Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ಫೋನ್ ಟ್ಯಾಪಿಂಗ್ ಪ್ರಕರಣ: ನಟಿಯರಿಗೆ ಕಿರುಕುಳ

Actress: ತೆಲಂಗಾಣ ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ತೀವ್ರವಾಗಿದ್ದು, ದಕ್ಷಿಣ ಭಾರತದ ಜನಪ್ರಿಯ ನಟಿಯೊಬ್ಬರ ಹೆಸರು ಪ್ರಕರಣದಲ್ಲಿ ಕೇಳಿ ಬರುತ್ತಿದೆ.

ತೆಲಂಗಾಣದ ಫೋನ್ ಟ್ಯಾಪಿಂಗ್ ಪ್ರಕರಣ: ನಟಿಯರಿಗೆ ಕಿರುಕುಳ
Follow us
ಮಂಜುನಾಥ ಸಿ.
|

Updated on: Mar 26, 2024 | 3:05 PM

ತೆಲಂಗಾಣದಲ್ಲಿ ಫೋನ್ ಟ್ಯಾಪಿಂಗ್ (Phone Tapping) ಪ್ರಕರಣ ಸಖತ್ ಸದ್ದು ಮಾಡುತ್ತಿದೆ. ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಉನ್ನತ ದರ್ಜೆಯಲ್ಲಿದ್ದ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ತೆಲಂಗಾಣ ರಾಜ್ಯ ಗುಪ್ತಚರ ಇಲಾಖೆ ಮುಖ್ಯಸ್ಥನ ವಿರುದ್ಧ ಲುಕ್ ಔಟ್ ನೊಟೀಸ್ ಜಾರಿ ಆಗಿದೆ. ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ನಡೆದಷ್ಟು ಹಲವು ಆಘಾತಕಾರಿ ಸತ್ಯಗಳು ಹೊರಬೀಳುತ್ತಿವೆ. ಆರೋಪಿಗಳು ಹಾಲಿ ಸಿಎಂ ಫೋನ್ ಟ್ಯಾಪ್ ಮಾಡಿರುವ ಜೊತೆಗೆ ಹಲವು ಜನಪ್ರಿಯ ನಟಿಯರ ಫೋನ್ ಟ್ಯಾಪ್ ಮಾಡಿ ಅವರನ್ನು ಬ್ಲಾಕ್ ಮೇಲ್ ಮಾಡಿ ಕಿರುಕುಳ ನೀಡಿದ್ದರು ಎನ್ನಲಾಗುತ್ತಿದೆ.

ದಕ್ಷಿಣ ಭಾರತದ ಒಬ್ಬ ಜನಪ್ರಿಯ ನಟಿಯ ಫೋನ್ ಟ್ಯಾಪ್ ಮಾಡಲಾಗಿತ್ತೆಂದು ಇದೇ ಕಾರಣದಿಂದ ಆಕೆಯ ಖಾಸಗಿ ಜೀವನದಲ್ಲಿಯೂ ಸಮಸ್ಯೆಯುಂಟಾಗಿ ಪತಿ-ಪತ್ನಿ ಬೇರಾದರು ಎನ್ನಲಾಗುತ್ತಿದೆ. ಪ್ರಸ್ತುತ ಪ್ರಕರಣದಲ್ಲಿ ನಟಿಯ ಹೆಸರು ಸಹ ತುಸು ಜೋರಾಗಿಯೇ ಕೇಳಿ ಬರುತ್ತಿದೆ. ನಟಿಯೇ ಪತಿಯ ವಿರುದ್ಧ ಫೋನ್ ಟ್ಯಾಪಿಂಗ್ ಮಾಡಿಸಿದ್ದರು ಎನ್ನಲಾಗುತ್ತಿದೆ. ಕೆಲವೇ ದಿನಗಳಲ್ಲಿ ಜನಪ್ರಿಯ ನಟಿಯರನ್ನು ವಿಚಾರಣೆಗೆ ಪೊಲೀಸರು ಆಹ್ವಾನಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:ಕಂಬ್ಯಾಕ್ ಮಾಡೋಕೆ ರೆಡಿ ಆದ ನಟಿ ನಭಾ ನಟೇಶ್

ದಕ್ಷಿಣ ಭಾರತದ ವಿಶೇಷವಾಗಿ ತೆಲುಗು ಚಿತ್ರರಂಗದ ಹಲವು ನಟಿಯರ ಫೋನ್ ಟ್ಯಾಪ್ ಮಾಡಲಾಗಿತ್ತು ಎನ್ನಲಾಗಿದೆ. ಮಾತ್ರವಲ್ಲದೆ, ಫೋನ್ ಟ್ಯಾಪಿಂಗ್​ನಿಂದ ನಟಿಯರ ಖಾಸಗಿ ಜೀವನದ ವಿಷಯಗಳನ್ನು ತಿಳಿದುಕೊಂಡು ಅವರನ್ನು ಬ್ಲಾಕ್​ಮೇಲ್ ಮಾಡಿ ಹಣ ಪಡೆಯಲಾಗಿತ್ತು ಎನ್ನಲಾಗುತ್ತಿದೆ. ತಾವು ರಾಜಕಾರಣಿಗಳ, ಉದ್ಯಮಿಗಳ ಹಾಗೂ ನಟ-ನಟಿಯರ ಫೋನ್ ಟ್ಯಾಪಿಂಗ್ ಮಾಡುತ್ತಿದ್ದುದಾಗಿ ಬಂಧಿತ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ತೆಲಂಗಾಣ ರಾಜ್ಯ ಗುಪ್ತಚರ ಇಲಾಖೆಯವರೇ ಈ ಹಿಂದಿನ ಸರ್ಕಾರದ ಸೂಚನೆಯ ಮೇರೆಗೆ ಫೋನ್ ಟ್ಯಾಪಿಂಗ್ ಅನ್ನು ಕಾಂಗ್ರೆಸ್ ಹಾಗೂ ಇತರೆ ರಾಜಕೀಯ ಮುಖಂಡರ ವಿರುದ್ಧ ಮಾಡಿಸಿತ್ತು ಎನ್ನಲಾಗುತ್ತಿದೆ. ಫೋನ್ ಟ್ಯಾಪಿಂಗ್​ಗಾಗಿ ಇಟಲಿಯಿಂದ ಕೆಲವು ವಸ್ತುಗಳನ್ನು ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿತ್ತು. ಯಾವ ವ್ಯಕ್ತಿಯ ಫೋನ್ ಟ್ಯಾಪಿಂಗ್ ಮಾಡಬೇಕೋ ಆತ ಇರುವ ಜಾಗದಿಂದ 300 ಮೀಟರ್ ರೇಡಿಯಸ್​ನಲ್ಲಿ ಯಂತ್ರವನ್ನು ಇಟ್ಟರೆ ಸಾಕಿತ್ತು. ತೆಲಂಗಾಣದ ಹಾಲಿ ಸಿಎಂ ರೇವಂತ್ ರೆಡ್ಡಿಯ ಫೋನ್ ಸಹ ಟ್ಯಾಪ್ ಮಾಡಲಾಗಿತ್ತು. ಅಲ್ಲದೆ ಹಲವು ಉದ್ಯಮಿಗಳ ಫೋನ್ ಟ್ಯಾಪಿಂಗ್ ಮಾಡಿ ಹಲವರನ್ನು ಬ್ಲಾಕ್​ಮೇಲ್ ಮಾಡಿ ಹಣ ವಸೂಲಿ ಮಾಡಲಾಗಿತ್ತು ಎನ್ನಲಾಗಿದ್ದು. ಪ್ರಕರಣದ ತನಿಖೆ ಜಾರಿಯಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್