AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಸಿನಿಮಾದಲ್ಲಿ ನನಗೆ ಅನ್ಯಾಯ: ನಟಿ ಇಶಾ ಅಸಮಾಧಾನ

ಜೂ ಎನ್​ಟಿಆರ್ ನಟಿಸಿದ್ದ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದ ನಟಿ, ಈಗ ಆ ಸಿನಿಮಾದಿಂದ ತಮಗೆ ಅನ್ಯಾಯವಾಗಿದೆಯೆಂದು ಆರೋಪ ಮಾಡಿದ್ದಾರೆ.

ಜೂ ಎನ್​ಟಿಆರ್ ಸಿನಿಮಾದಲ್ಲಿ ನನಗೆ ಅನ್ಯಾಯ: ನಟಿ ಇಶಾ ಅಸಮಾಧಾನ
ಮಂಜುನಾಥ ಸಿ.
|

Updated on: May 17, 2024 | 5:00 PM

Share

ಜೂ ಎನ್​ಟಿಆರ್ (Jr NTR) ಸಿನಿಮಾ ಒಂದರಲ್ಲಿ ನಟಿಸಿದ್ದ ನಟಿ ಈಗ ತಮಗೆ ಆ ಸಿನಿಮಾದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ‘ಲೈಫ್ ಈಸ್ ಬ್ಯೂಟಿಫುಲ್’, ‘ಅಂತಕ ಮುಂದು ಆ ತರವಾತ’, ‘ಓಯ್’ ಇನ್ನೂ ಹಲವು ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಇಶಾ ರೆಬ್ಬಾ ಜೂ ಎನ್​ಟಿಆರ್ ನಟಿಸಿರುವ ಸೂಪರ್ ಹಿಟ್ ಸಿನಿಮಾನಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾದಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಇತ್ತೀಚೆಗಿನ ಸಂದರ್ಶನವೊಂದರಲ್ಲಿ ನಟಿ ಆರೋಪ ಮಾಡಿದ್ದಾರೆ. ವಿಶೇಷವಾಗಿ ನಿರ್ದೇಶಕ ತ್ರಿವಿಕ್ರಮ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಜೂ ಎನ್​ಟಿಆರ್ ನಟಿಸಿ, ತ್ರಿವಿಕ್ರಮ್ ನಿರ್ದೇಶನ ಮಾಡಿರುವ ‘ಅರವಿಂದ ಸಮೇತ ವೀರ ರಾಘವ’ ಸಿನಿಮಾದಲ್ಲಿ ಇಶಾ ರೆಬ್ಬ ನಟಿಸಿದ್ದರು. ಆ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ತ್ರಿವಿಕ್ರಮ್, ಇಶಾ ರೆಬ್ಬ ಅವರನ್ನು ಸಂಪರ್ಕಿಸಿದಾಗ, ಈ ಸಿನಿಮಾದ ಎರಡನೇ ನಾಯಕಿ ನೀವಾಗಿರುತ್ತೀರ ಎಂದಿದ್ದರಂತೆ. ಸಿನಿಮಾಕ್ಕಾಗಿ ಪ್ರವಾಸವನ್ನು ಮೊಟಕುಗೊಳಿಸಿ ಬಂದಿದ್ದರಂತೆ ಇಶಾ ರೆಬ್ಬ, ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆಗೆ ಒಂದು ಹಾಡನ್ನು ಸಹ ಶೂಟ್ ಮಾಡಲಾಗಿತ್ತಂತೆ. ಹಾಡಿಗಾಗಿ ಬುಲೆಟ್ ಚಲಾಯಿಸುವುದನ್ನು ಸಹ ಇಶಾ ಕಲಿತರಂತೆ ಆದರೆ ಸಿನಿಮಾ ಬಿಡುಗಡೆ ಆದಾಗ ಅವರ ಪಾತ್ರಕ್ಕೆ ವಿಪರೀತ ಕತ್ತರಿ ಪ್ರಯೋಗ ಮಾಡಲಾಗಿತ್ತಂತೆ.

ಇದನ್ನೂ ಓದಿ:ಆಸ್ತಿ ವಿವಾದ, ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ ಜೂ ಎನ್​ಟಿಆರ್

ನಾಯಕಿ ಅರವಿಂದ (ಪೂಜಾ ಹೆಗ್ಡೆ)ಯ ಸಹೋದರಿ ಪಾತ್ರದಲ್ಲಿ ಇಶಾ, ಆ ಸಿನಿಮಾನಲ್ಲಿ ನಟಿಸಿದ್ದರು. ನಾಯಕನ ಮೇಲೆ ಪ್ರೀತಿ ಇಟ್ಟುಕೊಳ್ಳುವ ಪಾತ್ರವದು, ಸಿನಿಮಾದ ಚಿತ್ರೀಕರಣ ನಡೆದಾಗ ಜೂ ಎನ್​ಟಿಆರ್ ಹಾಗೂ ಇಶಾ ನಡುವೆ ಹಲವು ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತಂತೆ. ಹಲವು ಹಾಸ್ಯ ದೃಶ್ಯಗಳು, ರೊಮ್ಯಾಂಟಿಕ್ ದೃಶ್ಯಗಳು ಸಹ ಇದ್ದವಂತೆ. ಆದರೆ ನಿರ್ದೇಶಕರು ಹಲವಾರು ದೃಶ್ಯಗಳಿಗೆ ಕತ್ತರಿ ಹಾಕಿದರಂತೆ. ಸಿನಿಮಾ ನೋಡಿದವರು ಇಶಾ ಪಾತ್ರಕ್ಕೆ ಪ್ರಾಮುಖ್ಯತೆಯೇ ಇಲ್ಲ ಎಂದಿದ್ದರಂತೆ. ಇದು ಇಶಾಗೆ ಬಹಳ ಬೇಸರ ತರಿಸಿತ್ತಂತೆ.

ತಮ್ಮ ದೃಶ್ಯಗಳಿಗೆ ಕತ್ತರಿ ಹಾಕಿರುವ ಬಗ್ಗೆ ಇಶಾ, ನಿರ್ದೇಶಕ ತ್ರಿವಿಕ್ರಮ್ ಬಳಿ ಖುದ್ದಾಗಿ ಪ್ರಶ್ನೆ ಮಾಡಿದರಂತೆ, ಅದಕ್ಕೆ ತ್ರಿವಿಕ್ರಮ್, ‘ನಿಮ್ಮನ್ನು ಸಿನಿಮಾದ ಎರಡನೇ ನಾಯಕಿ ಎಂದು ಪ್ರಚಾರ ಮಾಡುತ್ತಿದ್ದೀವಿ ಅಷ್ಟು ಸಾಲದೆ’ ಎಂದು ಉತ್ತರಿಸಿದ್ದರು ಎಂದಿದ್ದಾರೆ ನಟಿ ಇಶಾ. ‘ಅರವಿಂದ ಸಮೇತ ವೀರ ರಾಘವ’ ಸಿನಿಮಾ 2018ರಲ್ಲಿ ಬಿಡುಗಡೆ ಆಗಿತ್ತು. ರಾಯಲಸೀಮ ಕುಟುಂಬ ದ್ವೇಷದ ಕುರಿತಾದ ಕತೆಯನ್ನು ಆ ಸಿನಿಮಾ ಒಳಗೊಂಡಿತ್ತು. ತಲೆ ತಲಾಂತರಗಳಿಂದಲೂ ಇರುವ ದ್ವೇಷವನ್ನು ಅಂತ್ಯ ಮಾಡುವ ವ್ಯಕ್ತಿಯ ಪಾತ್ರದಲ್ಲಿ ಜೂ ಎನ್​ಟಿಆರ್ ನಟಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ