AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಡೀ ಬಾಲಿವುಡ್ ಒಂದು ಕಡೆಯಾದರೆ, ಇಮ್ರಾನ್ ಹಶ್ಮಿ ಒಂದು ಕಡೆ’

ಆರ್ಯನ್ ಖಾನ್ ನಿರ್ದೇಶಿಸಿದ "ಬ್ಯಾಡ್ಸ್ ಆಫ್ ಬಾಲಿವುಡ್" ವೆಬ್ ಸರಣಿಯಲ್ಲಿ ಇಮ್ರಾನ್ ಹಶ್ಮಿ ಅವರ ಬಾಲಿವುಡ್‌ನಲ್ಲಿನ ಪ್ರಭಾವ ಮತ್ತು ಪ್ರಸ್ತುತ ಸ್ಥಿತಿಯನ್ನು ಚರ್ಚಿಸಲಾಗಿದೆ. ಒಂದು ಕಾಲದಲ್ಲಿ ಸೂಪರ್ ಸ್ಟಾರ್ ಆಗಿದ್ದ ಇಮ್ರಾನ್ ಹಶ್ಮಿ ಈಗ ಹಿಂದಿನಷ್ಟು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಆದರೆ, ಅವರ ಚಾರ್ಮ್ ಕಡಿಮೆ ಆಗಿಲ್ಲ.

‘ಇಡೀ ಬಾಲಿವುಡ್ ಒಂದು ಕಡೆಯಾದರೆ, ಇಮ್ರಾನ್ ಹಶ್ಮಿ ಒಂದು ಕಡೆ’
ಇಮ್ರಾನ್ ಹಶ್ಮಿ
ರಾಜೇಶ್ ದುಗ್ಗುಮನೆ
|

Updated on: Sep 20, 2025 | 3:04 PM

Share

ಬಾಲಿವುಡ್ ಚಿತ್ರರಂಗದಲ್ಲಿ ಮಿಂಚಿ ಗಮನ ಸೆಳೆದವರು ಇಮ್ರಾನ್ ಹಶ್ಮಿ. ಈಗ ಅವರಿಗೆ ಮೊದಲಿನಷ್ಟು ಆಫರ್ ಇಲ್ಲ ನಿಜ, ಆದರೆ, ಒಂದು ಕಾಲದಲ್ಲಿ ಅವರು ಮಿಂಚು ಹರಿಸಿದವರು. ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದರು. ಅವರು ಸೀರಿಯಲ್ ಕಿಸ್ಸರ್ ಎಂದೇ ಫೇಮಸ್ ಆಗಿದ್ದರು. ಬಾಲಿವುಡ್​ನಲ್ಲಿ ಅವರ ತೂಕ ಎಷ್ಟು ಹೊಂದಿದ್ದಾರೆ ಎಂಬುದನ್ನು ಆರ್ಯನ್ ಖಾನ್ ಹೇಳಿದ್ದಾರೆ. ಹಾಗಂತ ಅವರು ನೇರವಾಗಿ ಹೇಳಿಕೆ ನೀಡಿಲ್ಲ. ‘ಬ್ಯಾಡ್ಸ್ ಆಫ್ ಬಾಲಿವಡ್’ ಸರಣಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ.

ಕಥಾ ನಾಯಕನ ಗೆಳೆಯನ ಪಾತ್ರದಲ್ಲಿ ಧ್ರುವ್ ಜುರೇಲ್ ನಟಿಸಿದ್ದಾರೆ. ಅವರು ಮಾಡಿದ ಪಾತ್ರದ ಹೆಸರು ಪರ್ವೇಜ್. ಈತ ಪಕ್ಕಾ ಇಮ್ರಾನ್ ಹಶ್ಮಿ ಅಭಿಮಾನಿ. ಸದಾ ಇಮ್ರಾನ್ ಹಶ್ಮಿಯ ಜಪ ಮಾಡುತ್ತಾ ಇರುತ್ತಾನೆ. ಆತ ಕಾರಿನಲ್ಲಿ ಸಾಗುವಾಗ, ‘ರಣವೀರ್ ಸಿಂಗ್ ಕೊಟ್ಟ ವಾಚ್ ಮಾರಿ ಕಾರನ್ನು ಮಾರ್ಪಾಡು ಮಾಡಿದೆ’ ಎಂದು ಹೇಳುತ್ತಾನೆ. ಆದರೆ, ಕಾರಿನಲ್ಲಿ ಇಮ್ರಾನ್ ಹಶ್ಮಿ ಫೋಟೋ ಇರುತ್ತದೆ.

ಇದಕ್ಕೆ ಹಿಂದೆ ಕುಳಿತವಳು, ‘ಕಾರನ್ನು ಮಾರ್ಪಾಡು ಮಾಡಲು ರಣವೀರ್ ಸಿಂಗ್ ಹಣ ಬಳಕೆ ಮಾಡಿಕೊಂಡಿದ್ದೀಯಾ. ಆದರೆ, ಕಾರಲ್ಲಿ ಫೋಟೋ ಮಾತ್ರ ಇಮ್ರಾನ್ ಹಶ್ಮಿದಾ’ ಎಂದು ಪ್ರಶ್ನೆ ಮಾಡುತ್ತಾಳೆ. ಆಗ ಪರ್ವೇಜ್ ಹೇಳೋದು ಒಂದೇ ಮಾತು, ‘ಇಡೀ ಬಾಲಿವುಡ್ ಒಂದು ಕಡೆಯಾದರೆ, ಇಮ್ರಾನ್ ಹಶ್ಮಿ ಒಂದು ಕಡೆ’. ಈ ವೆಬ್ ಸರಣಿಯಲ್ಲಿ ಪರ್ವೇಜ್ ನಿಜವಾಗಲೂ ಇಮ್ರಾನ್ ಹಶ್ಮಿಯನ್ನು ಭೇಟಿ ಆಗುವ ಪರಿಸ್ಥಿತಿ ಬರುತ್ತದೆ. ಆಗಲೂ ಈತ ಹೇಳೋದು ಅದನ್ನೇ.

ಇದನ್ನೂ ಓದಿ: ಸಖತ್ ಚಿಲ್ ಆಗಿದೆ ‘ಬ್ಯಾಡ್ಸ್ ಆಫ್ ಬಾಲಿವುಡ್’; ಹೈಲೈಟ್ಸ್ ಏನು?

‘ಬ್ಯಾಡ್ಸ್ ಆಫಿ ಬಾಲಿವುಡ್’ ನಿರ್ದೇಶನ ಮಾಡಿದ್ದು ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್. ಬಾಲಿವುಡ್​ನ ಹಲವು ವರ್ಷಗಳಿಂದ ಅವರು ಹತ್ತಿರದಿಂದ ಕಂಡಿದ್ದಾರೆ. ಅವರ ಮನಸ್ಸಿಗೂ ಈ ರೀತಿ ಅನಿಸಿರಬಹುದು ಎಂದು ಅನೇಕರು ಹೇಳಿದ್ದಾರೆ. ಇಮ್ರಾನ್ ಹಶ್ಮಿ ಫ್ಯಾನ್ಸ್ ಈ ದೃಶ್ಯದಿಂದ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?