AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಡೀ ಬಾಲಿವುಡ್ ಒಂದು ಕಡೆಯಾದರೆ, ಇಮ್ರಾನ್ ಹಶ್ಮಿ ಒಂದು ಕಡೆ’

ಆರ್ಯನ್ ಖಾನ್ ನಿರ್ದೇಶಿಸಿದ "ಬ್ಯಾಡ್ಸ್ ಆಫ್ ಬಾಲಿವುಡ್" ವೆಬ್ ಸರಣಿಯಲ್ಲಿ ಇಮ್ರಾನ್ ಹಶ್ಮಿ ಅವರ ಬಾಲಿವುಡ್‌ನಲ್ಲಿನ ಪ್ರಭಾವ ಮತ್ತು ಪ್ರಸ್ತುತ ಸ್ಥಿತಿಯನ್ನು ಚರ್ಚಿಸಲಾಗಿದೆ. ಒಂದು ಕಾಲದಲ್ಲಿ ಸೂಪರ್ ಸ್ಟಾರ್ ಆಗಿದ್ದ ಇಮ್ರಾನ್ ಹಶ್ಮಿ ಈಗ ಹಿಂದಿನಷ್ಟು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಆದರೆ, ಅವರ ಚಾರ್ಮ್ ಕಡಿಮೆ ಆಗಿಲ್ಲ.

‘ಇಡೀ ಬಾಲಿವುಡ್ ಒಂದು ಕಡೆಯಾದರೆ, ಇಮ್ರಾನ್ ಹಶ್ಮಿ ಒಂದು ಕಡೆ’
ಇಮ್ರಾನ್ ಹಶ್ಮಿ
ರಾಜೇಶ್ ದುಗ್ಗುಮನೆ
|

Updated on: Sep 20, 2025 | 3:04 PM

Share

ಬಾಲಿವುಡ್ ಚಿತ್ರರಂಗದಲ್ಲಿ ಮಿಂಚಿ ಗಮನ ಸೆಳೆದವರು ಇಮ್ರಾನ್ ಹಶ್ಮಿ. ಈಗ ಅವರಿಗೆ ಮೊದಲಿನಷ್ಟು ಆಫರ್ ಇಲ್ಲ ನಿಜ, ಆದರೆ, ಒಂದು ಕಾಲದಲ್ಲಿ ಅವರು ಮಿಂಚು ಹರಿಸಿದವರು. ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದರು. ಅವರು ಸೀರಿಯಲ್ ಕಿಸ್ಸರ್ ಎಂದೇ ಫೇಮಸ್ ಆಗಿದ್ದರು. ಬಾಲಿವುಡ್​ನಲ್ಲಿ ಅವರ ತೂಕ ಎಷ್ಟು ಹೊಂದಿದ್ದಾರೆ ಎಂಬುದನ್ನು ಆರ್ಯನ್ ಖಾನ್ ಹೇಳಿದ್ದಾರೆ. ಹಾಗಂತ ಅವರು ನೇರವಾಗಿ ಹೇಳಿಕೆ ನೀಡಿಲ್ಲ. ‘ಬ್ಯಾಡ್ಸ್ ಆಫ್ ಬಾಲಿವಡ್’ ಸರಣಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ.

ಕಥಾ ನಾಯಕನ ಗೆಳೆಯನ ಪಾತ್ರದಲ್ಲಿ ಧ್ರುವ್ ಜುರೇಲ್ ನಟಿಸಿದ್ದಾರೆ. ಅವರು ಮಾಡಿದ ಪಾತ್ರದ ಹೆಸರು ಪರ್ವೇಜ್. ಈತ ಪಕ್ಕಾ ಇಮ್ರಾನ್ ಹಶ್ಮಿ ಅಭಿಮಾನಿ. ಸದಾ ಇಮ್ರಾನ್ ಹಶ್ಮಿಯ ಜಪ ಮಾಡುತ್ತಾ ಇರುತ್ತಾನೆ. ಆತ ಕಾರಿನಲ್ಲಿ ಸಾಗುವಾಗ, ‘ರಣವೀರ್ ಸಿಂಗ್ ಕೊಟ್ಟ ವಾಚ್ ಮಾರಿ ಕಾರನ್ನು ಮಾರ್ಪಾಡು ಮಾಡಿದೆ’ ಎಂದು ಹೇಳುತ್ತಾನೆ. ಆದರೆ, ಕಾರಿನಲ್ಲಿ ಇಮ್ರಾನ್ ಹಶ್ಮಿ ಫೋಟೋ ಇರುತ್ತದೆ.

ಇದಕ್ಕೆ ಹಿಂದೆ ಕುಳಿತವಳು, ‘ಕಾರನ್ನು ಮಾರ್ಪಾಡು ಮಾಡಲು ರಣವೀರ್ ಸಿಂಗ್ ಹಣ ಬಳಕೆ ಮಾಡಿಕೊಂಡಿದ್ದೀಯಾ. ಆದರೆ, ಕಾರಲ್ಲಿ ಫೋಟೋ ಮಾತ್ರ ಇಮ್ರಾನ್ ಹಶ್ಮಿದಾ’ ಎಂದು ಪ್ರಶ್ನೆ ಮಾಡುತ್ತಾಳೆ. ಆಗ ಪರ್ವೇಜ್ ಹೇಳೋದು ಒಂದೇ ಮಾತು, ‘ಇಡೀ ಬಾಲಿವುಡ್ ಒಂದು ಕಡೆಯಾದರೆ, ಇಮ್ರಾನ್ ಹಶ್ಮಿ ಒಂದು ಕಡೆ’. ಈ ವೆಬ್ ಸರಣಿಯಲ್ಲಿ ಪರ್ವೇಜ್ ನಿಜವಾಗಲೂ ಇಮ್ರಾನ್ ಹಶ್ಮಿಯನ್ನು ಭೇಟಿ ಆಗುವ ಪರಿಸ್ಥಿತಿ ಬರುತ್ತದೆ. ಆಗಲೂ ಈತ ಹೇಳೋದು ಅದನ್ನೇ.

ಇದನ್ನೂ ಓದಿ: ಸಖತ್ ಚಿಲ್ ಆಗಿದೆ ‘ಬ್ಯಾಡ್ಸ್ ಆಫ್ ಬಾಲಿವುಡ್’; ಹೈಲೈಟ್ಸ್ ಏನು?

‘ಬ್ಯಾಡ್ಸ್ ಆಫಿ ಬಾಲಿವುಡ್’ ನಿರ್ದೇಶನ ಮಾಡಿದ್ದು ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್. ಬಾಲಿವುಡ್​ನ ಹಲವು ವರ್ಷಗಳಿಂದ ಅವರು ಹತ್ತಿರದಿಂದ ಕಂಡಿದ್ದಾರೆ. ಅವರ ಮನಸ್ಸಿಗೂ ಈ ರೀತಿ ಅನಿಸಿರಬಹುದು ಎಂದು ಅನೇಕರು ಹೇಳಿದ್ದಾರೆ. ಇಮ್ರಾನ್ ಹಶ್ಮಿ ಫ್ಯಾನ್ಸ್ ಈ ದೃಶ್ಯದಿಂದ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ