ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ

ಆರಂಭದಲ್ಲಿ ರಾಮ್​ ಚರಣ್​ ಹಾಗೂ ಜ್ಯೂ. ಎನ್​ಟಿಆರ್​ ಅಭಿಮಾನಿಗಳ ನಡುವೆ ಆರೋಗ್ಯಕರ ಚರ್ಚೆಯೇ ಇತ್ತು. ಆದರೆ, ನಂತರ ಇದು ಮಿತಿಮೀರಿದೆ. ಇಬ್ಬರ ಅಭಿಮಾನಿಗಳು ಪರಸ್ಪರ ಬೈದುಕೊಂಡಿದ್ದಾರೆ.

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ
ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Follow us
|

Updated on: May 22, 2021 | 3:40 PM

ಫ್ಯಾನ್ಸ್​ ವಾರ್​ಗಳು ಹುಟ್ಟಿಕೊಳ್ಳೋದು ಸಿನಿಮಾ ಇಂಡಸ್ಟ್ರಿಗೆ ಹೊಸದೇನಲ್ಲ. ಹೀರೋಗಳು ಎಷ್ಟೇ ಅನ್ಯೋನ್ಯವಾಗಿದ್ದರೂ, ಫ್ಯಾನ್ಸ್ ಮಾತ್ರ ಸುಮ್ಮನಿರುವುದಿಲ್ಲ. ಚಿಕ್ಕಚಿಕ್ಕ ಕಾರಣಕ್ಕೆ ಜಗಳ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ವಾರ್​ ನಡೆಸುತ್ತಾರೆ. ಈಗ ಟಾಲಿವುಡ್​ನಲ್ಲಿ ಫ್ಯಾನ್ಸ್​ ವಾರ್​ ಹುಟ್ಟಿಕೊಂಡಿದೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ಚರಣ್​ ಅಭಿಮಾನಿಗಳ ನಡುವೆ ಕಿತ್ತಾಟ ಆರಂಭವಾಗಿದ್ದು, #FanBaselessRamCharan ಮತ್ತು #FanBaselessNTR ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ.

ಅಷ್ಟಕ್ಕೂ ಈ ಫ್ಯಾನ್​ ವಾರ್​ ಆರಂಭವಾಗೋಕೆ ಕಾರಣವೇನು? ಅದಕ್ಕೂ ಉತ್ತರವಿದೆ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ಆರ್​​ಆರ್​ಆರ್​ ಸಿನಿಮಾದಲ್ಲಿ ರಾಮ್​ ಚರಣ್​ ಹಾಗೂ ಜ್ಯೂ.ಎನ್​ಟಿಆರ್​ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್​ ನಡೆಯುವಾಗಲೇ ಸಿನಿಮಾದ ಡಿಜಿಟಲ್​ ಹಕ್ಕು ಬರೋಬ್ಬರಿ 325 ಕೋಟಿ ರೂಪಾಯಿಗೆ ಮಾರಾಟವಾಗಿದೆ.

ರಾಜಮೌಳಿ ಸಿನಿಮಾ ಎಂದರೆ ನಿರೀಕ್ಷೆ ಹಾಗೂ ಅದ್ದೂರಿತನ ಇದ್ದೇ ಇರುತ್ತದೆ. ಈ ಕಾರಣಕ್ಕೆ ಜೀ5 ಇಷ್ಟು ದೊಡ್ಡ ಮೊತ್ತಕ್ಕೆ ಸಿನಿಮಾ ಡಿಜಿಟಲ್ ರೈಟ್ಸ್​ ಖರೀದಿಸಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ, ಈ ಸಿನಿಮಾಗೆ ಇಷ್ಟು ಬೇಡಿಕೆ ಬರುವುದಕ್ಕೆ ತಮ್ಮ ನೆಚ್ಚಿನ ನಟನೇ ಕಾರಣ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ.

ಇಲ್ಲೊಂದು ಅಚ್ಚರಿಯ ವಿಚಾರವಿದೆ. ರಾಮ್​ ಚರಣ್​ ಹಾಗೂ ಜ್ಯೂ. ಎನ್​ಟಿಆರ್​ ಇಬ್ಬರೂ ಉತ್ತಮ ಗೆಳೆಯರು. ಇಬ್ಬರೂ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಇಬ್ಬರ ನಡುವೆ ಇಷ್ಟು ಗೆಳೆತನವಿದ್ದರೂ, ಅಭಿಮಾನಿಗಳು ಈ ರೀತಿ ಕಿತ್ತಾಡುತ್ತಿರುವುದು ಅನೇಕರಿಗೆ ಬೇಸರ ತರಿಸಿದೆ.

ಆರ್​ಆರ್​ಆರ್​ ಸಿನಿಮಾದಲ್ಲಿ ರಾಮ್​ಚರಣ್​, ಜ್ಯೂ. ಎನ್​ಟಿಆರ್​, ಅಜಯ್​ ದೇವಗನ್​, ಆಲಿಯಾ ಭಟ್​ ಸೇರಿ ಸಾಕಷ್ಟು ಜನರು ನಟಿಸುತ್ತಿದ್ದಾರೆ. ಕೊವಿಡ್ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿದೆ. ಬಾಹುಬಲಿ ನಂತರ ತೆರೆಕಾಣುತ್ತಿರುವ ರಾಜಮೌಳಿ ನಿರ್ದೇಶನದ ಅದ್ದೂರಿ ಸಿನಿಮಾ ಇದಾಗಿದೆ. ಇತ್ತೀಚೆಗೆ ಜ್ಯೂ. ಎನ್​ಟಿಆರ್​ ಜನ್ಮದಿನದ ಅಂಗವಾಗಿ ಪೋಸ್ಟರ್​ ಒಂದನ್ನು ರಿಲೀಸ್​ ಮಾಡಲಾಗಿತ್ತು.

ಇದನ್ನೂ ಓದಿ: ಜ್ಯೂ. ಎನ್​​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ; ಸ್ಟಾರ್​ ನಟನ ಜನ್ಮದಿನದಂದು ಹೊರಬಿತ್ತು ಸುದ್ದಿ

RRR Ott Rights: 325 ಕೋಟಿ ರೂ.ಗೆ ಸೇಲ್​ ಆಯ್ತು ಆರ್​ಆರ್​ಆರ್ ಚಿತ್ರ; ಯಾವ ಓಟಿಟಿಯಲ್ಲಿ ಪ್ರಸಾರ?

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್