AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಯೋರ್ವ ಈ ಸಲ ಕಪ್​ ನಮ್ದೇ ಎಂದು ಹೇಳಿದ್ದಾರೆ. ಇದಕ್ಕೆ ಬಿಗ್​ ಬಾಸ್​ ಆ ಸ್ಪರ್ಧಿಗೆ ಶಾಕ್​ ನೀಡಿದೆ.

ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: Mar 22, 2021 | 10:02 PM

Share

ಈ ಸಲ ಕಪ್​ ನಮ್ಮದೇ ಅನ್ನೋ ವಾಕ್ಯವನ್ನು ಆರ್​ಸಿಬಿ ಫ್ಯಾನ್ಸ್​ ಹಲವು ವರ್ಷಗಳಿಂದ ಹೇಳುತ್ತಲೇ ಬರುತ್ತಿದ್ದಾರೆ. ಆದರೆ, ಅದು ಈವರೆಗೆ ಸಾಧ್ಯವಾಗಿಲ್ಲ. ಪ್ರತಿ ಬಾರಿ ಈ ಸಲ ಕಪ್​ ನಮ್ಮದೇ ಎಂದವರಿಗೆ ಕೇವಲ ನಿರಾಶೆ ಆಗುತ್ತಿತ್ತು. ಆದರೆ, ಈ ಬಾರಿ ಈ ಸಲ ಕಪ್​ ನಮ್ಮದೇ ಎಂದವರಿಗೆ ಶಾಕ್​ ಸಿಕ್ಕಿದೆ! ನಾವು ಹೇಳುತ್ತಿರುವ ಕತೆ ಬಿಗ್​ ಬಾಸ್​ ಮನೆಯದ್ದು. ಈ ಸಲ ಕಪ್​ ನಮ್ಮದೇ ಎಂದ ಮಂಜುಗೆ ಬಿಗ್ ಬಾಸ್​ ಮನೆಯಲ್ಲಿ ಶಿಕ್ಷೆ ಸಿಕ್ಕಿದೆ. 

ಕಳೆದ ವಾರ ದಿವ್ಯಾ ಸುರೇಶ್​ ಹಾಗೂ ಮಂಜು ಹರಟೆ ಹೊಡೆಯುತ್ತಿದ್ದರು. ಆಗ ಮಂಜು ಕಾಫಿ ಕಪ್​ ಇಡೋಕೆ ಹೋಗಿ ಕೆಳಕ್ಕೆ ಬೀಳಿಸಿದ್ದರು. ಆ ಕಪ್​ ಬಿದ್ದ ರಭಸಕ್ಕೆ ಒಡೆದೇ ಹೋಗಿತ್ತು. ಬಿಗ್​ ಬಾಸ್​ ಕೊಟ್ಟ ಕಪ್​ಅನ್ನು ಒಡೆದ ನಂತರ ಮಂಜುಗೆ ಅತೀವವಾಗಿ ಅಪರಾಧ ಮನೋಭಾವನೆ ಕಾಡಿತ್ತು. ಕಪ್​ ಒಡೆದು ಹಾಕಿದ್ದಕ್ಕೆ ಸಾರಿ ಬಿಗ್​ ಬಾಸ್​. ದಯವಿಟ್ಟು ನನ್ನನ್ನು ಕ್ಷಮಿಸಿ ಬಿಗ್​ ಬಾಸ್​ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದರು. ನಾನು ಬೇಕಂತಲೇ ಇದನ್ನು ಒಡೆದಿಲ್ಲ. ಮಿಸ್​ ಆಗಿ ಬಿದ್ದು ಹೋಗಿದೆ. ಯಾರಿಗೂ ಗೊತ್ತಾಗದಂತೆ ಇದನ್ನು ಬಚ್ಚಿಡುತ್ತೇನೆ. ಆಮೇಲೆ ಸ್ಪರ್ಧಿಗಳ ಬಳಿ ನನ್ನ ಕಪ್​ ಎಲ್ಲಿದೆ ಎಂದು ಪ್ರಶ್ನೆ ಮಾಡುತ್ತೇನೆ ಎಂದು ಹೇಳಿದ್ದರು ಮಂಜು.

ಈ ತಪ್ಪಿಗೆ ಮಂಜುಗೆ ಬಿಗ್​ ಬಾಸ್​ ಶಿಕ್ಷೆ ನೀಡಿದ್ದಾರೆ. ಮಂಜುಗೆ ಪುಟಾಣಿ ಕಪ್​ ಒಂದನ್ನು ನೀಡಲಾಗಿದೆ. ಈ ಕಪ್​ ನೀಡಿದ್ದು ಏಕೆ ಎಂಬುದನ್ನು ಹೇಳಿ ಎಂದು ಬಿಗ್​ ಬಾಸ್ ಮಂಜುಗೆ​ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಮಂಜು, ಈ ಸಲ ಆರ್​ಸಿಬಿ ಕಪ್​ ಗೆಲ್ಲಲಿದೆ. ಅದಕ್ಕೆ ಮುಂಚಿತವಾಗಿಯೇ ಕಪ್​ ಕಳಿಸಿದ್ದೀರಿ. ಈ ಸಲ ಕಪ್​ ನಮ್ಮದೇ ಎಂದು ಮಂಜು ಕೂಗಿದ್ದಾರೆ.

ಇದಕ್ಕೆ ಉತ್ತರಿಸಿರುವ ಬಿಗ್​ ಬಾಸ್​, ನೀವು ಬಿಗ್​ ಬಾಸ್​ ಕಪ್​ ಮುರಿದು ಹಾಕಿದ್ದೀರಾ. ಹೀಗಾಗಿ, ಬಿಗ್​ ಬಾಸ್ ಮುಂದಿನ ಆದೇಶದವರೆಗೂ ನೀರು, ಟೀ-ಕಾಫಿ ಕುಡಿಯೋಕೆ ಇದೇ ಕಪ್ ಬಳಕೆ ಮಾಡಬೇಕು ಎಂದು ಬಿಗ್​ ಬಾಸ್​ ಆದೇಶಿಸಿದೆ. ಬಿಗ್​ ಬಾಸ್​ ನೀಡಿರೋ ಹೊಸಾ ಕಪ್​ ತುಂಬಾನೇ ಸಣ್ಣದಾಗಿದೆ. ಅದರಲ್ಲಿ ಬರೋದು ಒಂದು ಸಿಪ್​ ಮಾತ್ರ. ಇದನ್ನು ನೋಡಿ ಮಂಜು ಕಂಗಾಲಾಗಿದ್ದಾರೆ. ಮನೆ ಮಂದಿ ಮಂಜುಗೆ ಇನ್ಮುಂದೆ ಕಷ್ಟವಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್