AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಟು ನಾಟು..’ ಇಷ್ಟಪಟ್ಟ ಎಲಾನ್ ಮಸ್ಕ್​; ನೂರಾರು ಟೆಸ್ಲಾ ಕಾರಲ್ಲಿ ಲೈಟ್​ ಶೋ

‘ಆಸ್ಕರ್​’ ಗೆದ್ದ ಬಳಿಕ ಈ ಹಾಡನ್ನು ವಿದೇಶಿಗರು ಕೇಳುತ್ತಿದ್ದಾರೆ. ಎಲಾನ್ ಮಸ್ಕ್​ ಕೂಡ ಈ ಹಾಡನ್ನು ಇಷ್ಟಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

‘ನಾಟು ನಾಟು..’ ಇಷ್ಟಪಟ್ಟ ಎಲಾನ್ ಮಸ್ಕ್​; ನೂರಾರು ಟೆಸ್ಲಾ ಕಾರಲ್ಲಿ ಲೈಟ್​ ಶೋ
ಎಲಾನ್ ಮಸ್ಕ್​,
ರಾಜೇಶ್ ದುಗ್ಗುಮನೆ
|

Updated on:Mar 21, 2023 | 10:57 AM

Share

‘ಆರ್​ಆರ್​ಆರ್​’ ಚಿತ್ರದ (RRR Movie) ‘ನಾಟು ನಾಟು..’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಭಾರತದಲ್ಲಿ ಸಿದ್ಧಗೊಂಡ ಹಾಡಿಗೆ ಅಕಾಡೆಮಿ ಪ್ರಶಸ್ತಿ ಸಿಕ್ಕಿದ್ದು ಇದೇ ಮೊದಲು. ಆಸ್ಕರ್ ಅವಾರ್ಡ್ ಸಿಕ್ಕ ನಂತರದಲ್ಲಿ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಹಾಗೂ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಅವರ ಖ್ಯಾತಿ ಹೆಚ್ಚಿದೆ. ಈ ಹಾಡನ್ನು ವಿಶ್ವದ ಅನೇಕರು ಇಷ್ಟಪಟ್ಟಿದ್ದಾರೆ. ವಿಶೇಷ ಎಂದರೆ, ಟ್ವಿಟರ್ ಸಿಇಒ ಎಲಾನ್ ಮಸ್ಕ್ ಅವರಿಗೂ ಈ ಹಾಡು ಇಷ್ಟವಾಗಿದೆ. ಅವರ ಒಡೆತನದ ಟೆಸ್ಲಾ ಕಾರಿನಲ್ಲಿ ವಿಶೇಷ ಲೈಟ್ ಶೋ ಕೂಡ ಮಾಡಿದ್ದಾರೆ.

‘ಆರ್​ಆರ್​ಆರ್’ ಸಿನಿಮಾ ಕಳೆದ ವರ್ಷ ಮಾರ್ಚ್ 25ರಂದು ತೆರೆಗೆ ಬಂತು. ಈ ಸಿನಿಮಾ ಸೂಪರ್​ಹಿಟ್ ಆಯಿತು. ಈ ಸಿನಿಮಾ ಆಸ್ಕರ್​ ಅವಾರ್ಡ್​ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿರಲಿಲ್ಲ. ಆದರೆ, ಫಾರ್​ ಯುವರ್ ಕನ್ಸಿಡರೇಷನ್ ಕ್ಯಾಂಪೇನ್ ಮೂಲಕ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ಗೆ ಆಯ್ಕೆ ಆಯಿತು. ನಂತರ ಶಾರ್ಟ್​ಲಿಸ್ಟ್ ಕೂಡ ಆಯಿತು. ಘಟಾನುಘಟಿ ಸಾಂಗ್ ಎದುರು ‘ಆರ್​ಆರ್​ಆರ್’ ಚಿತ್ರದ ಹಾಡು ಗೆದ್ದು ಬೀಗಿತು.

‘ಆಸ್ಕರ್​’ ಗೆದ್ದ ಬಳಿಕ ಈ ಹಾಡನ್ನು ವಿದೇಶಿಗರು ಕೇಳುತ್ತಿದ್ದಾರೆ. ಎಲಾನ್ ಮಸ್ಕ್​ ಕೂಡ ಈ ಹಾಡನ್ನು ಇಷ್ಟಪಟ್ಟಿದ್ದಾರೆ. ಟೆಸ್ಲಾ ಕಾರುಗಳನ್ನು ಒಂದು ಕಡೆ ನಿಲ್ಲಿಸಿ, ‘ನಾಟು ನಾಟು..’ ಹಾಡನ್ನು ಹಾಕಲಾಗಿದೆ. ಸಾಂಗ್​ನ ಬೀಟ್​ಗೆ ತಕ್ಕಂತೆ ಕಾರಿನ ಲೈಟ್ ಬ್ಲಿಂಕ್ ಆಗಿದೆ. ‘ನ್ಯೂಜರ್ಸಿಯಲ್ಲಿ ನಾಟು ನಾಟು ಹಾಡಿಗೆ ಟೆಸ್ಲಾ ಲೈಟ್ ಸಿಂಕ್​’ ಎಂದು ‘ಆರ್​ಆರ್​ಆರ್​’ ಸಿನಿಮಾದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಇದಕ್ಕೆ ಎಲಾನ್ ಮಸ್ಕ್​ ಕಮೆಂಟ್ ಮಾಡಿದ್ದು, ಹಾರ್ಟ್​ ಎಮೋಜಿ ಹಾಕಿದ್ದಾರೆ.

ಮಾರ್ಚ್ 12ರಂದು ಅಮೆರಿಕದ ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಿತು. ರಾಮ್​ ಚರಣ್, ಜೂ.ಎನ್​ಟಿಆರ್​, ರಾಜಮೌಳಿ, ಎಂಎಂ ಕೀರವಾಣಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದ ನಂತರ ರಾಜಮೌಳಿ ಅವರು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಅನೇಕರು ಭಾಗಿ ಆಗಿದ್ದರು. ಈಗ ಎಲ್ಲರೂ ಭಾರತಕ್ಕೆ ಮರಳಿದ್ದಾರೆ. ರಾಜಮೌಳಿ ಅವರು ಶೀಘ್ರವೇ ಹೊಸ ಸಿನಿಮಾ ಕೆಲಸಗಳಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:55 am, Tue, 21 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್