AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ನಟಿ ರಶ್ಮಿಕಾ ಮಂದಣ್ಣ ಆರೋಗ್ಯ ಸ್ಥಿತಿ ಗಂಭೀರ?: ವೈರಲ್ ಫೋಟೋದ ಸತ್ಯಾಂಶ ಏನು?

Rashmika Mandanna Fact Checkರಶ್ಮಿಕಾ ಅವರು ತಮ್ಮ ದೇಹದ ಮೇಲೆ ಎಲೆಕ್ಟ್ರೋಡ್‌ಗಳು ಮತ್ತು ತಲೆಯ ಮೇಲೆ ಬ್ಯಾಂಡೇಜ್‌ಗಳನ್ನು ಹಾಕಿಕೊಂಡು ಹಾಸಿಗೆಯಲ್ಲಿ ಮಲಗಿರುವ ಆಘಾತಕಾರಿ ಫೋಟೋ ವೈರಲ್ ಆಗಿದೆ. ಹಠಾತ್ ಅನಾರೋಗ್ಯದ ನಂತರ ಮಂದಣ್ಣ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ಅನೇಕ ಬಳಕೆದಾರರು ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ.

Fact Check: ನಟಿ ರಶ್ಮಿಕಾ ಮಂದಣ್ಣ ಆರೋಗ್ಯ ಸ್ಥಿತಿ ಗಂಭೀರ?: ವೈರಲ್ ಫೋಟೋದ ಸತ್ಯಾಂಶ ಏನು?
Rashmika Mandhanna Fact Check
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 06, 2025 | 1:09 PM

Share

ಸ್ಯಾಂಡಲ್​ವುಡ್​ನ​ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಇದೀಗ ತೆಲುಗು ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. “ಪುಷ್ಪ” ಮತ್ತು “ಅನಿಮಲ್” ಸಿನಿಮಾದಿಂದ ಸಾಕಷ್ಟು ಪ್ರಸಿದ್ಧಿ ಪಡೆದ ನಟಿ ರಶ್ಮಿಕಾ ಮಂದಣ್ಣ ಅವರ ಫೋಟೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಶ್ಮಿಕಾ ಅವರು ತಮ್ಮ ದೇಹದ ಮೇಲೆ ಎಲೆಕ್ಟ್ರೋಡ್‌ಗಳು ಮತ್ತು ತಲೆಯ ಮೇಲೆ ಬ್ಯಾಂಡೇಜ್‌ಗಳನ್ನು ಹಾಕಿಕೊಂಡು ಹಾಸಿಗೆಯಲ್ಲಿ ಮಲಗಿರುವ ಆಘಾತಕಾರಿ ಫೋಟೋ ವೈರಲ್ ಆಗಿದೆ. ಹಠಾತ್ ಅನಾರೋಗ್ಯದ ನಂತರ ಮಂದಣ್ಣ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ಅನೇಕ ಬಳಕೆದಾರರು ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ಫೋಟೋವನ್ನು ಹಂಚಿಕೊಂಡು, ‘‘ಆಘಾತಕಾರಿ ಆರೋಗ್ಯ ತುರ್ತು ಪರಿಸ್ಥಿತಿ: ಹಠಾತ್ ಅನಾರೋಗ್ಯದ ನಂತರ ರಶ್ಮಿಕಾ ಮಂದಣ್ಣ ಅವರ ಸ್ಥಿತಿ ಗಂಭೀರ!’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಪೋಸ್ಟ್​ನ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಫೋಟೋ ಹಾಗೂ ಹೇಳಿಕೆಯೊಂದಿಗೆ ಇದು ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೈರಲ್ ಫೋಟೋದ ನಿಜಾಂಶವನ್ನು ತಿಳಿಯಲು ನಾವು, ರಶ್ಮಿಕಾ ಮಂದಣ್ಣ ಅವರ ಆರೋಗ್ಯ ಸಮಸ್ಯೆಗಳ ಬಗ್ಗೆ ಯಾವುದಾದರು ಮಾಧ್ಯಮಗಳು ವರದಿ ಮಾಡಿವೆಯೇ ಎಂದು ಕಂಡುಹಿಡಿಯಲು ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ. ಆದರೆ, ರಶ್ಮಿಕಾ ಮಂದಣ್ಣ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಅಥವಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಯಾವುದೇ ವಿಶ್ವಾಸಾರ್ಹ ವರದಿಗಳು ಕಂಡುಬಂದಿಲ್ಲ. ಇಷ್ಟು ಗಂಭೀರ ಪರಿಸ್ಥಿತಿಯಲ್ಲಿ ರಶ್ಮಿಕಾ ಇರುತ್ತಿದ್ದರೆ ಈ ಸುದ್ದಿ ಮುಖ್ಯವಾಹಿನಿಯಲ್ಲಿ ಬ್ರೇಕಿಂಗ್ ನ್ಯೂಸ್ ಆಗಿರುತ್ತಿತ್ತು.

Fact Check: ಮಹಾ ಕುಂಭ ಮೇಳದಲ್ಲಿ ಅನಂತ್ ಅಂಬಾನಿ ಮತ್ತು ಸಲ್ಮಾನ್ ಖಾನ್?: ವೈರಲ್ ವಿಡಿಯೋದ ಸತ್ಯಾಂಶ ಏನು?

ಹೀಗಾಗಿ ಇದು ರಶ್ನಿಕಾ ಮಂದಣ್ಣ ಅವರ ಫೋಟೋ ಅಲ್ಲ ಎಂಬುದು ಖಚಿತವಾಯಿತು. ಬಳಿಕ ಈ ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸಹಾಯದಿಂದ ಸರ್ಚ್ ಮಾಡಿದ್ದೇವೆ. ಆಗ ಜುಲೈ 07, 2019 ರ ಡೈಲಿ ಮೇಲ್‌ನ ಲೇಖನ ಸಿಕ್ಕಿದೆ. ಮೂಲ ಚಿತ್ರದಲ್ಲಿ ಇರುವುದು ರಶ್ಮಿಕಾ ಮಂದಣ್ಣ ಅಲ್ಲ ಬದಲಾಗಿ ಬ್ರಿಟಿಷ್ ಟಿವಿ ನಿರೂಪಕಿ ನಿಕ್ಕಿ ಚಾಪ್ಮನ್ ಆಗಿದ್ದಾರೆ. ಲಂಡನ್‌ನ ಚಾರಿಂಗ್ ಕ್ರಾಸ್ ಆಸ್ಪತ್ರೆಯಲ್ಲಿ ಚಾಪ್ಮನ್ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾಗ ಈ ಚಿತ್ರವನ್ನು ತೆಗೆದುಕೊಳ್ಳಲಾಗಿದೆ.

Rashmika Mandhanna Fact Check (1)

ರಶ್ಮಿಕಾ ಮಂದಣ್ಣ ಮತ್ತು ಬ್ರಿಟಿಷ್ ಟಿವಿ ನಿರೂಪಕಿ ನಿಕ್ಕಿ ಚಾಪ್ಮನ್.

ಎರಡೂ ಚಿತ್ರಗಳ ಹೋಲಿಕೆ ಮಾಡಿದಾಗ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಚಾಪ್‌ಮನ್ ದೇಹದ ಮೇಲೆ ಡಿಜಿಟಲ್ ರೂಪದಲ್ಲಿ ಅಳವಡಿಸಲಾಗಿದೆ ಎಂದು ಸ್ಪಷ್ಟವಾಗುತ್ತದೆ. ಇದಲ್ಲದೆ, ವೈರಲ್ ಪೋಸ್ಟ್‌ನಲ್ಲಿರುವ ಅಲ್ಲು ಅರ್ಜುನ್, ಮಹೇಶ್ ಬಾಬು ಮತ್ತು ವಿಜಯ್ ದೇವರಕೊಂಡ ಅವರ ಫೋಟೋಗಳನ್ನು ತೆಲುಗು ಹಿರಿಯ ನಟ-ಚಲನಚಿತ್ರ ನಿರ್ಮಾಪಕ, ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರ ಅಂತ್ಯಕ್ರಿಯೆಯ ಸಮಯದಲ್ಲಿ ತೆಗೆದಿದ್ದಾಗಿದೆ.

ಯಾವುದಕ್ಕೂ ನಾವು ರಶ್ಮಿಕಾ ಮಂದಣ್ಣ ಅವರ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸಿದ್ದೇವೆ. ಆಗ ಜನವರಿ 11 ರಂದು ರಶ್ಮಿಕಾ ಮಂದಣ್ಣ ತಮ್ಮ ಗಾಯಗೊಂಡ ಕಾಲಿನ ಫೋಟೋಗಳನ್ನು ಹಂಚಿಕೊಂಡಿರುವುದು ಸಿಕ್ಕಿದೆ. ಜಿಮ್‌ ವರ್ಕೌಟ್ ಮಾಡುವಾಗ ಗಾಯಗೊಳಿಸಿಕೊಂಡಿದ್ದೇನೆ ಮತ್ತು ಮುಂಬರುವ ವಾರಗಳು ಅಥವಾ ತಿಂಗಳುಗಳಲ್ಲಿ ಚೇತರಿಸಿಕೊಳ್ಳುತ್ತೇನೆ ಎಂದು ಅವರು ಬರೆದಿದ್ದಾರೆ. ಆದರೆ, ಈ ಫೋಟೋಕ್ಕೂ ವೈರಲ್ ಫೋಟೋಕ್ಕೂ ಯಾವುದೇ ಸಂಬಂಧವಿಲ್ಲ.

ರಶ್ಮಿಕಾ ಮಂದಣ್ಣ ಅವರು ಹಿಂದಿಯಲ್ಲಿ ಗುಡ್​ಬೈ ಹಾಗೂ ಮಿಷನ್ ಮಜ್ನು ಸಿನಿಮಾಗಳನ್ನು ಮಾಡಿದ್ದಾರೆ. ಇದು ಅವರ ಬಾಲಿವುಡ್ ಜರ್ನಿಗೆ ಸಾಕಷ್ಟು ಮೈಲೇಜ್ ನೀಡಿದೆ. ಹಿಂದಿ ನಿರ್ಮಾಪಕರು ರಶ್ಮಿಕಾ ಅವರ ಕಾಲ್​ಶೀಟ್ ಪಡೆಯಲು ರೇಸ್​ನಲ್ಲಿ ಇದ್ದಾರೆ. ಅವರು ವಿಕ್ಕಿ ಕೌಶಲ್ ಜೊತೆ ಛಾವಾ ಸಿನಿಮಾ ಮಾಡಿದ್ದಾರೆ. ಈ ಚಿತ್ರದಲ್ಲಿ ಮರಾಠ ದೊರೆ ಛತ್ರಪತಿ ಶಿವಾಜಿ ಪುತ್ರ ಸಾಂಭಾಜಿ ಮಹರಾಜನ ಪಾತ್ರದಲ್ಲಿ ವಿಕ್ಕಿ ನಟಿಸಿದ್ದಾರೆ. ನಟಿ ರಶ್ಮಿಕಾ ಅವರು ಸಾಂಭಾಜಿ ಪತ್ನಿ ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಛಾವಾ ಫೆಬ್ರವರಿ 14ರಂದು ರಿಲೀಸ್ ಆಗಲಿದೆ. ಲಕ್ಷ್ಮಣ ಉಟೇಕರ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು