AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು

ಫಹಾದ್​ ಫಾಸಿಲ್​ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಫಹಾದ್​ ತಲೆಯ ಮೇಲೆ ಒಂದೇ ಒಂದು ಕೂದಲಿಲ್ಲ. ಸೊಂಟದ ಮೇಲೆ ಗನ್​ ಇದೆ. ಬನ್ವರ್​ ಸಿಂಗ್​ ಶೇಖಾವತ್​ ಎಂಬುದು ಫಹಾದ್​ ಪಾತ್ರದ ಹೆಸರು.

‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು
‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು
TV9 Web
| Edited By: |

Updated on: Aug 28, 2021 | 9:48 PM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಸುದ್ದಿಯಲ್ಲಿದೆ. ಈ ಚಿತ್ರ ಎರಡು ಪಾರ್ಟ್​​ಗಳಲ್ಲಿ ಬರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ರಗಡ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಮಲಯಾಳಂನ ಖ್ಯಾತ ನಟ ಫಹಾದ್​ ಫಾಸಿಲ್​ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರ ಲುಕ್​ ಇಂದು ಬಿಡುಗಡೆಯಾಗಿದೆ. 

ಫಹಾದ್​ ಫಾಸಿಲ್​ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಫಹಾದ್​ ತಲೆಯ ಮೇಲೆ ಒಂದೇ ಒಂದು ಕೂದಲಿಲ್ಲ. ಸೊಂಟದ ಮೇಲೆ ಗನ್​ ಇದೆ. ಬನ್ವರ್​ ಸಿಂಗ್​ ಶೇಖಾವತ್​ ಎಂಬುದು ಫಹಾದ್​ ಪಾತ್ರದ ಹೆಸರು. ಅವರ ಕಣ್ಣಿನ ನೋಟ ಭಯ ಬೀಳಿಸುವಂತಿದೆ. ಸದ್ಯ, ಈ ಲುಕ್​ ಸಾಕಷ್ಟು ವೈರಲ್​ ಅಗಿದೆ. ಈ ಚಿತ್ರದಲ್ಲಿ ಅವರದ್ದು ಪೊಲೀಸ್​ ಪಾತ್ರ. ಈ ಸಿನಿಮಾ ಕಳ್ಳಸಾಗಣೆ ಕಥೆಯನ್ನು ಹೇಳುತ್ತಿರುವುದರಿಂದ ಪೊಲೀಸ್​ ಕ್ಯಾರೆಕ್ಟರ್​ ಪ್ರಮುಖ ಎನಿಸಿಕೊಳ್ಳಲಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ‘ರಂಗಸ್ಥಲಂ’ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ‘ಪುಷ್ಪ’ ಚಿತ್ರ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹಲವು ಭಾಷೆಗಳಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಎಲ್ಲ ಸಿನಿಮಾದಲ್ಲೂ ಐಟಂ ಸಾಂಗ್​ಗೆ ಸುಕುಮಾರ್​ ಹೆಚ್ಚು ಮಹತ್ವ ನೀಡುತ್ತಾರೆ. ಅದನ್ನು ‘ಪುಷ್ಪ’ ಚಿತ್ರದಲ್ಲೂ ಮುಂದುವರಿಸಿದ್ದಾರೆ. ಮೂಲಗಳ ಪ್ರಕಾರ ಸನ್ನಿ ಲಿಯೋನ್​ ಜೊತೆಗೆ ಚಿತ್ರತಂಡ ಈಗಾಗಲೇ ಒಂದು ಸುತ್ತಿನ ಮಾತುಕಥೆ ಮುಗಿಸಿದೆ. ಅವರು ಈ ಒಂದು ಐಟಂ ಸಾಂಗ್​ನಲ್ಲಿ ಹೆಜ್ಜೆ ಹಾಕಲು ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ಕೇಳುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.

ಇದನ್ನೂ ಓದಿ: ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ