AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿಯಲ್ಲಿ 21 ವರ್ಷ ಕೆಲಸ; ಈಗ ಸ್ಟಾರ್​ ಸಿನಿಮಾದಲ್ಲಿ ವಿಲನ್​: ಅಪರೂಪದ ಪ್ರತಿಭೆ ನಿತಿನ್​

Akhanda Movie: ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ’ ಚಿತ್ರ ಡಿ.2ರಂದು ತೆರೆಕಾಣಲಿದೆ. ಈ ಚಿತ್ರದಲ್ಲಿ ನಿತಿನ್​ ಮೆಹ್ತಾ ಅವರಿಗೆ ವಿಶೇಷ ಗೆಟಪ್​ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ.

ಮಿಲಿಟರಿಯಲ್ಲಿ 21 ವರ್ಷ ಕೆಲಸ; ಈಗ ಸ್ಟಾರ್​ ಸಿನಿಮಾದಲ್ಲಿ ವಿಲನ್​: ಅಪರೂಪದ ಪ್ರತಿಭೆ ನಿತಿನ್​
ನಿತಿನ್ ಮೆಹ್ತಾ
TV9 Web
| Edited By: |

Updated on: Nov 21, 2021 | 9:30 AM

Share

ಬಣ್ಣದ ಲೋಕದ ಸೆಳೆತಕ್ಕೆ ಇರುವ ಶಕ್ತಿ ದೊಡ್ಡದು. ಎಲ್ಲ ಕ್ಷೇತ್ರದವರನ್ನೂ ಸಿನಿಮಾರಂಗ ತನ್ನತ್ತ ಸೆಳೆದುಕೊಳ್ಳುತ್ತದೆ. ಅದಕ್ಕೆ ಹೊಸ ಉದಾಹರಣೆ ‘ಅಖಂಡ’ ಸಿನಿಮಾದಲ್ಲಿದೆ. ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿನಯದ ಈ ಚಿತ್ರದಲ್ಲಿ ಹೊಸ ಪ್ರತಿಭೆ ನಿತಿನ್​ ಮೆಹ್ತಾ ಅಭಿನಯಿಸಿದ್ದಾರೆ. ಕೆಲವೇ ದಿನಗಳ ಹಿಂದೆ ‘ಅಖಂಡ’ ಚಿತ್ರದ (Akhanda Movie) ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿ ನಿತಿನ್​ ಮೆಹ್ತಾ(Nitin Mehta)  ಅವರನ್ನು ಕಂಡು ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಯಾರು ಈ ನಟ ಎಂದು ಸಿನಿಪ್ರಿಯರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ. ನಿತಿನ್​ ಮೆಹ್ತಾ ಅವರ ಇತಿಹಾಸ ಏನು ಎಂಬುದನ್ನು ಕೆದಕುತ್ತ ಹೋದರೆ ಒಂದು ಕ್ಷಣ ನಿಜಕ್ಕೂ ಅಚ್ಚರಿ ಎನಿಸುತ್ತದೆ. ಹಲವರಿಗೆ ಸ್ಫೂರ್ತಿ ತುಂಬುವಂತಹ ವ್ಯಕ್ತಿತ್ವ ಅವರದ್ದಾಗಿದೆ. ಭಾರತೀಯ ಸೇನೆಯಲ್ಲಿ (Indian Army) 21 ವರ್ಷಗಳ ಕಾಲ ಅವರು ಸೇವೆ ಸಲ್ಲಿಸಿದ್ದಾರೆ!

ಹೌದು, ನಿತಿನ್​ ಮೆಹ್ತಾ ಅವರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದ್ದಾರೆ. ಬಳಿಕ ಅವರು ಮಾಡೆಲಿಂಗ್​ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. ಈಗ ಅವರಿಗೆ 50 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ದೇಹವನ್ನು ಕಟ್ಟುಮಸ್ತಾಗಿ ಇಟ್ಟುಕೊಂಡಿದ್ದಾರೆ. ಹದಿಹರೆಯದವರೂ ನಾಚುವಂತೆ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ.

ಮಾಡೆಲಿಂಗ್​ ಲೋಕದಲ್ಲಿ ನಿತಿನ್​ ಮೆಹ್ತಾ ಅವರಿಗೆ ಸಖತ್​ ಬೇಡಿಕೆ ಇದೆ. ಈ ರೀತಿ ಫ್ಯಾಷನ್​ ಜಗತ್ತಿನಲ್ಲಿ ಮಿಂಚಬೇಕು ಎಂಬುದು ಅವರ ಬಹುಕಾಲದ ಕನಸಾಗಿತ್ತು. ಮಿಲಿಟರಿ ಕೆಲಸದಿಂದ ನಿವೃತ್ತಿ ಪಡೆದ ಬಳಿಕ ಅವರು ಪೂರ್ಣಾವಧಿ ಮಾಡೆಲ್​ ಆಗಿಯೇ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಸಿನಿಮಾಗಳಿಂದಲೂ ಆಫರ್​ ಬರುತ್ತಿದೆ. ಟಾಲಿವುಡ್​ನಲ್ಲಿ ಅವರು ಮಿಂಚಲಿದ್ದಾರೆ.

ಈ ವರ್ಷದ ಬಹುನಿರೀಕ್ಷಿತ ​ಚಿತ್ರಗಳ ಪಟ್ಟಿಯಲ್ಲಿ ‘ಅಖಂಡ’ ಕೂಡ ಮುಂಚೂಣಿಯಲ್ಲಿದೆ. ಡಿ.2ರಂದು ಈ ಸಿನಿಮಾ ತೆರೆಕಾಣಲಿದೆ. ವಿಶೇಷ ಗೆಟಪ್​ನಲ್ಲಿ ನಿತಿನ್​ ಮೆಹ್ತಾ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಅವರನ್ನು ಈ ಗೆಟಪ್​ನಲ್ಲಿ ಒಮ್ಮೆಲೆ ನೋಡಿದರೆ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ರೀತಿ ಕಾಣಿಸುತ್ತಾರೆ ಎಂದು ಕೂಡ ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ‘ಅಖಂಡ’ ತೆರೆಕಂಡ ಬಳಿಕ ನಿತಿನ್​ ಮೆಹ್ತಾ ಅವರಿಗೆ ಇತರೆ ಭಾಷೆಯ ಚಿತ್ರರಂಗದಲ್ಲೂ ಬೇಡಿಕೆ ಹೆಚ್ಚುವುದು ಖಚಿತ ಎನ್ನಲಾಗುತ್ತಿದೆ.

‘ಅಖಂಡ’ ಚಿತ್ರಕ್ಕೆ ಬೊಯಾಪಾಟಿ ಶ್ರೀನು ನಿರ್ದೇಶನ ಮಾಡಿದ್ದಾರೆ. ಪ್ರಗ್ಯಾ ಜೈಸ್ವಾಲ್​, ಜಗಪತಿ ಬಾಬು ಮುಂತಾದವರು ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿ. ರಾಮ್​ ಪ್ರಸಾದ್​ ಛಾಯಾಗ್ರಹಣ, ಎಸ್​. ಥಮನ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ರಾಜಕಾರಣಿಗಳಿಂದ ಮಹಿಳೆಯರಿಗೆ ಅವಮಾನ; ಜ್ಯೂ. ಎನ್​ಟಿಆರ್​ ನೀಡಿದ ಎಚ್ಚರಿಕೆ ಸಂದೇಶದ ವಿಡಿಯೋ ಇಲ್ಲಿದೆ

ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!