AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಟು ನಾಟು..’ ಇಷ್ಟಪಟ್ಟ ಎಲಾನ್ ಮಸ್ಕ್​; ನೂರಾರು ಟೆಸ್ಲಾ ಕಾರಲ್ಲಿ ಲೈಟ್​ ಶೋ

‘ಆಸ್ಕರ್​’ ಗೆದ್ದ ಬಳಿಕ ಈ ಹಾಡನ್ನು ವಿದೇಶಿಗರು ಕೇಳುತ್ತಿದ್ದಾರೆ. ಎಲಾನ್ ಮಸ್ಕ್​ ಕೂಡ ಈ ಹಾಡನ್ನು ಇಷ್ಟಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

‘ನಾಟು ನಾಟು..’ ಇಷ್ಟಪಟ್ಟ ಎಲಾನ್ ಮಸ್ಕ್​; ನೂರಾರು ಟೆಸ್ಲಾ ಕಾರಲ್ಲಿ ಲೈಟ್​ ಶೋ
ಎಲಾನ್ ಮಸ್ಕ್​,
ರಾಜೇಶ್ ದುಗ್ಗುಮನೆ
|

Updated on:Mar 21, 2023 | 10:57 AM

Share

‘ಆರ್​ಆರ್​ಆರ್​’ ಚಿತ್ರದ (RRR Movie) ‘ನಾಟು ನಾಟು..’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಭಾರತದಲ್ಲಿ ಸಿದ್ಧಗೊಂಡ ಹಾಡಿಗೆ ಅಕಾಡೆಮಿ ಪ್ರಶಸ್ತಿ ಸಿಕ್ಕಿದ್ದು ಇದೇ ಮೊದಲು. ಆಸ್ಕರ್ ಅವಾರ್ಡ್ ಸಿಕ್ಕ ನಂತರದಲ್ಲಿ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಹಾಗೂ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಅವರ ಖ್ಯಾತಿ ಹೆಚ್ಚಿದೆ. ಈ ಹಾಡನ್ನು ವಿಶ್ವದ ಅನೇಕರು ಇಷ್ಟಪಟ್ಟಿದ್ದಾರೆ. ವಿಶೇಷ ಎಂದರೆ, ಟ್ವಿಟರ್ ಸಿಇಒ ಎಲಾನ್ ಮಸ್ಕ್ ಅವರಿಗೂ ಈ ಹಾಡು ಇಷ್ಟವಾಗಿದೆ. ಅವರ ಒಡೆತನದ ಟೆಸ್ಲಾ ಕಾರಿನಲ್ಲಿ ವಿಶೇಷ ಲೈಟ್ ಶೋ ಕೂಡ ಮಾಡಿದ್ದಾರೆ.

‘ಆರ್​ಆರ್​ಆರ್’ ಸಿನಿಮಾ ಕಳೆದ ವರ್ಷ ಮಾರ್ಚ್ 25ರಂದು ತೆರೆಗೆ ಬಂತು. ಈ ಸಿನಿಮಾ ಸೂಪರ್​ಹಿಟ್ ಆಯಿತು. ಈ ಸಿನಿಮಾ ಆಸ್ಕರ್​ ಅವಾರ್ಡ್​ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿರಲಿಲ್ಲ. ಆದರೆ, ಫಾರ್​ ಯುವರ್ ಕನ್ಸಿಡರೇಷನ್ ಕ್ಯಾಂಪೇನ್ ಮೂಲಕ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ಗೆ ಆಯ್ಕೆ ಆಯಿತು. ನಂತರ ಶಾರ್ಟ್​ಲಿಸ್ಟ್ ಕೂಡ ಆಯಿತು. ಘಟಾನುಘಟಿ ಸಾಂಗ್ ಎದುರು ‘ಆರ್​ಆರ್​ಆರ್’ ಚಿತ್ರದ ಹಾಡು ಗೆದ್ದು ಬೀಗಿತು.

‘ಆಸ್ಕರ್​’ ಗೆದ್ದ ಬಳಿಕ ಈ ಹಾಡನ್ನು ವಿದೇಶಿಗರು ಕೇಳುತ್ತಿದ್ದಾರೆ. ಎಲಾನ್ ಮಸ್ಕ್​ ಕೂಡ ಈ ಹಾಡನ್ನು ಇಷ್ಟಪಟ್ಟಿದ್ದಾರೆ. ಟೆಸ್ಲಾ ಕಾರುಗಳನ್ನು ಒಂದು ಕಡೆ ನಿಲ್ಲಿಸಿ, ‘ನಾಟು ನಾಟು..’ ಹಾಡನ್ನು ಹಾಕಲಾಗಿದೆ. ಸಾಂಗ್​ನ ಬೀಟ್​ಗೆ ತಕ್ಕಂತೆ ಕಾರಿನ ಲೈಟ್ ಬ್ಲಿಂಕ್ ಆಗಿದೆ. ‘ನ್ಯೂಜರ್ಸಿಯಲ್ಲಿ ನಾಟು ನಾಟು ಹಾಡಿಗೆ ಟೆಸ್ಲಾ ಲೈಟ್ ಸಿಂಕ್​’ ಎಂದು ‘ಆರ್​ಆರ್​ಆರ್​’ ಸಿನಿಮಾದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಇದಕ್ಕೆ ಎಲಾನ್ ಮಸ್ಕ್​ ಕಮೆಂಟ್ ಮಾಡಿದ್ದು, ಹಾರ್ಟ್​ ಎಮೋಜಿ ಹಾಕಿದ್ದಾರೆ.

ಮಾರ್ಚ್ 12ರಂದು ಅಮೆರಿಕದ ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಿತು. ರಾಮ್​ ಚರಣ್, ಜೂ.ಎನ್​ಟಿಆರ್​, ರಾಜಮೌಳಿ, ಎಂಎಂ ಕೀರವಾಣಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದ ನಂತರ ರಾಜಮೌಳಿ ಅವರು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಅನೇಕರು ಭಾಗಿ ಆಗಿದ್ದರು. ಈಗ ಎಲ್ಲರೂ ಭಾರತಕ್ಕೆ ಮರಳಿದ್ದಾರೆ. ರಾಜಮೌಳಿ ಅವರು ಶೀಘ್ರವೇ ಹೊಸ ಸಿನಿಮಾ ಕೆಲಸಗಳಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:55 am, Tue, 21 March 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ