Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಕೈಯಿಂದ ಮೊಬೈಲ್​ ಕಿತ್ತುಕೊಂಡ ಯುವಕ; ಹೇಗಿತ್ತು ನಟಿಯ ರಿಯಾಕ್ಷನ್​?

Rashmika Mandanna Viral Video: ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್​ ಅನ್ನು ರಶ್ಮಿಕಾ ಮಂದಣ್ಣ ಹಿಡಿದುಕೊಂಡರು. ಆಗ ಅದನ್ನು ಆತ ವಾಪಸ್​ ಕಿತ್ತುಕೊಂಡಿದ್ದಾನೆ.

Rashmika Mandanna: ರಶ್ಮಿಕಾ ಮಂದಣ್ಣ ಕೈಯಿಂದ ಮೊಬೈಲ್​ ಕಿತ್ತುಕೊಂಡ ಯುವಕ; ಹೇಗಿತ್ತು ನಟಿಯ ರಿಯಾಕ್ಷನ್​?
ರಶ್ಮಿಕಾ ಮಂದಣ್ಣ
Follow us
ಮದನ್​ ಕುಮಾರ್​
|

Updated on:Jul 11, 2023 | 10:58 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿರುವ ಅವರು ಹೆಚ್ಚಾಗಿ ಮುಂಬೈನಲ್ಲೇ ಇರುತ್ತಾರೆ. ಅವರನ್ನು ಕಂಡಾಗಲೆಲ್ಲ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಒಂದೇ ಒಂದು ಸೆಲ್ಫಿ ಸಿಕ್ಕರೂ ಸಾಕು ಎಂದು ಜನರು ಬಯಸುತ್ತಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಮುಂಬೈನಲ್ಲಿ ಶೂಟಿಂಗ್​ ಮಾಡುವಾಗ ಹಾಗೆಯೇ ಆಯಿತು. ಅವರ ಕ್ಯಾರವ್ಯಾನ್​ ಎದುರು ಒಂದಷ್ಟು ಅಭಿಮಾನಿಗಳು (Rashmika Mandanna Fans) ಜಮಾಯಿಸಿದ್ದರು. ಕ್ಯಾರವ್ಯಾನ್​ನಿಂದ ಹೊರಬಂದ ರಶ್ಮಿಕಾ ಅವರು ಎಲ್ಲರಿಗೂ ತಾಳ್ಮೆಯಿಂದ ಸೆಲ್ಫಿ ನೀಡುತ್ತಿದ್ದರು. ಅಭಿಮಾನಿಯೊಬ್ಬನು ರಶ್ಮಿಕಾ ಅವರ ಕೈಯಲ್ಲಿದ್ದ ಮೊಬೈಲ್​ ಕಿತ್ತುಕೊಂಡಿದ್ದಾನೆ. ಆ ವಿಡಿಯೋ (Rashmika Mandanna Viral Video) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಸೆಲೆಬ್ರಿಟಿಗಳ ಜೊತೆ ಅಭಿಮಾನಿಗಳು ಕೆಲವೊಮ್ಮೆ ಮಿತಿ ಮೀರಿ ನಡೆದುಕೊಳ್ಳುತ್ತಾರೆ. ಆಗ ಅವರಿಗೆ ಕೋಪ ಬರುವುದು ಸಹಜ. ಆದರೆ ರಶ್ಮಿಕಾ ಮಂದಣ್ಣ ಅವರು ಕೋಪ ಮಾಡಿಕೊಂಡಿಲ್ಲ. ಆ ಪರಿಸ್ಥಿತಿಯನ್ನು ಅವರು ತುಂಬ ಕೂಲ್​ ಆಗಿ ನಿಭಾಯಿಸಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್​ ಅನ್ನು ರಶ್ಮಿಕಾ ಹಿಡಿದುಕೊಂಡರು. ಆಗ ಅದನ್ನು ಆತ ವಾಪಸ್​ ಕಿತ್ತುಕೊಂಡಿದ್ದಾನೆ. ಆ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಅವರು ನಗುತ್ತಲೇ ಪ್ರತಿಕ್ರಿಯಿಸಿದ್ದಾರೆ. ಅವರು ಖಾರವಾಗಿ ರಿಯಾಕ್ಷನ್​ ನೀಡಿಲ್ಲ.

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ರಶ್ಮಿಕಾ ಮಂದಣ್ಣ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆದರು. ದಕ್ಷಿಣ ಭಾರತದ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಅವರಿಗೆ ಬೇಡಿಕೆ ಇದೆ. ರಣಬೀರ್​ ಕಪೂರ್​ ಜೊತೆ ಅವರು ‘ಅನಿಮಲ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಸಂದೀಪ್​ ರೆಡ್ಡಿ ವಂಗ ನಿರ್ದೇಶನ ಮಾಡಿರುವ ಈ ಸಿನಿಮಾ ಡಿಸೆಂಬರ್​ 1ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Rashmika Mandanna: ಬ್ರೇಕಪ್​ ಸುಳಿವು ನೀಡಿದ ರಶ್ಮಿಕಾ ಮಂದಣ್ಣ: ನಟಿಯ ಜೀವನದಿಂದ ಈಗ ದೂರಾಗಿದ್ದು ಯಾರು?

ಸದ್ಯಕ್ಕೆ ರಶ್ಮಿಕಾ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲು ಅರ್ಜುನ್​ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಹಲವು ಪ್ರತಿಷ್ಠಿತ ಕಂಪನಿಗಳಿಗೆ ರಶ್ಮಿಕಾ ಮಂದಣ್ಣ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಹತ್ತು ಹಲವು ಜಾಹೀರಾತುಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದು, ಅವುಗಳ ಶೂಟಿಂಗ್​ನಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:57 am, Tue, 11 July 23

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು