’ ಬಹಳ ಅದ್ಭುತವಾದ ಹಾಡು. ಸಿನಿಮಾವನ್ನು ಕಟ್ಟಿರುವ ರೀತಿಯೂ ಅದ್ಭುತವಾದುದು, ಸಿನಿಮಾದ ಥ್ರಿಲ್ಲಿಂಗ್ ಅಂಶಕ್ಕೆ ನಾನು ಮಾರು ಹೋದೆ’ ಎಂದಿದ್ದಾರೆ.

ಇದನ್ನೂ ಓದಿ:ಮನೆಗೆ ಭೇಟಿ ನೀಡಿದ ಖ್ಯಾತ ಗಾಯಕನಿಗೆ ಉಡುಗೊರೆ ಕೊಟ್ಟ ಶಾರುಖ್ ಪತ್ನಿ ಗೌರಿ

ಎಡ್ ಶೀರನ್ ತಮ್ಮ ಸಿನಿಮಾ ಬಗ್ಗೆ ಮಾತನಾಡಿರುವ ವಿಡಿಯೋವನ್ನು ‘ಆರ್​ಆರ್​ಆರ್​’ ತಂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ‘ಎಡ್ ಶೀರನ್​’ಗೆ ‘ನಾಟು-ನಾಟು’ ಮಾತ್ರವೇ ಅಲ್ಲ, ಇನ್ನೂ ಹೆಚ್ಚು ಗೊತ್ತು’ ಎಂದು ಬರೆದುಕೊಂಡಿದ್ದಾರೆ. ಸಂದರ್ಶನದಲ್ಲಿ ಎಡ್ ಶೀರನ್, ‘ಆರ್​ಆರ್​ಆರ್’ ಸಿನಿಮಾವನ್ನು ಬಾಲಿವುಡ್ ಸಿನಿಮಾ ಎನ್ನುತ್ತಾರೆ. ಬಳಿಕ ಸಂದರ್ಶಕಿ ಅದು ಬಾಲಿವುಡ್ ಸಿನಿಮಾ ಅಲ್ಲ ಆದರೆ ಅದು ಭಾರತೀಯ ಸಿನಿಮಾ ಎಂದು ತಿದ್ದುತ್ತಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಎಡ್ ಶೀರನ್ ಭಾರತ ಪ್ರವಾಸದಲ್ಲಿದ್ದು, ಭಾರತದ ಕೆಲವು ನಗರಗಳಲ್ಲಿ ಪ್ರದರ್ಶನ ನೀಡಲಿದ್ದಾರೆ. ಮಾರ್ಚ್ 16ಕ್ಕೆ ಮೊದಲ ಪ್ರದರ್ಶನ ಮುಂಬೈನಲ್ಲಿ ನಡೆಯಲಿದೆ. ಮುಂಬೈ ಶೋನ ಟಿಕೆಟ್​ಗಳು ಈಗಾಗಲೇ ಮಾರಾಟವಾಗಿವೆ. ಪ್ರತಿ ಟಿಕೆಟ್​ಗೆ 16,000 ಬೆಲೆ ನಿಗದಿ ಪಡಿಸಲಾಗಿತ್ತು. ಎಡ್ ಶೀರನ್ ಜೊತೆಗೆ ಪ್ರದೀಪ್ ಕುಲಾಡ್ ಸಹ ಪ್ರದರ್ಶನ ನೀಡಲಿದ್ದಾರೆ. ಎಡ್ ಶೀರನ್ ಕಾನ್ಸರ್ಟ್ ನೋಡಲು ಸಾವಿರಾರು ಮಂದಿ ಬರುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ