ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​

ಕಮಲ್​ ಹಾಸನ್​ ನಟನೆಯ ವಿಕ್ರಮ್ ಸಿನಿಮಾದ ಟೈಟಲ್​ ಟೀಸರ್​ ಒಂದನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಈ ಟೀಸರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದರು.

ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​
ಫಹಾದ್ ಫಾಸಿಲ್​-ಕಮಲ್​ ಹಾಸನ್
Follow us
|

Updated on:May 21, 2021 | 8:50 PM

ಮಲಯಾಳಂ ಹೀರೋ ಫಹಾದ್​ ಫಾಸಿಲ್​ ನಟನೆ ಮೂಲಕ ದಕ್ಷಿಣ ಭಾರತದಲ್ಲಿ ಹೆಸರು ಮಾಡಿದ್ದಾರೆ. ಕೇವಲ ಮಲಯಾಳಂ ಮಾತ್ರವಲ್ಲದೆ ಬೇರೇ ಇಂಡಸ್ಟ್ರಿಯವರಿಗೂ ಫಹಾದ್​ ಪರಿಚಯವಿದೆ. ಅವರು ಕೈಗೆತ್ತಿಕೊಳ್ಳುವ ಪ್ರತೀ ಸಿನಿಮಾದಲ್ಲಿ ಅವರ ಪಾತ್ರ ಭಿನ್ನವಾಗಿರುತ್ತದೆ. ಈಗ ಅವರು ಕಮಲ್​ ಹಾಸನ್​ ಅಭಿನಯಿಸುತ್ತಿರುವ ತಮಿಳಿನ ವಿಕ್ರಮ್ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ಕಮಲ್​ ಹಾಸನ್​ ನಟನೆಯ ವಿಕ್ರಮ್ ಸಿನಿಮಾದ ಟೈಟಲ್​ ಟೀಸರ್​ ಒಂದನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಈ ಟೀಸರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದರು. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ವಿಜಯ್​ ಸೇತುಪತಿ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾ ಮೇಲಿರುವ ನಿರೀಕ್ಷೆ ಹೆಚ್ಚಿತ್ತು. ಈಗ ಸಿನಿಮಾಗೆ ಫಹಾದ್​ ಕೂಡ ಸೇರಿಕೊಳ್ಳುತ್ತಿರುವುದು ಸಿನಿಮಾ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಿದೆ.

ವಿಕ್ರಮ್​ ಸಿನಿಮಾದಲ್ಲಿ ವಿಜಯ್​ ಸೇತುಪತಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಫಹಾದ್​ ಭ್ರಷ್ಟ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂಲಗಳ ಪ್ರಕಾರ, ಸಾಕ್ಷಿ ಹೇಳಲು ಹೊರಟಿರುವ ವ್ಯಕ್ತಿಯನ್ನು ಸಾಯಿಸಲು ರೌಡಿಗೆ (ವಿಜಯ್​ ಸೇತುಪತಿ) ಈ ಪೊಲೀಸ್​ ಅಧಿಕಾರಿ ಸಹಕಾರ ನೀಡುತ್ತಾನೆ ಎನ್ನಲಾಗಿದೆ. ಈ ಸಾಕ್ಷ್ಯವನ್ನು ಹೀರೋ (ಕಮಲ್​ ಹಾಸನ್​) ಕಾಪಾಡುತ್ತಿರುತ್ತಾನೆ ಎನ್ನಲಾಗಿದೆ.

ತಮಿಳಿನಲ್ಲಿ ಸಿದ್ಧಗೊಳ್ಳುತ್ತಿರುವ ಈ ಸಿನಿಮಾದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಜಲ್ಲಿಕಟ್ಟು ಸಿನಿಮಾದಲ್ಲಿ ಕ್ಯಾಮೆರಾ ಕೈಚಳಕ ತೋರಿದ್ದ ಗಿರೀಶ್​ ಗಂಗಾಧರನ್​ ಈ ಸಿನಿಮಾಗೆ ಛಾಯಾಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾದ ಫ್ರೇಮ್​ ಮತ್ತಷ್ಟು ಅದ್ಭುತವಾಗಿ ಮೂಡಿಬರುವ ನಿರೀಕ್ಷೆ ಇದೆ. ಅನಿರುದ್ಧ್​ ರವಿಚಂದರ್​​​ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪುಷ್ಪ ಸಿನಿಮಾದ ವಿಲನ್ ನಟ ಫಹಾದ್ ಫಾಸಿಲ್ ಗೆ 5 ಕೋಟಿ ಸಂಭಾವನೆ

Published On - 8:50 pm, Fri, 21 May 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ