AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸುಮಾರು 250 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಚಿತ್ರದ ನಿರ್ಮಾಪಕರು ಈಗ ತೊಂದರೆ ಎದುರಾಗಿದೆ. ಎರ್ನಾಕುಲಂನ ಮರಾಡು ಪೊಲೀಸ್ ಠಾಣೆಯವರು ಕೇರಳ ಹೈಕೋರ್ಟ್​ಗೆ ವರದಿ ಒಂದನ್ನು ಸಲ್ಲಿಕೆ ಮಾಡಿದ್ದರು.

‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್
‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್
ರಾಜೇಶ್ ದುಗ್ಗುಮನೆ
|

Updated on: Jun 13, 2024 | 10:51 AM

Share

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ‘ಮಂಜುಮ್ಮೇಲ್ ಬಾಯ್ಸ್’ (Manjummel Boys) ನಿರ್ಮಾಪಕರು ಸಂಕಷ್ಟ ಎದುರಿಸಿದ್ದಾರೆ. ಈ ಸಿನಿಮಾದ ನಿರ್ಮಾಪಕರಾದ ಸೌಬಿನ್ ಶಾಹಿರ್, ಶಾನ್ ಆ್ಯಂಥೋನಿ, ಬಾಬು ಶಾಹಿರ್​ಗೆ ನೋಟಿಸ್ ನೀಡಲಾಗಿದೆ. ಕೊಚ್ಚಿಯಲ್ಲಿರುವ ಇವರ ಕಚೇರಿಗೆ ನೋಟಿಸ್ ಹೋಗಿದೆ. ಇವರು ಶೀಘ್ರವೇ ‘ಇಡಿ’ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕಿದೆ.

ಎರ್ನಾಕುಲಂನ ಮರಾಡು ಪೊಲೀಸ್ ಠಾಣೆಯವರು ಕೇರಳ ಹೈಕೋರ್ಟ್​ಗೆ ವರದಿ ಒಂದನ್ನು ಸಲ್ಲಿಕೆ ಮಾಡಿದ್ದರು. ‘ಮಂಜುಮ್ಮೇಲ್ ಬಾಯ್ಸ್’ ತಂಡದವರು ಹಗರಣ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

ಈ ಚಿತ್ರಕ್ಕೆ ಸಿರಾಜ್ ಎಂಬ ವ್ಯಕ್ತಿ 7 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರು. ಸಿನಿಮಾದಿಂದ ಬಂದ ಒಟ್ಟೂ ಲಾಭದಲ್ಲಿ ಶೇ. 40ರಷ್ಟು ಲಾಭವನ್ನು ಇವರಿಗೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಆದರೆ, ಹೂಡಿಕೆದಾರ ಸಿರಾಜ್​ಗೆ ಈ ಮೊತ್ತ ಸಿಕ್ಕಿಲ್ಲ. ಅವರಿಗೆ ಕೇವಲ 50 ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ ಎನ್ನಲಾಗಿದೆ. ಈ ಚಿತ್ರ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಕಮರ್ಷಿಯಲ್ ಕೋರ್ಟ್​ಗೆ ಸಿರಾಜ್ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಬಳಿಕ ಅವರು ಮರಾಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದರು. ತಮಗೆ ಮೋಸ ಆಗಿದೆ ಎಂದು ಅವರು ಹೇಳಿದ್ದರು. ಈಗ ಜಾರಿ ನಿರ್ದೇಶನಾಲಯದ ನೋಟಿಸ್​ಗೆ ನಿರ್ಮಾಪಕರು ಯಾವ ರೀತಿ ಉತ್ತರಿಸುತ್ತಾರೆ ನೋಡಬೇಕಿದೆ.

ಇದನ್ನೂ ಓದಿ: ‘ಈ ವರ್ಷದ ಫೇವರಿಟ್ ಸಿನಿಮಾ’; ಒಟಿಟಿಯಲ್ಲಿ ‘ಮಂಜುಮ್ಮೇಲ್ ಬಾಯ್ಸ್’ ನೋಡಿ ಹೊಗಳಿದ ಸ್ಟಾರ್ ನಟ 

ಮೇ ತಿಂಗಳಲ್ಲಿ ಈ ಸಿನಿಮಾ ತಂಡಕ್ಕೆ ಸಂಕಷ್ಟ ಎದುರಾಗಿತ್ತು. ‘ಗುಣ’ ಚಿತ್ರದ ಗೀತೆ ಬಳಸಿದ್ದಕ್ಕೆ ಇಳಯರಾಜ ಅವರು ತಂಡದ ಮೇಲೆ ಕೇಸ್ ಹಾಕಿದ್ದರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್