AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ನಟ ಇಮ್ರಾನ್ ಹಷ್ಮಿ ಕತ್ತಿಗೆ ಆಯ್ತು ದೊಡ್ಡ ಗಾಯ

‘ಗೂಡಚಾರಿ 2’ ಚಿತ್ರದ ಜಂಪ್ ದೃಶ್ಯವನ್ನು ಇಮ್ರಾನ್ ಶೂಟ್ ಮಾಡುತ್ತಿದ್ದರು. ಮೇಲಿನಿಂದ ಅವರು ಜಿಗಿಯುವಾಗ ಅವಘಡ ಸಂಭವಿಸಿದೆ. ಅವರ ಕತ್ತಿನ ಭಾಗದಲ್ಲಿ ಆಳವಾದ ಗಾಯ ಆಗಿದೆ. ಗಾಯದ ಬಳಿಕ ಪ್ರಥಮ ಚಿಕಿತ್ಸೆ ಮಾಡಿಕೊಂಡ ಅವರು ಶೂಟಿಂಗ್ ಮುಂದುವರಿಸಿದ್ದಾರೆ.

ಹೈದರಾಬಾದ್​ನಲ್ಲಿ ನಟ ಇಮ್ರಾನ್ ಹಷ್ಮಿ ಕತ್ತಿಗೆ ಆಯ್ತು ದೊಡ್ಡ ಗಾಯ
ಇಮ್ರಾನ್ ಹಷ್ಮಿ
ರಾಜೇಶ್ ದುಗ್ಗುಮನೆ
|

Updated on: Oct 08, 2024 | 2:53 PM

Share

ನಟ ಇಮ್ರಾನ್ ಹಷ್ಮಿ ಅವರು ಸದ್ಯ ದಕ್ಷಿಣ ಭಾರತದಲ್ಲಿ ಬ್ಯುಸಿ ಇದ್ದಾರೆ. ಅವರು ‘ಗೂಡಾಚಾರಿ 2’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟ್ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಆ್ಯಕ್ಷನ್ ದೃಶ್ಯದ ಶೂಟ್​ ವೇಳೆ ಅವರ ಕತ್ತಿಗೆ ಗಾಯ ಆಗಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರ ಕತ್ತಿಂದ ರಕ್ತ ಹರಿಯುತ್ತಿದೆ.

ಜಂಪ್ ದೃಶ್ಯವನ್ನು ಇಮ್ರಾನ್ ಶೂಟ್ ಮಾಡುತ್ತಿದ್ದರು. ಮೇಲಿನಿಂದ ಅವರು ಜಿಗಿಯುವಾಗ ಅವಘಡ ಸಂಭವಿಸಿದೆ. ಅವರ ಕತ್ತಿನ ಭಾಗದಲ್ಲಿ ಆಳವಾದ ಗಾಯ ಆಗಿದೆ. ಗಾಯದ ಬಳಿಕ ಪ್ರಥಮ ಚಿಕಿತ್ಸೆ ಮಾಡಿಕೊಂಡ ಅವರು ಶೂಟಿಂಗ್ ಮುಂದುವರಿಸಿದ್ದಾರೆ.

ಈ ರೀತಿ ರಕ್ತ ಬಂದಾಗ ಅದು ನ್ಯಾಚುರಲ್ ಆಗಿ ಕಾಣುತ್ತದೆ ಎಂಬ ಅಭಿಪ್ರಾಯವನ್ನು ಇಮ್ರಾನ್ ಹಷ್ಮಿ ಹೊರಹಾಕಿದ್ದಾರಂತೆ. ಇಷ್ಟೇ ಅಲ್ಲ, ಇವರು ಆಸ್ಪತ್ರೆ ದಾಖಲಾದರೆ ಅಥವಾ ವಿಶ್ರಾಂತಿ ಪಡೆಯೋ ನಿರ್ಧಾರ ತೆಗೆದುಕೊಂಡರೆ ಸಿನಿಮಾದ ಕೆಲಸಗಳು ವಿಳಂಬ ಆಗಲಿವೆ. ಈ ಕಾರಣಕ್ಕೆ ಅವರು ಶೂಟ್​ನಲ್ಲಿ ಭಾಗವಹಿಸಿದ್ದಾರೆ.  ಈ ಬಗ್ಗೆ ಅವರ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ.

‘ಗೂಡಾಚಾರಿ 2’ ಚಿತ್ರವನ್ನು ವಿನಯ್ ಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ನಿರ್ದೇಶನದಲ್ಲಿ ಅವರಿಗೆ ಇದು ಮೊದಲ ಅನುಭವ. ತೆಲುಗಿನಲ್ಲಿ ಹಿಟ್ ಆದ ಅಡಿವಿ ಶೇಷ್ ಅವರ ‘ಗೂಡಾಚಾರಿ’ ಚಿತ್ರದ ಸೀಕ್ವೆಲ್ ಇದಾಗಿದೆ. ಈ ಚಿತ್ರದಲ್ಲೂ ಅಡಿವಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಮ್ರಾನ್ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಶೋಭಿತಾ ಧುಲಿಪಾಲ್ ಹೀರೋಯಿನ್ ಆದರೆ, ಜಗಪತಿ ಬಾಬು ವಿಲನ್ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಅನಾವರಣ ಆಯಿತು ಇಮ್ರಾನ್ ಹಷ್ಮಿ ಕಿಸ್ಸಿಂಗ್ ಅವತಾರ; ಮೌನಿ ರಾಯ್ ಜೊತೆ ಬೋಲ್ಡ್ ದೃಶ್ಯ

ಇಮ್ರಾನ್ ಹಷ್ಮಿ ಈ ಮೊದಲು ‘ಟೈಗರ್ 3’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮೊದಲಾದವರು ನಟಿಸಿದ್ದರು. ಅವರು ಕರಣ್ ಜೋಹರ್ ನಿರ್ಮಾಣದ ‘ಶೋ ಟೈಮ್’ನಲ್ಲಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು