AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಯಾಮಿಲಿ ಮ್ಯಾನ್ 3’ ಸರಣಿಯಲ್ಲಿರೋ ಈ ರಹಸ್ಯ ವಿಷಯ ಗಮನಿಸಿದ್ರಾ?

'ದಿ ಫ್ಯಾಮಿಲಿ ಮ್ಯಾನ್ 3' ಸರಣಿಯಲ್ಲಿ ಸುಚಿತ್ರಾ ಹಾಗೂ ಅಥರ್ವ್ ಫೇಕ್ ಐಡಿ ಹೆಸರುಗಳಾದ ಮುತ್ತಲಗು ಮತ್ತು ಸುಮನ್ ಹಿಂದಿನ ರಹಸ್ಯವನ್ನು ಅಭಿಮಾನಿಗಳು ಡಿಕೋಡ್ ಮಾಡಿದ್ದಾರೆ. ಪ್ರಿಯಾಮಣಿ ನಟಿಸಿದ್ದ 'ಪರುತಿವೀರನ್' ಚಿತ್ರದಲ್ಲಿನ ಪಾತ್ರದಿಂದ ಮುತ್ತಲಗು ಹೆಸರು ಬಂದಿದೆ. ಸುಮನ್ ಸರಣಿಯ ಲೇಖಕರ ಹೆಸರು. ಈ ಕುತೂಹಲಕಾರಿ ವಿವರಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿವೆ.

‘ಫ್ಯಾಮಿಲಿ ಮ್ಯಾನ್ 3’ ಸರಣಿಯಲ್ಲಿರೋ ಈ ರಹಸ್ಯ ವಿಷಯ ಗಮನಿಸಿದ್ರಾ?
ಫ್ಯಾಮಿಲಿ ಮ್ಯಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 05, 2025 | 7:47 AM

Share

‘ದಿ ಫ್ಯಾಮಿಲಿ ಮ್ಯಾನ್ 3’ ಸರಣಿ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸರಣಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ‘ಫ್ಯಾಮಿಲಿ ಮ್ಯಾನ್’ ಹಾಗೂ ‘ಫ್ಯಾಮಿಲಿ ಮ್ಯಾನ್ 2’ ಸರಣಿ ಬಳಿಕ ಗೆಲುವು ಕಂಡ ಸರಣಿ ಇದಾಗಿದೆ. ಇದರಲ್ಲಿ ಮನೋಜ್​ ಬಾಜ್​ಪಾಯಿ, ಪ್ರಿಯಾಮಣಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ಒಂದು ದೃಶ್ಯವನ್ನು ಸೋಶಿಯಲ್ ಮೀಡಿಯಾ ಬಳಕೆ ದಾರರು ಡೀಕೋಡ್ ಮಾಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್ 3’ ಸರಣಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ನಿರ್ದೇಶಕ ರಾಜ್ ಮತ್ತು ಡಿಕೆ ಸುಳ್ಳು ಮಾಡಲಿಲ್ಲ. ಇವರು ಸರಣಿ ಮೂಲಕ ಗಮನ ಸೆಳೆದಿದ್ದಾರೆ. ಈಗ ‘ಫ್ಯಾಮಿಲಿ ಮ್ಯಾನ್ 3’ ವೆಬ್ ಸರಣಿಯಲ್ಲಿ ಬರುವ ಒಂದು ದೃಶ್ಯದ ಬಗ್ಗೆ ಮಾತನಾಡಲಾಗುತ್ತಾ ಇದೆ.

ಶ್ರೀಕಾಂತ್ ತಿವಾರಿ ಹಾಗೂ ಆತನ ಪತ್ನಿ ಸುಚಿತ್ರಾ ಮತ್ತು ಮಕ್ಕಳಾದ ಧೃತಿ ಹಾಗೂ ಅಥರ್ವ್ ಮನೆ ಬಿಟ್ಟು ಹೊರಡೋ ಪರಿಸ್ಥಿತಿ ಬರುತ್ತದೆ. ಇವರ ಜೊತೆ ಜೆಕೆ ಕೂಡ ಬರುತ್ತಾನೆ. ಇವರು ಟ್ರೇನ್​ನಲ್ಲಿ ಸಾಗುತ್ತಾರೆ. ತಮ್ಮ ಐಡೆಂಟಿಟಿ ಗೊತ್ತಾಗಬಾರದು ಎಂದು ಫೇಕ್ ಐಡಿಗಳನ್ನು ಮಾಡಿಕೊಂಡಿರುತ್ತಾರೆ. ಸುಚಿತ್ರಾಗೆ ಕೊಡೋ ಐಡಿಯಲ್ಲಿನ ಹೆಸರು ಮುತ್ತಲಗ ಎಂದಿರುತ್ತದೆ. ಇದೆಂತಹ ಹೆಸರು ಎಂದು ಸುಚಿತ್ರಾ ಕೇಳುತ್ತಾಳೆ.

ಈ ಹೆಸರನ್ನು ಇಡಲು ಒಂದು ಕಾರಣ ಇದೆ. 2007ರಲ್ಲಿ ‘ಪರುತಿವೀರನ್’ ಹೆಸರಿನ ತಮಿಳು ಸಿನಿಮಾ ಬಂದಿತ್ತು. ಈ ಚಿತ್ರದಲ್ಲಿ ಕಾರ್ತಿ ಹಾಗೂ ಪ್ರಿಯಾಮಣಿ ನಟಿಸಿದ್ದರು. ಈ ಸಿನಿಮಾದಲ್ಲಿ ಪ್ರಿಯಾಮಣಿ ಪಾತ್ರದ ಹೆಸರು ಮುತ್ತಲಗು ಎಂದಾಗಿರುತ್ತದೆ. ಈ ಸಿನಿಮಾ ನಟನೆಗೆ ಅವರಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಈ ಕಾರಣದಿಂದಲೇ ನಿರ್ದೇಶಕರು ಐಡಿಯಾ ಮಾಡಿ ಈ ಹೆಸರನ್ನು ಬಳಸಿದರು.

ಇದನ್ನೂ ಓದಿ: ‘ಹೇಗಿದೆ ಫ್ಯಾಮಿಲಿ ಮ್ಯಾನ್ 3’; ಮನೋಜ್ ನಟನೆಯ ಸೀರಿಸ್ ನೋಡಿದವರು ಹೇಳಿದ್ದಿಷ್ಟು

ಇನ್ನು ಅಥರ್ವ್ ಹೆಸರು ‘ಸುಮನ್’ ಎಂದಾಗಿರುತ್ತದೆ. ‘ಸುಮನ್ ಎಂಬುದು ಇದು ಹುಡುಗಿಯರ ಹೆಸರು’ ಎಂದು ಹೇಳುತ್ತಾನೆ ಅಥರ್ವ್. ಸುಮನ್ ಎಂಬುದು ಈ ಸರಣಿಯ ಬರಹಗಾರನ ಹೆಸರಂತೆ. ಈ ವಿಷಯ ಅನೇಕರಿಗೆ ತಿಳಿದೇ ಇಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ