AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​

ಕಮಲ್​ ಹಾಸನ್​ ನಟನೆಯ ವಿಕ್ರಮ್ ಸಿನಿಮಾದ ಟೈಟಲ್​ ಟೀಸರ್​ ಒಂದನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಈ ಟೀಸರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದರು.

ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​
ಫಹಾದ್ ಫಾಸಿಲ್​-ಕಮಲ್​ ಹಾಸನ್
ರಾಜೇಶ್ ದುಗ್ಗುಮನೆ
|

Updated on:May 21, 2021 | 8:50 PM

Share

ಮಲಯಾಳಂ ಹೀರೋ ಫಹಾದ್​ ಫಾಸಿಲ್​ ನಟನೆ ಮೂಲಕ ದಕ್ಷಿಣ ಭಾರತದಲ್ಲಿ ಹೆಸರು ಮಾಡಿದ್ದಾರೆ. ಕೇವಲ ಮಲಯಾಳಂ ಮಾತ್ರವಲ್ಲದೆ ಬೇರೇ ಇಂಡಸ್ಟ್ರಿಯವರಿಗೂ ಫಹಾದ್​ ಪರಿಚಯವಿದೆ. ಅವರು ಕೈಗೆತ್ತಿಕೊಳ್ಳುವ ಪ್ರತೀ ಸಿನಿಮಾದಲ್ಲಿ ಅವರ ಪಾತ್ರ ಭಿನ್ನವಾಗಿರುತ್ತದೆ. ಈಗ ಅವರು ಕಮಲ್​ ಹಾಸನ್​ ಅಭಿನಯಿಸುತ್ತಿರುವ ತಮಿಳಿನ ವಿಕ್ರಮ್ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ಕಮಲ್​ ಹಾಸನ್​ ನಟನೆಯ ವಿಕ್ರಮ್ ಸಿನಿಮಾದ ಟೈಟಲ್​ ಟೀಸರ್​ ಒಂದನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಈ ಟೀಸರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದರು. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ವಿಜಯ್​ ಸೇತುಪತಿ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾ ಮೇಲಿರುವ ನಿರೀಕ್ಷೆ ಹೆಚ್ಚಿತ್ತು. ಈಗ ಸಿನಿಮಾಗೆ ಫಹಾದ್​ ಕೂಡ ಸೇರಿಕೊಳ್ಳುತ್ತಿರುವುದು ಸಿನಿಮಾ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಿದೆ.

ವಿಕ್ರಮ್​ ಸಿನಿಮಾದಲ್ಲಿ ವಿಜಯ್​ ಸೇತುಪತಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಫಹಾದ್​ ಭ್ರಷ್ಟ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂಲಗಳ ಪ್ರಕಾರ, ಸಾಕ್ಷಿ ಹೇಳಲು ಹೊರಟಿರುವ ವ್ಯಕ್ತಿಯನ್ನು ಸಾಯಿಸಲು ರೌಡಿಗೆ (ವಿಜಯ್​ ಸೇತುಪತಿ) ಈ ಪೊಲೀಸ್​ ಅಧಿಕಾರಿ ಸಹಕಾರ ನೀಡುತ್ತಾನೆ ಎನ್ನಲಾಗಿದೆ. ಈ ಸಾಕ್ಷ್ಯವನ್ನು ಹೀರೋ (ಕಮಲ್​ ಹಾಸನ್​) ಕಾಪಾಡುತ್ತಿರುತ್ತಾನೆ ಎನ್ನಲಾಗಿದೆ.

ತಮಿಳಿನಲ್ಲಿ ಸಿದ್ಧಗೊಳ್ಳುತ್ತಿರುವ ಈ ಸಿನಿಮಾದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಜಲ್ಲಿಕಟ್ಟು ಸಿನಿಮಾದಲ್ಲಿ ಕ್ಯಾಮೆರಾ ಕೈಚಳಕ ತೋರಿದ್ದ ಗಿರೀಶ್​ ಗಂಗಾಧರನ್​ ಈ ಸಿನಿಮಾಗೆ ಛಾಯಾಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾದ ಫ್ರೇಮ್​ ಮತ್ತಷ್ಟು ಅದ್ಭುತವಾಗಿ ಮೂಡಿಬರುವ ನಿರೀಕ್ಷೆ ಇದೆ. ಅನಿರುದ್ಧ್​ ರವಿಚಂದರ್​​​ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪುಷ್ಪ ಸಿನಿಮಾದ ವಿಲನ್ ನಟ ಫಹಾದ್ ಫಾಸಿಲ್ ಗೆ 5 ಕೋಟಿ ಸಂಭಾವನೆ

Published On - 8:50 pm, Fri, 21 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ