AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ-ಪ್ರೇಮ ಬಗ್ಗೆ ಹಬ್ಬಿದ್ದ ವದಂತಿಯಿಂದ ಹುಟ್ಟಿತ್ತು ‘ಕರಿಮಣಿ ಮಾಲೀಕ..’ ಹಾಡು; ಇದರ ಹಿಂದಿದೆ ಬೇರೆಯದೇ ಕಥೆ  

‘ಉಪೇಂದ್ರ’ ಚಿತ್ರ ರಿಲೀಸ್ ಆಗಿದ್ದು 1999ರ ಅಕ್ಟೋಬರ್ 22ರಂದು. ಉಪೇಂದ್ರ ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಅಂದಿನ ಕಾಲದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರಕ್ಕೆ ಎಆರ್​ ರೆಹಮಾನ್ ಅವರನ್ನು ಕರೆತರಬೇಕು ಎಂಬ ಆಲೋಚನೆ ಉಪೇಂದ್ರಗೆ ಇತ್ತು.

ಉಪೇಂದ್ರ-ಪ್ರೇಮ ಬಗ್ಗೆ ಹಬ್ಬಿದ್ದ ವದಂತಿಯಿಂದ ಹುಟ್ಟಿತ್ತು ‘ಕರಿಮಣಿ ಮಾಲೀಕ..’ ಹಾಡು; ಇದರ ಹಿಂದಿದೆ ಬೇರೆಯದೇ ಕಥೆ  
ಉಪೇಂದ್ರ-ಗುರುಕಿರಣ್
ರಾಜೇಶ್ ದುಗ್ಗುಮನೆ
|

Updated on: Feb 09, 2024 | 7:30 AM

Share

‘ಏನಿಲ್ಲ ಏನಿಲ್ಲ..’ ಹಾಡು ಸಖತ್ ವೈರಲ್ ಆಗಿದೆ. ಇನ್​ಸ್ಟಾಗ್ರಾಮ್ ಓಪನ್ ಮಾಡಿದರೆ ರೀಲ್ಸ್​​ಗಳಲ್ಲಿ ಈ ಹಾಡು ರಾರಾಜಿಸುತ್ತಿದೆ. ಈ ಹಾಡಿಗೆ ಬೇರೆ ಬೇರೆ ವರ್ಷನ್​ಗಳನ್ನು ಸೃಷ್ಟಿ ಮಾಡಲಾಗುತ್ತಿದೆ. ಇದು ‘ಉಪೇಂದ್ರ’ ಸಿನಿಮಾದ ಹಾಡು. ಈ ಚಿತ್ರ ರಿಲೀಸ್ ಆಗಿ 25 ವರ್ಷ ಪೂರ್ಣಗೊಳ್ಳುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಹಾಡಿನ ಬಗ್ಗೆ ಇರೋ ಕ್ರೇಜ್ ಕಡಿಮೆ ಆಗಿಲ್ಲ. ಈ ಹಾಡನ್ನು ಬರೆದಿದ್ದು ಏಕೆ? ಮೊದಲು ಇದ್ದ ಸಾಹಿತ್ಯ ಏನು ಎಂಬ ಬಗ್ಗೆ ಗುರುಕಿರಣ್ (Gurukiran) ಅವರು ‘ಕಲಾಮಾಧ್ಯಮ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

‘ಉಪೇಂದ್ರ’ ಸಿನಿಮಾ ರಿಲೀಸ್ ಆಗಿದ್ದು 1999ರ ಅಕ್ಟೋಬರ್ 22ರಂದು. ಉಪೇಂದ್ರ ಅವರು ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ಅಂದಿನ ಕಾಲದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾಗೆ ಎಆರ್​ ರೆಹಮಾನ್ ಅವರನ್ನು ಕರೆತರಬೇಕು ಎಂಬ ಆಲೋಚನೆ ಉಪೇಂದ್ರ ಅವರಿಗೆ ಇತ್ತು. ಅನು ಮಲ್ಲಿಕ್ ಅವರ ಬಳಿಯೂ ಹೋಗಿ ಕೇಳಲಾಯಿತು. ಯಾರೂ ಸಿಗದಿದ್ದಾಗ ‘ಉಪೇಂದ್ರ’ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದು ಸಂಗೀತ ನಿರ್ದೇಶಕ ಗುರುಕಿರಣ್.

‘ಸೂರತ್ಕಲ್​ಗೆ ತೆರಳಿದ್ದೆವು. ಅಲ್ಲಿ ಉಳಿದುಕೊಂಡು ಈ ಚಿತ್ರದ ಸಾಂಗ್​ಗಳನ್ನು​ ಕಂಪೋಸ್ ಮಾಡಿದ್ದೆವು. ಎಂಟಿವಿ ಹಾಡನ್ನು ಮೊದಲು ರೆಕಾರ್ಡ್ ಮಾಡಿದೆವು. ಉಪೇಂದ್ರ ಹಾಗೂ ಪ್ರೇಮಾ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವದಂತಿ ಹಬ್ಬಿತ್ತು. ಈ ಕಾರಣಕ್ಕೆ ‘ಏನಿಲ್ಲ ಏನೇನೂ ಇಲ್ಲ’ ಎಂದು ಉಪೇಂದ್ರ ಸಾಲುಗಳನ್ನು ನೀಡಿದರು. ಇಬ್ಬರೂ ಒಟ್ಟಿಗೆ ಆ್ಯಕ್ಟ್ ಮಾಡಿದ್ದರಿಂದ ಈ ಸಾಲುಗಳನ್ನು ಅವರು ಬರೆದರು’ ಎಂದಿದ್ದರು ಗುರುಕಿರಣ್. ನಂತರ ಈ ಹಾಡಿನ ಸಾಹಿತ್ಯವನ್ನು ‘ಏನಿಲ್ಲ ಏನಿಲ್ಲ..’ ಎಂದು ಬದಲಾಯಿಸಲಾಯಿತು.

ಇದನ್ನೂ ಓದಿ: ‘ಏನಿಲ್ಲ.. ಹಾಡಿಗೆ ಸಿಕ್ಕಿತ್ತು ಭರ್ಜರಿ ಮೊತ್ತ’; ಗುರುಕಿರಣ್ ನೀಡಿದರು ಮಾಹಿತಿ

‘ಏನಿಲ್ಲ.. ಎಂದು ಹೇಳುತ್ತಿದ್ದಂತೆ ಅರ್ಧ ಗಂಟೆಗೆ ಸಂಪೂರ್ಣ ಟ್ಯೂನ್ ರೆಡಿ ಆಯಿತು. ಇದೆಲ್ಲ ರೆಡಿ ಆಗಿದ್ದು ಮಧ್ಯರಾತ್ರಿಯಲ್ಲಿ. ನಾವು ರಾತ್ರಿ ಕುಳಿತು ಟ್ಯೂನ್ ಕಂಪೋಸ್ ಮಾಡುತ್ತಿದ್ದೆವು. ಟ್ಯೂನ್ ರೆಡಿ ಆದ ಖುಷಿಗೆ ಹೋಗಿ ಟೀ ಕುಡಿದು ಬಂದೆವು’ ಎಂದು ಗುರುಕಿರಣ್ ಅವರು ಹಳೆಯ ಘಟನೆ ತೆರೆದಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು