AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್

Prakash Raj: ನಟ ಪ್ರಕಾಶ್ ರೈಗೆ ಇಡಿ ಸಂಕಷ್ಟ ಎದುರಾಗಿದೆ. 100 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ್ ರೈಗೆ ಕೇಂದ್ರ ತನಿಖಾ ಸಂಸ್ಥೆ ಇಡಿ ಸಮನ್ಸ್ ಜಾರಿ ಮಾಡಿದೆ.

100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್
ಪ್ರಕಾಶ್ ರೈ
ಮಂಜುನಾಥ ಸಿ.
|

Updated on: Nov 23, 2023 | 8:01 PM

Share

ತಮ್ಮ ಹೇಳಿಕೆಗಳ ಮೂಲಕ ವಿವಾದಕ್ಕೆ ಗುರಿಯಾಗುತ್ತಿದ್ದ, ಸಂಕಷ್ಟಗಳಿಗೆ ಈಡಾಗುತ್ತಿದ್ದ ನಟ ಪ್ರಕಾಶ್ ರೈ (Prakash Raj) ಇದೀಗ ಹಣದ ಕಾರಣಕ್ಕೆ ಇಕ್ಕಟ್ಟೊಂದಕ್ಕೆ ಸಿಲುಕಿದಂತಿದೆ. 100 ಕೋಟಿ ಹಣ ವಂಚನೆ ಪ್ರಕರಣ ಸಂಬಂಧ ನಟ ಪ್ರಕಾಶ್ ರೈಗೆ ಸಮನ್ಸ್ ಜಾರಿ ಆಗಿದ್ದು ಪ್ರಕರಣದ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿದೆ.

ಪ್ರಣವ್ ಜ್ಯುವೆಲರ್ಸ್ ಹೆಸರಿನ ಆಭರಣ ಮಾರಾಟ ಸಂಸ್ಥೆಯೊಂದಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾಗುತ್ತಿರುವ 100 ಕೋಟಿ ವಂಚನೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದೆ. ಪ್ರಣವ್ ಜ್ಯುವೆಲರ್ಸ್​ಗೆ ನಟ ಪ್ರಕಾರ್ ರೈ ರಾಯಭಾರಿ ಆಗಿದ್ದರು, ಇದೇ ಕಾರಣಕ್ಕೆ ನಟ ಪ್ರಕಾಶ್ ರೈಗೆ ಸಮನ್ಸ್ ನೀಡಿರುವ ಇಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.

ತ್ರಿರುಚಿ ಮೂಲದ ಪ್ರಣವ್ ಜ್ಯುವೆಲರ್ಸ್​ಗೆ ಬಹಳ ಸಮಯದಿಂದಲೂ ಪ್ರಕಾಶ್ ರೈ ರಾಯಭಾರಿ ಆಗಿದ್ದರು. ಈ ಸಂಸ್ಥೆಯು ಇತ್ತೀಚೆಗೆ ನಷ್ಟ ಘೋಷಿಸಿ ತನ್ನ ಅಂಗಡಿಗಳನ್ನು ಬಂದ್ ಮಾಡಿದೆ. ಅಂಗಡಿಗಳನ್ನು ಬಂದ್ ಮಾಡಿದ ಬೆನ್ನಲ್ಲೆ ಹಲವಾರು ಗ್ರಾಹಕರು ಪ್ರಣವ್ ಜ್ಯುವೆಲರ್ಸ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಣವ್ ಜ್ಯುವೆಲರ್ಸ್​, ಚಿನ್ನದ ಹೂಡಿಕೆ ಸ್ಕೀಂನಲ್ಲಿ ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿರುವ ವಿಚಾರ ಬಹಿರಂಗವಾಗಿದ್ದು, ಗ್ರಾಹಕರಿಂದ ಪಡೆದುಕೊಂಡಿರುವ ಹಣ ಸುಮಾರು 100 ಕೋಟಿಗೂ ಹೆಚ್ಚಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ನನ್ನ ಮಗನಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಂತೆ ಅನಿಸುತ್ತಿದೆ’; ಪ್ರಕಾಶ್ ರಾಜ್ ಹೀಗೆ ಹೇಳಿದ್ದು ಏಕೆ?

ಪ್ರಣವ್ ಜ್ಯುವೆಲರ್ಸ್​ನ ಮಳಿಗೆಗಳು ಇದೇ ಅಕ್ಟೋಬರ್​ನಲ್ಲಿ ಬಂದ್ ಆದವು. ಪ್ರಣವ್ ಜ್ಯುವೆಲರ್ಸ್ ವಿರುದ್ಧ ಸರಣಿ ದೂರುಗಳು ದಾಖಲಾದ ಬೆನ್ನಲ್ಲೆ ಅವರ ಮಾಲೀಕರಾದ ಮದನ್ ಹಾಗೂ ಅವರ ಪತ್ನಿಯ ವಿರುದ್ಧ ಲುಕೌಟ್ ನೊಟೀಸ್ ಜಾರಿ ಆಗಿದೆ. ಪ್ರಕರಣದ ಕುರಿತಾಗಿ ನಿನ್ನೆ (ನವೆಂಬರ್ 22) ಹೇಳಿಕೆ ಬಿಡುಗಡೆ ಮಾಡಿರುವ ಇಡಿ, ಹೆಚ್ಚಿನ ಲಾಭದ ಆಸೆ ತೋರಿಸಿ ಸುಮಾರು 100 ಕೋಟಿಗೂ ಹೆಚ್ಚು ಹಣವನ್ನು ಪ್ರಣವ್ ಜ್ಯುವೆಲರ್ಸ್ ಗ್ರಾಹಕರಿಂದ ಸಂಗ್ರಹಿಸಿದೆ. ಲಾಭ ಇರಲಿ ಹೂಡಿಕೆ ಮಾಡಿರುವ ಹಣವನ್ನು ಸಹ ಯಾರಿಗೂ ಮರಳಿ ನೀಡಿಲ್ಲ ಈ ಸಂಸ್ಥೆ.

ಕೇಂದ್ರದ ಟೀಕಾಕಾರರಾಗಿರುವ ಪ್ರಕಾಶ್ ರೈ, ಕೇಂದ್ರವನ್ನು ಟೀಕಿಸುವ ಭರದಲ್ಲಿ ಆಗಾಗ್ಗೆ ಇಡಿ, ಸಿಬಿಐಗಳ ಹೆಸರು ಬಳಸಿರುವುದುಂಟು. ಈಗ ಅದೇ ಇಡಿಯು ಪ್ರಕಾಶ್ ರೈಗೆ ಸಮನ್ಸ್ ಜಾರಿ ಮಾಡಿದೆ. ಈ ವಂಚನೆ ಪ್ರಕರಣದಲ್ಲಿ ಪ್ರಕಾಶ್ ರೈ ಅನ್ನು ಸಹ ಆರೋಪಿಯನ್ನಾಗಿಸಲಾಗುತ್ತದೆಯೇ ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್