AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಹಾದ್ ಫಾಸಿಲ್ ಹಿಂದಿ ಸಿನಿಮಾಗಳಿಂದ ದೂರ ಇರೋದೇಕೆ? ಕಾರಣ ಕೊಟ್ಟ ನಟ

‘ಕರಣ್ ಜೋಹರ್, ವಿಕ್ಕಿ ಕೌಶಲ್ ಜೊತೆ ನನಗೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಕರಣ್ ಜೋಹರ್ ಅವರು ನನ್ನ ಸಿನಿಮಾಗಳನ್ನು ನೋಡಿ ಅದರಲ್ಲಿ ಏನು ಇಷ್ಟ ಆಯಿತು ಎಂಬುದನ್ನು ಚರ್ಚೆ ಮಾಡುತ್ತಾರೆ’ ಎಂದಿದ್ದಾರೆ ಅವರು.

ಫಹಾದ್ ಫಾಸಿಲ್ ಹಿಂದಿ ಸಿನಿಮಾಗಳಿಂದ ದೂರ ಇರೋದೇಕೆ? ಕಾರಣ ಕೊಟ್ಟ ನಟ
ಫಹಾದ್
ರಾಜೇಶ್ ದುಗ್ಗುಮನೆ
|

Updated on: May 08, 2024 | 8:54 AM

Share

ಮಲಯಾಳಂ ನಟ ಫಹಾದ್ ಫಾಸಿಲ್ (Fahad Faasil) ಅವರು ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಅವರೆಂದಿಗೂ ಬಾಲಿವುಡ್​ನತ್ತ ಮುಖ ಮಾಡಿಲ್ಲ. ಹಾಗಂತ ಅವರಿಗೆ ಹಿಂದಿ ಸಿನಿಮಾಗಳಿಂದ ಆಫರ್​ಗಳು ಬಂದಿಲ್ಲ ಎಂದಲ್ಲ. ಈ ಚಿತ್ರಗಳನ್ನು ಒಪ್ಪಿಕೊಳ್ಳದೆ ಇರಲು ಅವರು ಕಾರಣ ನೀಡಿದ್ದಾರೆ. ಇತ್ತೀಚೆಗೆ ಫಿಲ್ಮ್​ ಕಂಪ್ಯಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಫಹಾದ್ ಫಾಸಿಲ್ ಮಾಹಿತಿ ನೀಡಿದ್ದಾರೆ.

ಫಹಾದ್ ಫಾಸಿಲ್ ಅವರು ಮೊದಲಿನಿಂದಲೂ ಮಲಯಾಳಂ ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಇದಲ್ಲದೆ, ಪರಭಾಷೆಯ ‘ಸೂಪರ್ ಡಿಲಕ್ಸ್’, ‘ವಿಕ್ರಮ್’, ‘ಪುಷ್ಪ’ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಈ ಮೊದಲು ಹಿಂದಿ ಆಫರ್​ಗಳು ಬಂದಿದ್ದವು. ಆದರೆ, ಅವರಿಗೆ ಯಾವುದೂ ಇಷ್ಟ ಆಗಿಲ್ಲ.

‘ಇದು ಐದಾರು ವರ್ಷಗಳ ಹಿಂದಿನ ಮಾತು. ನನ್ನನ್ನು ಅಪ್ರೋಚ್ ಮಾಡಿದ ಮೊದಲ ಹಿಂದಿ ಚಿತ್ರಕ್ಕೆ ನಾನು ಯೆಸ್ ಹೇಳಿದ್ದೆ. ಆದರೆ, ಸ್ಕ್ರಿಪ್ಟ್ ಫೈನಲ್ ಮಾಡಲು ಅವರಿಗೆ ಸಾಧ್ಯವಾಗಿಲ್ಲ. ಆ ಬಳಿಕ ನಿರ್ದೇಶಕರು ಬೇರೆಯವರನ್ನು ಆಯ್ಕೆ ಮಾಡಿಕೊಂಡರು. ನಾನು ಚಿತ್ರದಿಂದ ಹೊರ ನಡೆದೆ. ಯಾವುದೇ ಗಂಭೀರ ಅಥವಾ ಸರಿಯಾದ ಕಥೆ ಹಿಂದಿಯಲ್ಲಿ ನನಗೆ ಸಿಕ್ಕಿಲ್ಲ’ ಎಂದಿದ್ದಾರೆ ಫಹಾದ್ ಫಾಸಿಲ್.

‘ನನಗೆ ಸರಿಯಾಗಿ ಹಿಂದಿ ಬರೋದಿಲ್ಲ. ಹೀಗಾಗಿ, ಕಾಶ್ಮೀರದಲ್ಲಿ ಸರಿಯಾಗಿ ಹಿಂದಿ ಮಾತನಾಡಲು ಬರದೇ ಇರುವ ದಕ್ಷಿಣ ಭಾರತದ ವ್ಯಕ್ತಿಯಾಗಿ ಕಾಣಿಸಿಕೊಳ್ಳಬೇಕು. ನಾನು ಹಿಂದಿ ಸಿನಿಮಾ ಮಾಡೋಕೆ ರೆಡಿ ಇದ್ದೇನೆ. ನಾನು ತೆಲುಗು, ತಮಿಳು ಸಿನಿಮಾ ಮಾಡಿದ್ದೇನೆ. ಹಿಂದಿಯನ್ನೂ ಮಾಡುತ್ತೇನೆ. ಆದರೆ, ಯಾವಾಗ ಗೊತ್ತಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ರಿಯಾಲಿಟಿ ಶೋನಲ್ಲಿ ಅಪಹಾಸ್ಯ; ಅಸಮಾಧಾನಗೊಂಡ ಕರಣ್ ಜೋಹರ್ ಏನು ಮಾಡಿದ್ರು ನೋಡಿ

‘ಕರಣ್ ಜೋಹರ್, ವಿಕ್ಕಿ ಕೌಶಲ್ ಜೊತೆ ನನಗೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಕರಣ್ ಜೋಹರ್ ಅವರು ನನ್ನ ಸಿನಿಮಾಗಳನ್ನು ನೋಡಿ ಅದರಲ್ಲಿ ಏನು ಇಷ್ಟ ಆಯಿತು ಎಂಬುದನ್ನು ಚರ್ಚೆ ಮಾಡುತ್ತಾರೆ’ ಎಂದಿದ್ದಾರೆ ಅವರು. ಫಹಾದ್ ಫಾಸಿಲ್ ನಟನೆಯ ‘ಆವೇಶಂ’ ಸಿನಿಮಾ ಹಿಟ್ ಆಗಿದೆ. ಬೆಂಗಳೂರಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು
ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು
ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ
ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ