AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಹಾದ್ ಫಾಸಿಲ್ ಹಿಂದಿ ಸಿನಿಮಾಗಳಿಂದ ದೂರ ಇರೋದೇಕೆ? ಕಾರಣ ಕೊಟ್ಟ ನಟ

‘ಕರಣ್ ಜೋಹರ್, ವಿಕ್ಕಿ ಕೌಶಲ್ ಜೊತೆ ನನಗೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಕರಣ್ ಜೋಹರ್ ಅವರು ನನ್ನ ಸಿನಿಮಾಗಳನ್ನು ನೋಡಿ ಅದರಲ್ಲಿ ಏನು ಇಷ್ಟ ಆಯಿತು ಎಂಬುದನ್ನು ಚರ್ಚೆ ಮಾಡುತ್ತಾರೆ’ ಎಂದಿದ್ದಾರೆ ಅವರು.

ಫಹಾದ್ ಫಾಸಿಲ್ ಹಿಂದಿ ಸಿನಿಮಾಗಳಿಂದ ದೂರ ಇರೋದೇಕೆ? ಕಾರಣ ಕೊಟ್ಟ ನಟ
ಫಹಾದ್
ರಾಜೇಶ್ ದುಗ್ಗುಮನೆ
|

Updated on: May 08, 2024 | 8:54 AM

Share

ಮಲಯಾಳಂ ನಟ ಫಹಾದ್ ಫಾಸಿಲ್ (Fahad Faasil) ಅವರು ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಅವರೆಂದಿಗೂ ಬಾಲಿವುಡ್​ನತ್ತ ಮುಖ ಮಾಡಿಲ್ಲ. ಹಾಗಂತ ಅವರಿಗೆ ಹಿಂದಿ ಸಿನಿಮಾಗಳಿಂದ ಆಫರ್​ಗಳು ಬಂದಿಲ್ಲ ಎಂದಲ್ಲ. ಈ ಚಿತ್ರಗಳನ್ನು ಒಪ್ಪಿಕೊಳ್ಳದೆ ಇರಲು ಅವರು ಕಾರಣ ನೀಡಿದ್ದಾರೆ. ಇತ್ತೀಚೆಗೆ ಫಿಲ್ಮ್​ ಕಂಪ್ಯಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಫಹಾದ್ ಫಾಸಿಲ್ ಮಾಹಿತಿ ನೀಡಿದ್ದಾರೆ.

ಫಹಾದ್ ಫಾಸಿಲ್ ಅವರು ಮೊದಲಿನಿಂದಲೂ ಮಲಯಾಳಂ ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಇದಲ್ಲದೆ, ಪರಭಾಷೆಯ ‘ಸೂಪರ್ ಡಿಲಕ್ಸ್’, ‘ವಿಕ್ರಮ್’, ‘ಪುಷ್ಪ’ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಈ ಮೊದಲು ಹಿಂದಿ ಆಫರ್​ಗಳು ಬಂದಿದ್ದವು. ಆದರೆ, ಅವರಿಗೆ ಯಾವುದೂ ಇಷ್ಟ ಆಗಿಲ್ಲ.

‘ಇದು ಐದಾರು ವರ್ಷಗಳ ಹಿಂದಿನ ಮಾತು. ನನ್ನನ್ನು ಅಪ್ರೋಚ್ ಮಾಡಿದ ಮೊದಲ ಹಿಂದಿ ಚಿತ್ರಕ್ಕೆ ನಾನು ಯೆಸ್ ಹೇಳಿದ್ದೆ. ಆದರೆ, ಸ್ಕ್ರಿಪ್ಟ್ ಫೈನಲ್ ಮಾಡಲು ಅವರಿಗೆ ಸಾಧ್ಯವಾಗಿಲ್ಲ. ಆ ಬಳಿಕ ನಿರ್ದೇಶಕರು ಬೇರೆಯವರನ್ನು ಆಯ್ಕೆ ಮಾಡಿಕೊಂಡರು. ನಾನು ಚಿತ್ರದಿಂದ ಹೊರ ನಡೆದೆ. ಯಾವುದೇ ಗಂಭೀರ ಅಥವಾ ಸರಿಯಾದ ಕಥೆ ಹಿಂದಿಯಲ್ಲಿ ನನಗೆ ಸಿಕ್ಕಿಲ್ಲ’ ಎಂದಿದ್ದಾರೆ ಫಹಾದ್ ಫಾಸಿಲ್.

‘ನನಗೆ ಸರಿಯಾಗಿ ಹಿಂದಿ ಬರೋದಿಲ್ಲ. ಹೀಗಾಗಿ, ಕಾಶ್ಮೀರದಲ್ಲಿ ಸರಿಯಾಗಿ ಹಿಂದಿ ಮಾತನಾಡಲು ಬರದೇ ಇರುವ ದಕ್ಷಿಣ ಭಾರತದ ವ್ಯಕ್ತಿಯಾಗಿ ಕಾಣಿಸಿಕೊಳ್ಳಬೇಕು. ನಾನು ಹಿಂದಿ ಸಿನಿಮಾ ಮಾಡೋಕೆ ರೆಡಿ ಇದ್ದೇನೆ. ನಾನು ತೆಲುಗು, ತಮಿಳು ಸಿನಿಮಾ ಮಾಡಿದ್ದೇನೆ. ಹಿಂದಿಯನ್ನೂ ಮಾಡುತ್ತೇನೆ. ಆದರೆ, ಯಾವಾಗ ಗೊತ್ತಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ರಿಯಾಲಿಟಿ ಶೋನಲ್ಲಿ ಅಪಹಾಸ್ಯ; ಅಸಮಾಧಾನಗೊಂಡ ಕರಣ್ ಜೋಹರ್ ಏನು ಮಾಡಿದ್ರು ನೋಡಿ

‘ಕರಣ್ ಜೋಹರ್, ವಿಕ್ಕಿ ಕೌಶಲ್ ಜೊತೆ ನನಗೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಕರಣ್ ಜೋಹರ್ ಅವರು ನನ್ನ ಸಿನಿಮಾಗಳನ್ನು ನೋಡಿ ಅದರಲ್ಲಿ ಏನು ಇಷ್ಟ ಆಯಿತು ಎಂಬುದನ್ನು ಚರ್ಚೆ ಮಾಡುತ್ತಾರೆ’ ಎಂದಿದ್ದಾರೆ ಅವರು. ಫಹಾದ್ ಫಾಸಿಲ್ ನಟನೆಯ ‘ಆವೇಶಂ’ ಸಿನಿಮಾ ಹಿಟ್ ಆಗಿದೆ. ಬೆಂಗಳೂರಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್