Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್

Prakash Raj: ನಟ ಪ್ರಕಾಶ್ ರೈಗೆ ಇಡಿ ಸಂಕಷ್ಟ ಎದುರಾಗಿದೆ. 100 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ್ ರೈಗೆ ಕೇಂದ್ರ ತನಿಖಾ ಸಂಸ್ಥೆ ಇಡಿ ಸಮನ್ಸ್ ಜಾರಿ ಮಾಡಿದೆ.

100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್
ಪ್ರಕಾಶ್ ರೈ
Follow us
ಮಂಜುನಾಥ ಸಿ.
|

Updated on: Nov 23, 2023 | 8:01 PM

ತಮ್ಮ ಹೇಳಿಕೆಗಳ ಮೂಲಕ ವಿವಾದಕ್ಕೆ ಗುರಿಯಾಗುತ್ತಿದ್ದ, ಸಂಕಷ್ಟಗಳಿಗೆ ಈಡಾಗುತ್ತಿದ್ದ ನಟ ಪ್ರಕಾಶ್ ರೈ (Prakash Raj) ಇದೀಗ ಹಣದ ಕಾರಣಕ್ಕೆ ಇಕ್ಕಟ್ಟೊಂದಕ್ಕೆ ಸಿಲುಕಿದಂತಿದೆ. 100 ಕೋಟಿ ಹಣ ವಂಚನೆ ಪ್ರಕರಣ ಸಂಬಂಧ ನಟ ಪ್ರಕಾಶ್ ರೈಗೆ ಸಮನ್ಸ್ ಜಾರಿ ಆಗಿದ್ದು ಪ್ರಕರಣದ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿದೆ.

ಪ್ರಣವ್ ಜ್ಯುವೆಲರ್ಸ್ ಹೆಸರಿನ ಆಭರಣ ಮಾರಾಟ ಸಂಸ್ಥೆಯೊಂದಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾಗುತ್ತಿರುವ 100 ಕೋಟಿ ವಂಚನೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದೆ. ಪ್ರಣವ್ ಜ್ಯುವೆಲರ್ಸ್​ಗೆ ನಟ ಪ್ರಕಾರ್ ರೈ ರಾಯಭಾರಿ ಆಗಿದ್ದರು, ಇದೇ ಕಾರಣಕ್ಕೆ ನಟ ಪ್ರಕಾಶ್ ರೈಗೆ ಸಮನ್ಸ್ ನೀಡಿರುವ ಇಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.

ತ್ರಿರುಚಿ ಮೂಲದ ಪ್ರಣವ್ ಜ್ಯುವೆಲರ್ಸ್​ಗೆ ಬಹಳ ಸಮಯದಿಂದಲೂ ಪ್ರಕಾಶ್ ರೈ ರಾಯಭಾರಿ ಆಗಿದ್ದರು. ಈ ಸಂಸ್ಥೆಯು ಇತ್ತೀಚೆಗೆ ನಷ್ಟ ಘೋಷಿಸಿ ತನ್ನ ಅಂಗಡಿಗಳನ್ನು ಬಂದ್ ಮಾಡಿದೆ. ಅಂಗಡಿಗಳನ್ನು ಬಂದ್ ಮಾಡಿದ ಬೆನ್ನಲ್ಲೆ ಹಲವಾರು ಗ್ರಾಹಕರು ಪ್ರಣವ್ ಜ್ಯುವೆಲರ್ಸ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಣವ್ ಜ್ಯುವೆಲರ್ಸ್​, ಚಿನ್ನದ ಹೂಡಿಕೆ ಸ್ಕೀಂನಲ್ಲಿ ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿರುವ ವಿಚಾರ ಬಹಿರಂಗವಾಗಿದ್ದು, ಗ್ರಾಹಕರಿಂದ ಪಡೆದುಕೊಂಡಿರುವ ಹಣ ಸುಮಾರು 100 ಕೋಟಿಗೂ ಹೆಚ್ಚಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ನನ್ನ ಮಗನಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಂತೆ ಅನಿಸುತ್ತಿದೆ’; ಪ್ರಕಾಶ್ ರಾಜ್ ಹೀಗೆ ಹೇಳಿದ್ದು ಏಕೆ?

ಪ್ರಣವ್ ಜ್ಯುವೆಲರ್ಸ್​ನ ಮಳಿಗೆಗಳು ಇದೇ ಅಕ್ಟೋಬರ್​ನಲ್ಲಿ ಬಂದ್ ಆದವು. ಪ್ರಣವ್ ಜ್ಯುವೆಲರ್ಸ್ ವಿರುದ್ಧ ಸರಣಿ ದೂರುಗಳು ದಾಖಲಾದ ಬೆನ್ನಲ್ಲೆ ಅವರ ಮಾಲೀಕರಾದ ಮದನ್ ಹಾಗೂ ಅವರ ಪತ್ನಿಯ ವಿರುದ್ಧ ಲುಕೌಟ್ ನೊಟೀಸ್ ಜಾರಿ ಆಗಿದೆ. ಪ್ರಕರಣದ ಕುರಿತಾಗಿ ನಿನ್ನೆ (ನವೆಂಬರ್ 22) ಹೇಳಿಕೆ ಬಿಡುಗಡೆ ಮಾಡಿರುವ ಇಡಿ, ಹೆಚ್ಚಿನ ಲಾಭದ ಆಸೆ ತೋರಿಸಿ ಸುಮಾರು 100 ಕೋಟಿಗೂ ಹೆಚ್ಚು ಹಣವನ್ನು ಪ್ರಣವ್ ಜ್ಯುವೆಲರ್ಸ್ ಗ್ರಾಹಕರಿಂದ ಸಂಗ್ರಹಿಸಿದೆ. ಲಾಭ ಇರಲಿ ಹೂಡಿಕೆ ಮಾಡಿರುವ ಹಣವನ್ನು ಸಹ ಯಾರಿಗೂ ಮರಳಿ ನೀಡಿಲ್ಲ ಈ ಸಂಸ್ಥೆ.

ಕೇಂದ್ರದ ಟೀಕಾಕಾರರಾಗಿರುವ ಪ್ರಕಾಶ್ ರೈ, ಕೇಂದ್ರವನ್ನು ಟೀಕಿಸುವ ಭರದಲ್ಲಿ ಆಗಾಗ್ಗೆ ಇಡಿ, ಸಿಬಿಐಗಳ ಹೆಸರು ಬಳಸಿರುವುದುಂಟು. ಈಗ ಅದೇ ಇಡಿಯು ಪ್ರಕಾಶ್ ರೈಗೆ ಸಮನ್ಸ್ ಜಾರಿ ಮಾಡಿದೆ. ಈ ವಂಚನೆ ಪ್ರಕರಣದಲ್ಲಿ ಪ್ರಕಾಶ್ ರೈ ಅನ್ನು ಸಹ ಆರೋಪಿಯನ್ನಾಗಿಸಲಾಗುತ್ತದೆಯೇ ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್