AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಹಿಟ್ ಚಿತ್ರದ ಕಥೆ ಕದ್ದರಾ ‘ರಾಧೆ ಶ್ಯಾಮ್’ ಸಿನಿಮಾ ನಿರ್ದೇಶಕರು? ಶುರುವಾಯ್ತು ಚರ್ಚೆ

‘ಬಾಹುಬಲಿ’ ಸಿನಿಮಾ ನಂತರದಲ್ಲಿ ಪ್ರಭಾಸ್​ ಬೇಡಿಕೆ ಹೆಚ್ಚಿದೆ. ‘ಬಾಹುಬಲಿ 2’ ಬಳಿಕ ತೆರೆಕಂಡ ‘ಸಾಹೋ’ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆ ಹುಸಿಯಾಗಿತ್ತು. ಈಗ ‘ರಾಧೆ ಶ್ಯಾಮ್​’ ಚಿತ್ರದಿಂದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಆಗಿದೆ.

ಸೂಪರ್ ಹಿಟ್ ಚಿತ್ರದ ಕಥೆ ಕದ್ದರಾ ‘ರಾಧೆ ಶ್ಯಾಮ್’ ಸಿನಿಮಾ ನಿರ್ದೇಶಕರು? ಶುರುವಾಯ್ತು ಚರ್ಚೆ
ಮುರಾರಿ-ರಾಧೆ ಶ್ಯಾಮ್
TV9 Web
| Edited By: |

Updated on: Mar 12, 2022 | 8:18 AM

Share

ಪ್ರಭಾಸ್ (Prabhas) ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ (Radhe Shyam Movie) ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ವಿಮರ್ಶಕರಿಂದ ನೆಗೆಟಿವ್​ ಕಮೆಂಟ್​ಗಳು ಬಂದಿವೆ. ಸಿನಿಮಾ ಬೋರಿಂಗ್​ ಆಗಿದೆ ಎಂದು ಸ್ವತಃ ಪ್ರಭಾಸ್​ ಅಭಿಮಾನಿಗಳು ಬೈದುಕೊಳ್ಳುತ್ತಿದ್ದಾರೆ. ಚಿತ್ರದ ಬಜೆಟ್​ 300 ಕೋಟಿ ರೂಪಾಯಿ ದಾಟಿದ್ದು, ಈ ಸಿನಿಮಾ ಅಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡೋದು ಅನುಮಾನ ಎನ್ನುವ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಹೀಗಿರುವಾಗಲೇ, ‘ರಾಧೆ ಶ್ಯಾಮ್​’ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಈ ಮೊದಲು ತೆಲುಗಿನಲ್ಲಿ ತೆರೆ ಕಂಡ ಸೂಪರ್ ಹಿಟ್​ ಚಿತ್ರದ ಕಥೆಯನ್ನೇ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ ಎಂದು ಒಂದು ವರ್ಗದ ಜನರು​ ಆರೋಪ ಮಾಡುತ್ತಿದ್ದಾರೆ.

2001ರಲ್ಲಿ ತೆರೆಗೆ ಬಂದ ಮಹೇಶ್​ ಬಾಬು ನಟನೆಯ ‘ಮುರಾರಿ’ ಸಿನಿಮಾ ಸೂಪರ್ ಹಿಟ್​ ಆಗಿತ್ತು. ಈ ಚಿತ್ರವನ್ನು ಎಲ್ಲರೂ ಕೊಂಡಾಡಿದ್ದರು. ‘ರಾಧೆ ಶ್ಯಾಮ್​’ ಸಿನಿಮಾದ ಒಂದೆಳೆ ಈ ಚಿತ್ರದ ಕಥೆಯನ್ನು ಹೋಲುತ್ತದೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

‘ರಾಧೆ ಶ್ಯಾಮ್’ ಚಿತ್ರದಲ್ಲಿ ಕಥಾ ನಾಯಕ ಭವಿಷ್ಯವನ್ನು ಸಂಪೂರ್ಣವಾಗಿ ನಂಬುತ್ತಾನೆ. ಆದರೆ, ಕ್ಲೈಮ್ಯಾಕ್ಸ್​ನಲ್ಲಿ ತನ್ನ ಹಣೆಬರಹ ಬದಲಾಯಿಸಿಕೊಳ್ಳುತ್ತಾನೆ. ಮಹೇಶ್ ಬಾಬು ನಟನೆಯ ‘ಮುರಾರಿ’ ಸಿನಿಮಾ ಕೂಡ ಇದೇ ರೀತಿಯ ಕಥೆಯನ್ನು ಹೊಂದಿತ್ತು. ಆದರೆ, ಸಿನಿಮಾ ನಿರೂಪಣೆ ಅದ್ಭುತವಾಗಿದ್ದರಿಂದ ಜನರು ಮೆಚ್ಚಿಕೊಂಡಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ.

ಒಂದು ತಪ್ಪಿನಿಂದ ಮುರಾರಿ ಕುಟುಂಬದವರು ಶಾಪ ಎದುರಿಸುತ್ತಿರುತ್ತಾರೆ. ಆದರೆ, ಕೊನೆಯಲ್ಲಿ ಮುರಾರಿ ಇದನ್ನು ಬದಲಾಯಿಸುತ್ತಾನೆ. ‘ರಾಧೆ ಶ್ಯಾಮ್​’ ಸಿನಿಮಾದಲ್ಲಿ ಶಾಪದ ವಿಚಾರ ಇಲ್ಲ. ಆದರೆ, ಕ್ಲೈಮ್ಯಾಕ್ಸ್​​ನಲ್ಲಿ ಕಥಾ ನಾಯಕ ಹಣೆಬರಹವನ್ನೇ ಬದಲಾಯಿಸಿಕೊಳ್ಳುತ್ತಾನೆ. ಈ ವಿಚಾರದಲ್ಲಿ ಹೋಲಿಕೆ ಮಾಡಿ ಚರ್ಚೆಗಳು ನಡೆಯುತ್ತಿವೆ.

‘ಬಾಹುಬಲಿ’ ಸಿನಿಮಾ ನಂತರದಲ್ಲಿ ಪ್ರಭಾಸ್​ ಬೇಡಿಕೆ ಹೆಚ್ಚಿದೆ. ‘ಬಾಹುಬಲಿ 2’ ಬಳಿಕ ತೆರೆಕಂಡ ‘ಸಾಹೋ’ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆ ಹುಸಿಯಾಗಿತ್ತು. ಈಗ ‘ರಾಧೆ ಶ್ಯಾಮ್​’ ಚಿತ್ರದಿಂದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಆಗಿದೆ. ಮೊದಲ ದಿನ ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣೋದಕ್ಕೆ ವಿಫಲವಾಗಿದೆ. ಸಿನಿಮಾದಲ್ಲಿ ಯಾವುದೇ ಫೈಟ್ ಇಲ್ಲದೆ ಇರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

‘ರಾಧೆ ಶ್ಯಾಮ್’ ವಿಮರ್ಶೆ​: ಭವಿಷ್ಯ ಹೇಳುವ ವ್ಯಕ್ತಿಯ ಕೈಯಲ್ಲಿ ಇಲ್ಲ ಮನರಂಜನೆಯ ರೇಖೆ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!