AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಸಿನಿಮಾದಲ್ಲಿ ನನಗೆ ಅನ್ಯಾಯ: ನಟಿ ಇಶಾ ಅಸಮಾಧಾನ

ಜೂ ಎನ್​ಟಿಆರ್ ನಟಿಸಿದ್ದ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದ ನಟಿ, ಈಗ ಆ ಸಿನಿಮಾದಿಂದ ತಮಗೆ ಅನ್ಯಾಯವಾಗಿದೆಯೆಂದು ಆರೋಪ ಮಾಡಿದ್ದಾರೆ.

ಜೂ ಎನ್​ಟಿಆರ್ ಸಿನಿಮಾದಲ್ಲಿ ನನಗೆ ಅನ್ಯಾಯ: ನಟಿ ಇಶಾ ಅಸಮಾಧಾನ
ಮಂಜುನಾಥ ಸಿ.
|

Updated on: May 17, 2024 | 5:00 PM

Share

ಜೂ ಎನ್​ಟಿಆರ್ (Jr NTR) ಸಿನಿಮಾ ಒಂದರಲ್ಲಿ ನಟಿಸಿದ್ದ ನಟಿ ಈಗ ತಮಗೆ ಆ ಸಿನಿಮಾದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ‘ಲೈಫ್ ಈಸ್ ಬ್ಯೂಟಿಫುಲ್’, ‘ಅಂತಕ ಮುಂದು ಆ ತರವಾತ’, ‘ಓಯ್’ ಇನ್ನೂ ಹಲವು ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಇಶಾ ರೆಬ್ಬಾ ಜೂ ಎನ್​ಟಿಆರ್ ನಟಿಸಿರುವ ಸೂಪರ್ ಹಿಟ್ ಸಿನಿಮಾನಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾದಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಇತ್ತೀಚೆಗಿನ ಸಂದರ್ಶನವೊಂದರಲ್ಲಿ ನಟಿ ಆರೋಪ ಮಾಡಿದ್ದಾರೆ. ವಿಶೇಷವಾಗಿ ನಿರ್ದೇಶಕ ತ್ರಿವಿಕ್ರಮ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಜೂ ಎನ್​ಟಿಆರ್ ನಟಿಸಿ, ತ್ರಿವಿಕ್ರಮ್ ನಿರ್ದೇಶನ ಮಾಡಿರುವ ‘ಅರವಿಂದ ಸಮೇತ ವೀರ ರಾಘವ’ ಸಿನಿಮಾದಲ್ಲಿ ಇಶಾ ರೆಬ್ಬ ನಟಿಸಿದ್ದರು. ಆ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ತ್ರಿವಿಕ್ರಮ್, ಇಶಾ ರೆಬ್ಬ ಅವರನ್ನು ಸಂಪರ್ಕಿಸಿದಾಗ, ಈ ಸಿನಿಮಾದ ಎರಡನೇ ನಾಯಕಿ ನೀವಾಗಿರುತ್ತೀರ ಎಂದಿದ್ದರಂತೆ. ಸಿನಿಮಾಕ್ಕಾಗಿ ಪ್ರವಾಸವನ್ನು ಮೊಟಕುಗೊಳಿಸಿ ಬಂದಿದ್ದರಂತೆ ಇಶಾ ರೆಬ್ಬ, ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆಗೆ ಒಂದು ಹಾಡನ್ನು ಸಹ ಶೂಟ್ ಮಾಡಲಾಗಿತ್ತಂತೆ. ಹಾಡಿಗಾಗಿ ಬುಲೆಟ್ ಚಲಾಯಿಸುವುದನ್ನು ಸಹ ಇಶಾ ಕಲಿತರಂತೆ ಆದರೆ ಸಿನಿಮಾ ಬಿಡುಗಡೆ ಆದಾಗ ಅವರ ಪಾತ್ರಕ್ಕೆ ವಿಪರೀತ ಕತ್ತರಿ ಪ್ರಯೋಗ ಮಾಡಲಾಗಿತ್ತಂತೆ.

ಇದನ್ನೂ ಓದಿ:ಆಸ್ತಿ ವಿವಾದ, ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ ಜೂ ಎನ್​ಟಿಆರ್

ನಾಯಕಿ ಅರವಿಂದ (ಪೂಜಾ ಹೆಗ್ಡೆ)ಯ ಸಹೋದರಿ ಪಾತ್ರದಲ್ಲಿ ಇಶಾ, ಆ ಸಿನಿಮಾನಲ್ಲಿ ನಟಿಸಿದ್ದರು. ನಾಯಕನ ಮೇಲೆ ಪ್ರೀತಿ ಇಟ್ಟುಕೊಳ್ಳುವ ಪಾತ್ರವದು, ಸಿನಿಮಾದ ಚಿತ್ರೀಕರಣ ನಡೆದಾಗ ಜೂ ಎನ್​ಟಿಆರ್ ಹಾಗೂ ಇಶಾ ನಡುವೆ ಹಲವು ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತಂತೆ. ಹಲವು ಹಾಸ್ಯ ದೃಶ್ಯಗಳು, ರೊಮ್ಯಾಂಟಿಕ್ ದೃಶ್ಯಗಳು ಸಹ ಇದ್ದವಂತೆ. ಆದರೆ ನಿರ್ದೇಶಕರು ಹಲವಾರು ದೃಶ್ಯಗಳಿಗೆ ಕತ್ತರಿ ಹಾಕಿದರಂತೆ. ಸಿನಿಮಾ ನೋಡಿದವರು ಇಶಾ ಪಾತ್ರಕ್ಕೆ ಪ್ರಾಮುಖ್ಯತೆಯೇ ಇಲ್ಲ ಎಂದಿದ್ದರಂತೆ. ಇದು ಇಶಾಗೆ ಬಹಳ ಬೇಸರ ತರಿಸಿತ್ತಂತೆ.

ತಮ್ಮ ದೃಶ್ಯಗಳಿಗೆ ಕತ್ತರಿ ಹಾಕಿರುವ ಬಗ್ಗೆ ಇಶಾ, ನಿರ್ದೇಶಕ ತ್ರಿವಿಕ್ರಮ್ ಬಳಿ ಖುದ್ದಾಗಿ ಪ್ರಶ್ನೆ ಮಾಡಿದರಂತೆ, ಅದಕ್ಕೆ ತ್ರಿವಿಕ್ರಮ್, ‘ನಿಮ್ಮನ್ನು ಸಿನಿಮಾದ ಎರಡನೇ ನಾಯಕಿ ಎಂದು ಪ್ರಚಾರ ಮಾಡುತ್ತಿದ್ದೀವಿ ಅಷ್ಟು ಸಾಲದೆ’ ಎಂದು ಉತ್ತರಿಸಿದ್ದರು ಎಂದಿದ್ದಾರೆ ನಟಿ ಇಶಾ. ‘ಅರವಿಂದ ಸಮೇತ ವೀರ ರಾಘವ’ ಸಿನಿಮಾ 2018ರಲ್ಲಿ ಬಿಡುಗಡೆ ಆಗಿತ್ತು. ರಾಯಲಸೀಮ ಕುಟುಂಬ ದ್ವೇಷದ ಕುರಿತಾದ ಕತೆಯನ್ನು ಆ ಸಿನಿಮಾ ಒಳಗೊಂಡಿತ್ತು. ತಲೆ ತಲಾಂತರಗಳಿಂದಲೂ ಇರುವ ದ್ವೇಷವನ್ನು ಅಂತ್ಯ ಮಾಡುವ ವ್ಯಕ್ತಿಯ ಪಾತ್ರದಲ್ಲಿ ಜೂ ಎನ್​ಟಿಆರ್ ನಟಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ