AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಸಿನಿಮಾಗಳಿಂದ ಯಾರ ಬದುಕೂ ಬದಲಾಗಿಲ್ಲ’; ಬೇಸರದಿಂದ ಹೇಳಿದ ಫಹಾದ್ ಫಾಸಿಲ್

ಸಿನಿಮಾಗೆ ಹಲವರ ಬದುಕನ್ನು ಬದಲಾಯಿಸೋ ಶಕ್ತಿ ಇದೆ. ಸಿನಿಮಾ ನೋಡಿ ಬದುಕು ಬದಲಿಸಿಕೊಂಡ ಅನೇಕರಿದ್ದಾರೆ. ಆದರೆ, ಫಹಾದ್​ಗೆ ತಮ್ಮ ಸಿನಿಮಾಗಳಿಂದ ಯಾರ ಬದುಕೂ ಬದಲಾಗಿಲ್ಲ ಎನ್ನುವ ಬೇಸರ ಇದೆ. ‘ಸಿನಿಮಾ ಪರಾಡಿಸೋ’ ಹೆಸರಿನ ಇಟಲಿಯ ಸಿನಿಮಾ ಅವರ ಬದುಕನ್ನು ಬದಲಿಸಿದೆಯಂತೆ.

‘ನನ್ನ ಸಿನಿಮಾಗಳಿಂದ ಯಾರ ಬದುಕೂ ಬದಲಾಗಿಲ್ಲ’; ಬೇಸರದಿಂದ ಹೇಳಿದ ಫಹಾದ್ ಫಾಸಿಲ್
ಫಹಾದ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 25, 2024 | 7:47 AM

Share

ಮಲಯಾಳಂ ನಟ ಫಹಾದ್ ಫಾಸಿಲ್ (Fahadh Faasil) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಮಲಿಕ್​’, ‘ಬೆಂಗಳೂರು ಡೇಸ್’, ‘ವಿಕ್ರಮ್’ ಹೀಗೇ ಅವರ ಸೂಪರ್ ಹಿಟ್ ಸಿನಿಮಾಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಆದರೆ, ಅವರ ಸಿನಿಮಾಗಳಿಂದ ಯಾರ ಜೀವನವೂ ಬದಲಾಗಿಲ್ಲ ಅನ್ನೋದು ಅವರ ಅಭಿಪ್ರಾಯ. ತಾವು ನಟನೆಯನ್ನು ತೊರೆಯೋ ಮೊದಲು ಆ ರೀತಿಯ ಸಿನಿಮಾಗಳನ್ನು ಮಾಡುವ ಕನಸು ಹೊಂದಿದ್ದಾರೆ.

ಸಿನಿಮಾಗೆ ಹಲವರ ಬದುಕನ್ನು ಬದಲಾಯಿಸೋ ಶಕ್ತಿ ಇದೆ. ಸಿನಿಮಾ ನೋಡಿ ಬದುಕು ಬದಲಿಸಿಕೊಂಡ ಅನೇಕರಿದ್ದಾರೆ. ಆದರೆ, ಫಹಾದ್​ಗೆ ತಮ್ಮ ಸಿನಿಮಾಗಳಿಂದ ಯಾರ ಬದುಕೂ ಬದಲಾಗಿಲ್ಲ ಎನ್ನುವ ಬೇಸರ ಇದೆ. ‘ಸಿನಿಮಾ ಪರಾಡಿಸೋ’ ಹೆಸರಿನ ಇಟಲಿಯ ಸಿನಿಮಾ ಅವರ ಬದುಕನ್ನು ಬದಲಿಸಿದೆಯಂತೆ. ಆ ಸಿನಿಮಾ ನೋಡುವಾಗ ತಮಗೆ ಏನನ್ನಿಸುತ್ತದೆ ಅನ್ನೋದನ್ನು ಜನರಿಗೆ ಹೇಳಬೇಕು ಎಂಬುದು ಅವರ ಆಸೆ.

‘ನನ್ನ ಸಿನಿಮಾಗಳು ಯಾರ ಮೇಲೂ ಪ್ರಭಾವ ಬೀರಿಲ್ಲ. ನಾನು ಯಾರ ಬದುಕನ್ನೂ ಬದಲಾಯಿಸಿಲ್ಲ. ಆದರೆ, ಸಿನಿಮಾ ಪರಾಡಿಸೋ ನನ್ನ ಬದುಕನ್ನು ಬದಲಾಯಿಸಿತು. ಒಬ್ಬೇ ಒಬ್ಬರು ಬಂದು ಆ ಬಗ್ಗೆ ನನ್ನಲ್ಲಿ ಹೇಳಿಕೊಂಡಿಲ್ಲ. ಅನೇಕ ಸಿನಿಮಾಗಳು ನನ್ನ ಮೇಲೆ ಪ್ರಭಾವ ಬೀರಿವೆ. ನಾನು ನಟನೆಯನ್ನು ಬಿಡುವ ಮೊದಲು ಆ ರೀತಿಯ ಅನುಭವಗಳನ್ನು ನನ್ನ ಪ್ರೇಕ್ಷರಿಗೆ ನೀಡಬೇಕು ಎಂಬುದು ನನ್ನ ಕನಸು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಪ್ರೇಮಲು’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಮಾಹಿತಿ ಕೊಟ್ಟ ನಿರ್ಮಾಪಕ ಫಹಾದ್ ಫಾಸಿಲ್

ಫಹಾದ್ ಫಾಸಿಲ್ ಅವರ ಮತ್ತೊಂದು ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕುತ್ತಿದೆ. ‘ಸಿನಿಮಾ ಮಾತ್ರ ಜೀವನ ಅಲ್ಲ, ಅದನ್ನು ಬಿಟ್ಟೂ ಇನ್ನೂ ಹಲವು ವಿಚಾರಗಳು ಇವೆ’ ಎಂದು ಫಹಾದ್ ಹೇಳಿದ್ದಾರೆ. ಈ ಹೇಳಿಕೆಗೆ ಅನೇಕರು ವಿರೋದ ವ್ಯಕ್ತಪಡಿಸಿದ್ದಾರೆ. ಫಹಾದ್ ಫಾಸಿಲ್ ನಟನೆಯ ‘ಆವೇಶಂ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಸದ್ಯ ಅವರು ತೆಲುಗಿನ ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ. ಸುಕುಮಾರನ್ ನಿರ್ದೇಶನದ ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!