AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ

ಆರಂಭದಲ್ಲಿ ರಾಮ್​ ಚರಣ್​ ಹಾಗೂ ಜ್ಯೂ. ಎನ್​ಟಿಆರ್​ ಅಭಿಮಾನಿಗಳ ನಡುವೆ ಆರೋಗ್ಯಕರ ಚರ್ಚೆಯೇ ಇತ್ತು. ಆದರೆ, ನಂತರ ಇದು ಮಿತಿಮೀರಿದೆ. ಇಬ್ಬರ ಅಭಿಮಾನಿಗಳು ಪರಸ್ಪರ ಬೈದುಕೊಂಡಿದ್ದಾರೆ.

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ
ರಾಮ್​ ಚರಣ್​, ಜ್ಯೂ. ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on: May 22, 2021 | 3:40 PM

Share

ಫ್ಯಾನ್ಸ್​ ವಾರ್​ಗಳು ಹುಟ್ಟಿಕೊಳ್ಳೋದು ಸಿನಿಮಾ ಇಂಡಸ್ಟ್ರಿಗೆ ಹೊಸದೇನಲ್ಲ. ಹೀರೋಗಳು ಎಷ್ಟೇ ಅನ್ಯೋನ್ಯವಾಗಿದ್ದರೂ, ಫ್ಯಾನ್ಸ್ ಮಾತ್ರ ಸುಮ್ಮನಿರುವುದಿಲ್ಲ. ಚಿಕ್ಕಚಿಕ್ಕ ಕಾರಣಕ್ಕೆ ಜಗಳ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ವಾರ್​ ನಡೆಸುತ್ತಾರೆ. ಈಗ ಟಾಲಿವುಡ್​ನಲ್ಲಿ ಫ್ಯಾನ್ಸ್​ ವಾರ್​ ಹುಟ್ಟಿಕೊಂಡಿದೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ಚರಣ್​ ಅಭಿಮಾನಿಗಳ ನಡುವೆ ಕಿತ್ತಾಟ ಆರಂಭವಾಗಿದ್ದು, #FanBaselessRamCharan ಮತ್ತು #FanBaselessNTR ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ.

ಅಷ್ಟಕ್ಕೂ ಈ ಫ್ಯಾನ್​ ವಾರ್​ ಆರಂಭವಾಗೋಕೆ ಕಾರಣವೇನು? ಅದಕ್ಕೂ ಉತ್ತರವಿದೆ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ಆರ್​​ಆರ್​ಆರ್​ ಸಿನಿಮಾದಲ್ಲಿ ರಾಮ್​ ಚರಣ್​ ಹಾಗೂ ಜ್ಯೂ.ಎನ್​ಟಿಆರ್​ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್​ ನಡೆಯುವಾಗಲೇ ಸಿನಿಮಾದ ಡಿಜಿಟಲ್​ ಹಕ್ಕು ಬರೋಬ್ಬರಿ 325 ಕೋಟಿ ರೂಪಾಯಿಗೆ ಮಾರಾಟವಾಗಿದೆ.

ರಾಜಮೌಳಿ ಸಿನಿಮಾ ಎಂದರೆ ನಿರೀಕ್ಷೆ ಹಾಗೂ ಅದ್ದೂರಿತನ ಇದ್ದೇ ಇರುತ್ತದೆ. ಈ ಕಾರಣಕ್ಕೆ ಜೀ5 ಇಷ್ಟು ದೊಡ್ಡ ಮೊತ್ತಕ್ಕೆ ಸಿನಿಮಾ ಡಿಜಿಟಲ್ ರೈಟ್ಸ್​ ಖರೀದಿಸಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ, ಈ ಸಿನಿಮಾಗೆ ಇಷ್ಟು ಬೇಡಿಕೆ ಬರುವುದಕ್ಕೆ ತಮ್ಮ ನೆಚ್ಚಿನ ನಟನೇ ಕಾರಣ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ.

ಇಲ್ಲೊಂದು ಅಚ್ಚರಿಯ ವಿಚಾರವಿದೆ. ರಾಮ್​ ಚರಣ್​ ಹಾಗೂ ಜ್ಯೂ. ಎನ್​ಟಿಆರ್​ ಇಬ್ಬರೂ ಉತ್ತಮ ಗೆಳೆಯರು. ಇಬ್ಬರೂ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಇಬ್ಬರ ನಡುವೆ ಇಷ್ಟು ಗೆಳೆತನವಿದ್ದರೂ, ಅಭಿಮಾನಿಗಳು ಈ ರೀತಿ ಕಿತ್ತಾಡುತ್ತಿರುವುದು ಅನೇಕರಿಗೆ ಬೇಸರ ತರಿಸಿದೆ.

ಆರ್​ಆರ್​ಆರ್​ ಸಿನಿಮಾದಲ್ಲಿ ರಾಮ್​ಚರಣ್​, ಜ್ಯೂ. ಎನ್​ಟಿಆರ್​, ಅಜಯ್​ ದೇವಗನ್​, ಆಲಿಯಾ ಭಟ್​ ಸೇರಿ ಸಾಕಷ್ಟು ಜನರು ನಟಿಸುತ್ತಿದ್ದಾರೆ. ಕೊವಿಡ್ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿದೆ. ಬಾಹುಬಲಿ ನಂತರ ತೆರೆಕಾಣುತ್ತಿರುವ ರಾಜಮೌಳಿ ನಿರ್ದೇಶನದ ಅದ್ದೂರಿ ಸಿನಿಮಾ ಇದಾಗಿದೆ. ಇತ್ತೀಚೆಗೆ ಜ್ಯೂ. ಎನ್​ಟಿಆರ್​ ಜನ್ಮದಿನದ ಅಂಗವಾಗಿ ಪೋಸ್ಟರ್​ ಒಂದನ್ನು ರಿಲೀಸ್​ ಮಾಡಲಾಗಿತ್ತು.

ಇದನ್ನೂ ಓದಿ: ಜ್ಯೂ. ಎನ್​​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ; ಸ್ಟಾರ್​ ನಟನ ಜನ್ಮದಿನದಂದು ಹೊರಬಿತ್ತು ಸುದ್ದಿ

RRR Ott Rights: 325 ಕೋಟಿ ರೂ.ಗೆ ಸೇಲ್​ ಆಯ್ತು ಆರ್​ಆರ್​ಆರ್ ಚಿತ್ರ; ಯಾವ ಓಟಿಟಿಯಲ್ಲಿ ಪ್ರಸಾರ?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ