AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು

ಫಹಾದ್​ ಫಾಸಿಲ್​ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಫಹಾದ್​ ತಲೆಯ ಮೇಲೆ ಒಂದೇ ಒಂದು ಕೂದಲಿಲ್ಲ. ಸೊಂಟದ ಮೇಲೆ ಗನ್​ ಇದೆ. ಬನ್ವರ್​ ಸಿಂಗ್​ ಶೇಖಾವತ್​ ಎಂಬುದು ಫಹಾದ್​ ಪಾತ್ರದ ಹೆಸರು.

‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು
‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು
TV9 Web
| Edited By: |

Updated on: Aug 28, 2021 | 9:48 PM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಸುದ್ದಿಯಲ್ಲಿದೆ. ಈ ಚಿತ್ರ ಎರಡು ಪಾರ್ಟ್​​ಗಳಲ್ಲಿ ಬರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ರಗಡ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಮಲಯಾಳಂನ ಖ್ಯಾತ ನಟ ಫಹಾದ್​ ಫಾಸಿಲ್​ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರ ಲುಕ್​ ಇಂದು ಬಿಡುಗಡೆಯಾಗಿದೆ. 

ಫಹಾದ್​ ಫಾಸಿಲ್​ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಫಹಾದ್​ ತಲೆಯ ಮೇಲೆ ಒಂದೇ ಒಂದು ಕೂದಲಿಲ್ಲ. ಸೊಂಟದ ಮೇಲೆ ಗನ್​ ಇದೆ. ಬನ್ವರ್​ ಸಿಂಗ್​ ಶೇಖಾವತ್​ ಎಂಬುದು ಫಹಾದ್​ ಪಾತ್ರದ ಹೆಸರು. ಅವರ ಕಣ್ಣಿನ ನೋಟ ಭಯ ಬೀಳಿಸುವಂತಿದೆ. ಸದ್ಯ, ಈ ಲುಕ್​ ಸಾಕಷ್ಟು ವೈರಲ್​ ಅಗಿದೆ. ಈ ಚಿತ್ರದಲ್ಲಿ ಅವರದ್ದು ಪೊಲೀಸ್​ ಪಾತ್ರ. ಈ ಸಿನಿಮಾ ಕಳ್ಳಸಾಗಣೆ ಕಥೆಯನ್ನು ಹೇಳುತ್ತಿರುವುದರಿಂದ ಪೊಲೀಸ್​ ಕ್ಯಾರೆಕ್ಟರ್​ ಪ್ರಮುಖ ಎನಿಸಿಕೊಳ್ಳಲಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ‘ರಂಗಸ್ಥಲಂ’ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ‘ಪುಷ್ಪ’ ಚಿತ್ರ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹಲವು ಭಾಷೆಗಳಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಎಲ್ಲ ಸಿನಿಮಾದಲ್ಲೂ ಐಟಂ ಸಾಂಗ್​ಗೆ ಸುಕುಮಾರ್​ ಹೆಚ್ಚು ಮಹತ್ವ ನೀಡುತ್ತಾರೆ. ಅದನ್ನು ‘ಪುಷ್ಪ’ ಚಿತ್ರದಲ್ಲೂ ಮುಂದುವರಿಸಿದ್ದಾರೆ. ಮೂಲಗಳ ಪ್ರಕಾರ ಸನ್ನಿ ಲಿಯೋನ್​ ಜೊತೆಗೆ ಚಿತ್ರತಂಡ ಈಗಾಗಲೇ ಒಂದು ಸುತ್ತಿನ ಮಾತುಕಥೆ ಮುಗಿಸಿದೆ. ಅವರು ಈ ಒಂದು ಐಟಂ ಸಾಂಗ್​ನಲ್ಲಿ ಹೆಜ್ಜೆ ಹಾಕಲು ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ಕೇಳುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.

ಇದನ್ನೂ ಓದಿ: ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ