AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ತೆರಳಿ ಮುಡಿಕೊಟ್ರಾ ನಯನತಾರಾ? ಫೋಟೋ ಅಸಲಿಯತ್ತೇನು?

'ಟಾಕ್ಸಿಕ್' ಸಿನಿಮಾ ಬಿಡುಗಡೆಗೂ ಮುನ್ನ ನಟಿ ನಯನತಾರಾ ತಿರುಮಲದಲ್ಲಿ ಮುಡಿ ಕೊಟ್ಟಿದ್ದಾರೆ ಎನ್ನಲಾದ ಬೋಳು ತಲೆಯ ಫೋಟೋಗಳು ವೈರಲ್ ಆಗಿವೆ. ಆದರೆ ಇದು ಎಐ ತಂತ್ರಜ್ಞಾನದಿಂದ ಎಡಿಟ್ ಮಾಡಲಾದ ನಕಲಿ ಫೋಟೋ ಆಗಿದ್ದು, ನಟಿ ನಿಜವಾಗಿ ತಲೆಗೂದಲು ತೆಗೆಸಿಕೊಂಡಿಲ್ಲ ಎಂಬ ಅಸಲಿ ಸತ್ಯ ಈಗ ಬಯಲಾಗಿದೆ.

ತಿರುಪತಿಗೆ ತೆರಳಿ ಮುಡಿಕೊಟ್ರಾ ನಯನತಾರಾ? ಫೋಟೋ ಅಸಲಿಯತ್ತೇನು?
ನಯನತಾರಾ
ರಾಜೇಶ್ ದುಗ್ಗುಮನೆ
|

Updated on: Aug 18, 2026 | 12:49 PM

Share

ಮುಖ್ಯಾಂಶಗಳು

  • ತಿರುಮಲದಲ್ಲಿ ಮುಡಿ ಕೊಟ್ಟರಾ ನಯನತಾರಾ?
  • ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್
  • ಬೋಳು ತಲೆಯ ಫೋಟೋ ಹಿಂದಿದೆ ಎಐ ಕಮಾಲ್

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನತಾರಾ ಪ್ರಸ್ತುತ ‘ಟಾಕ್ಸಿಕ್’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ನಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಅವರು ತಿರುಪತಿ ತಿರುಮಲ ದೇವಾಲಯದಲ್ಲಿ ಮುಡಿ ಕೊಟ್ಟು ಸಂಪೂರ್ಣ ಬೋಳು ತಲೆಯೊಂದಿಗೆ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಡಿದೆ. ಆದರೆ ಈ ವೈರಲ್ ಫೋಟೋಗಳ ಹಿಂದಿನ ಅಸಲಿ ಸತ್ಯವೇ ಬೇರೆಯಾಗಿದೆ.

ಸಾಮಾಜಿಕ ಜಾಲತಾಣವಾದ ‘ಎಕ್ಸ್’ನಲ್ಲಿ ನಯನತಾರಾ ಅವರ ಬೋಳು ತಲೆಯ ಫೋಟೋಗಳು ಹರಿಫಾಡುತ್ತಿವೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನ ನಟಿ ತಿರುಮಲದಲ್ಲಿ ಮುಡಿ ಕೊಟ್ಟಿದ್ದಾರೆ ಎಂದು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಚಿತ್ರಗಳು ನೈಜವಾದವುಗಳಲ್ಲ. ಇವುಗಳನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ಎಡಿಟ್ ಮಾಡಲಾಗಿದೆ.

ನೆಟ್ಟಿಗರು ಈ ಫೋಟೋಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಸತ್ಯ ಬಯಲಾಗಿದೆ. ಈ ಫೋಟೋಗಳನ್ನು ಕೃತಕ ಬುದ್ಧಿಮತ್ತೆ ಅಂದರೆ ಎಐ ಬಳಸಿ ಸೃಷ್ಟಿಸಲಾಗಿದೆ. ನಯನತಾರಾ ಅವರು ನಿಜವಾಗಿ ತಮ್ಮ ತಲೆಗೂದಲನ್ನು ತೆಗೆಸಿಕೊಂಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದ ವೇಳೆ ತೆಗೆದ ಹಳೆಯ ಫೋಟೋಗಳನ್ನು ಎಡಿಟ್ ಮಾಡಲಾಗಿದೆ.

View this post on Instagram

A post shared by tirupatilo (@tirupatilo)

ಈ ವರ್ಷದ ಏಪ್ರಿಲ್‌ನಲ್ಲಿ ನಯನತಾರಾ ತಮ್ಮ ಪತಿ ವಿಘ್ನೇಶ್ ಶಿವನ್ ಜೊತೆ ತಿರುಮಲಕ್ಕೆ ಭೇಟಿ ನೀಡಿದ್ದರು. ಆ ವೇಳೆ ತೆಗೆಸಿಕೊಂಡ ಫೋಟೋಗಳನ್ನೇ ಇಲ್ಲಿ ಬಳಸಿಕೊಳ್ಳಲಾಗಿದೆ. ಮೂಲ ಫೋಟೋದಲ್ಲಿದ್ದ ಉಡುಪು ಮತ್ತು ಓಲೆಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಕೇವಲ ತಲೆಯ ಭಾಗವನ್ನು ಎಐ ಮೂಲಕ ಬೋಳಾಗಿ ಕಾಣುವಂತೆ ಬದಲಾಯಿಸಲಾಗಿದೆ.

ಇದನ್ನೂ ಓದಿ:  ರಾಧಿಕಾ ಪಂಡಿತ್ ಯಶ್ ಅವರ ಅತಿ ದೊಡ್ಡ ಶಕ್ತಿ; ನಯನತಾರಾ ಭಾವುಕ ಮಾತು

ನಯನತಾರಾ ಸದ್ಯ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸಲ್ಮಾನ್ ಖಾನ್ ಅವರ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಅಭಿಮಾನಿಗಳು ಇಂತಹ ನಕಲಿ ಫೋಟೋ ಹಾಗೂ ವದಂತಿಗಳನ್ನು ನಂಬಬಾರದು ಎಂದು ಅವರ ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ