AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​

ಕಮಲ್​ ಹಾಸನ್​ ನಟನೆಯ ವಿಕ್ರಮ್ ಸಿನಿಮಾದ ಟೈಟಲ್​ ಟೀಸರ್​ ಒಂದನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಈ ಟೀಸರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದರು.

ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​
ಫಹಾದ್ ಫಾಸಿಲ್​-ಕಮಲ್​ ಹಾಸನ್
ರಾಜೇಶ್ ದುಗ್ಗುಮನೆ
|

Updated on:May 21, 2021 | 8:50 PM

Share

ಮಲಯಾಳಂ ಹೀರೋ ಫಹಾದ್​ ಫಾಸಿಲ್​ ನಟನೆ ಮೂಲಕ ದಕ್ಷಿಣ ಭಾರತದಲ್ಲಿ ಹೆಸರು ಮಾಡಿದ್ದಾರೆ. ಕೇವಲ ಮಲಯಾಳಂ ಮಾತ್ರವಲ್ಲದೆ ಬೇರೇ ಇಂಡಸ್ಟ್ರಿಯವರಿಗೂ ಫಹಾದ್​ ಪರಿಚಯವಿದೆ. ಅವರು ಕೈಗೆತ್ತಿಕೊಳ್ಳುವ ಪ್ರತೀ ಸಿನಿಮಾದಲ್ಲಿ ಅವರ ಪಾತ್ರ ಭಿನ್ನವಾಗಿರುತ್ತದೆ. ಈಗ ಅವರು ಕಮಲ್​ ಹಾಸನ್​ ಅಭಿನಯಿಸುತ್ತಿರುವ ತಮಿಳಿನ ವಿಕ್ರಮ್ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ಕಮಲ್​ ಹಾಸನ್​ ನಟನೆಯ ವಿಕ್ರಮ್ ಸಿನಿಮಾದ ಟೈಟಲ್​ ಟೀಸರ್​ ಒಂದನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಈ ಟೀಸರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದರು. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ವಿಜಯ್​ ಸೇತುಪತಿ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾ ಮೇಲಿರುವ ನಿರೀಕ್ಷೆ ಹೆಚ್ಚಿತ್ತು. ಈಗ ಸಿನಿಮಾಗೆ ಫಹಾದ್​ ಕೂಡ ಸೇರಿಕೊಳ್ಳುತ್ತಿರುವುದು ಸಿನಿಮಾ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಿದೆ.

ವಿಕ್ರಮ್​ ಸಿನಿಮಾದಲ್ಲಿ ವಿಜಯ್​ ಸೇತುಪತಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಫಹಾದ್​ ಭ್ರಷ್ಟ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂಲಗಳ ಪ್ರಕಾರ, ಸಾಕ್ಷಿ ಹೇಳಲು ಹೊರಟಿರುವ ವ್ಯಕ್ತಿಯನ್ನು ಸಾಯಿಸಲು ರೌಡಿಗೆ (ವಿಜಯ್​ ಸೇತುಪತಿ) ಈ ಪೊಲೀಸ್​ ಅಧಿಕಾರಿ ಸಹಕಾರ ನೀಡುತ್ತಾನೆ ಎನ್ನಲಾಗಿದೆ. ಈ ಸಾಕ್ಷ್ಯವನ್ನು ಹೀರೋ (ಕಮಲ್​ ಹಾಸನ್​) ಕಾಪಾಡುತ್ತಿರುತ್ತಾನೆ ಎನ್ನಲಾಗಿದೆ.

ತಮಿಳಿನಲ್ಲಿ ಸಿದ್ಧಗೊಳ್ಳುತ್ತಿರುವ ಈ ಸಿನಿಮಾದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಜಲ್ಲಿಕಟ್ಟು ಸಿನಿಮಾದಲ್ಲಿ ಕ್ಯಾಮೆರಾ ಕೈಚಳಕ ತೋರಿದ್ದ ಗಿರೀಶ್​ ಗಂಗಾಧರನ್​ ಈ ಸಿನಿಮಾಗೆ ಛಾಯಾಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾದ ಫ್ರೇಮ್​ ಮತ್ತಷ್ಟು ಅದ್ಭುತವಾಗಿ ಮೂಡಿಬರುವ ನಿರೀಕ್ಷೆ ಇದೆ. ಅನಿರುದ್ಧ್​ ರವಿಚಂದರ್​​​ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪುಷ್ಪ ಸಿನಿಮಾದ ವಿಲನ್ ನಟ ಫಹಾದ್ ಫಾಸಿಲ್ ಗೆ 5 ಕೋಟಿ ಸಂಭಾವನೆ

Published On - 8:50 pm, Fri, 21 May 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ