AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸುಮಾರು 250 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಚಿತ್ರದ ನಿರ್ಮಾಪಕರು ಈಗ ತೊಂದರೆ ಎದುರಾಗಿದೆ. ಎರ್ನಾಕುಲಂನ ಮರಾಡು ಪೊಲೀಸ್ ಠಾಣೆಯವರು ಕೇರಳ ಹೈಕೋರ್ಟ್​ಗೆ ವರದಿ ಒಂದನ್ನು ಸಲ್ಲಿಕೆ ಮಾಡಿದ್ದರು.

‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್
‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್
ರಾಜೇಶ್ ದುಗ್ಗುಮನೆ
|

Updated on: Jun 13, 2024 | 10:51 AM

Share

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ‘ಮಂಜುಮ್ಮೇಲ್ ಬಾಯ್ಸ್’ (Manjummel Boys) ನಿರ್ಮಾಪಕರು ಸಂಕಷ್ಟ ಎದುರಿಸಿದ್ದಾರೆ. ಈ ಸಿನಿಮಾದ ನಿರ್ಮಾಪಕರಾದ ಸೌಬಿನ್ ಶಾಹಿರ್, ಶಾನ್ ಆ್ಯಂಥೋನಿ, ಬಾಬು ಶಾಹಿರ್​ಗೆ ನೋಟಿಸ್ ನೀಡಲಾಗಿದೆ. ಕೊಚ್ಚಿಯಲ್ಲಿರುವ ಇವರ ಕಚೇರಿಗೆ ನೋಟಿಸ್ ಹೋಗಿದೆ. ಇವರು ಶೀಘ್ರವೇ ‘ಇಡಿ’ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕಿದೆ.

ಎರ್ನಾಕುಲಂನ ಮರಾಡು ಪೊಲೀಸ್ ಠಾಣೆಯವರು ಕೇರಳ ಹೈಕೋರ್ಟ್​ಗೆ ವರದಿ ಒಂದನ್ನು ಸಲ್ಲಿಕೆ ಮಾಡಿದ್ದರು. ‘ಮಂಜುಮ್ಮೇಲ್ ಬಾಯ್ಸ್’ ತಂಡದವರು ಹಗರಣ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

ಈ ಚಿತ್ರಕ್ಕೆ ಸಿರಾಜ್ ಎಂಬ ವ್ಯಕ್ತಿ 7 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರು. ಸಿನಿಮಾದಿಂದ ಬಂದ ಒಟ್ಟೂ ಲಾಭದಲ್ಲಿ ಶೇ. 40ರಷ್ಟು ಲಾಭವನ್ನು ಇವರಿಗೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಆದರೆ, ಹೂಡಿಕೆದಾರ ಸಿರಾಜ್​ಗೆ ಈ ಮೊತ್ತ ಸಿಕ್ಕಿಲ್ಲ. ಅವರಿಗೆ ಕೇವಲ 50 ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ ಎನ್ನಲಾಗಿದೆ. ಈ ಚಿತ್ರ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಕಮರ್ಷಿಯಲ್ ಕೋರ್ಟ್​ಗೆ ಸಿರಾಜ್ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಬಳಿಕ ಅವರು ಮರಾಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದರು. ತಮಗೆ ಮೋಸ ಆಗಿದೆ ಎಂದು ಅವರು ಹೇಳಿದ್ದರು. ಈಗ ಜಾರಿ ನಿರ್ದೇಶನಾಲಯದ ನೋಟಿಸ್​ಗೆ ನಿರ್ಮಾಪಕರು ಯಾವ ರೀತಿ ಉತ್ತರಿಸುತ್ತಾರೆ ನೋಡಬೇಕಿದೆ.

ಇದನ್ನೂ ಓದಿ: ‘ಈ ವರ್ಷದ ಫೇವರಿಟ್ ಸಿನಿಮಾ’; ಒಟಿಟಿಯಲ್ಲಿ ‘ಮಂಜುಮ್ಮೇಲ್ ಬಾಯ್ಸ್’ ನೋಡಿ ಹೊಗಳಿದ ಸ್ಟಾರ್ ನಟ 

ಮೇ ತಿಂಗಳಲ್ಲಿ ಈ ಸಿನಿಮಾ ತಂಡಕ್ಕೆ ಸಂಕಷ್ಟ ಎದುರಾಗಿತ್ತು. ‘ಗುಣ’ ಚಿತ್ರದ ಗೀತೆ ಬಳಸಿದ್ದಕ್ಕೆ ಇಳಯರಾಜ ಅವರು ತಂಡದ ಮೇಲೆ ಕೇಸ್ ಹಾಕಿದ್ದರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ