AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ನ್ಯಾಷನಲ್ ಅವಾರ್ಡ್​ ಪಡೆಯುತ್ತಾರಾ ಅಲ್ಲು ಅರ್ಜುನ್? ಈಗಲೇ ಶುರುವಾಗಿದೆ ಚರ್ಚೆ

‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ನಟನೆಯನ್ನು ನೋಡಿದ ಪ್ರೇಕ್ಷಕರು ಭೇಷ್​ ಎನ್ನುತ್ತಿದ್ದಾರೆ. ಮತ್ತೊಮ್ಮೆ ಅವರಿಗೆ ನ್ಯಾಷನಲ್ ಅವಾರ್ಡ್​ ಸಿಗಬೇಕು ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಇಂದು (ಡಿಸೆಂಬರ್​ 5) ಬಿಡುಗಡೆ ಆಗಿರುವ ‘ಪುಷ್ಪ 2’ ಸಿನಿಮಾ ಎಲ್ಲ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದ್ದು, ಭರ್ಜರಿ ಕಲೆಕ್ಷನ್​ ಆಗುತ್ತಿದೆ.

ಮತ್ತೊಮ್ಮೆ ನ್ಯಾಷನಲ್ ಅವಾರ್ಡ್​ ಪಡೆಯುತ್ತಾರಾ ಅಲ್ಲು ಅರ್ಜುನ್? ಈಗಲೇ ಶುರುವಾಗಿದೆ ಚರ್ಚೆ
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Dec 05, 2024 | 9:27 PM

Share

‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ತೆಲುಗು ನಟ ಎಂಬ ಖ್ಯಾತಿ ಅಲ್ಲು ಅರ್ಜುನ್ ಅವರಿಗೆ ಇದೆ. ‘ಪುಷ್ಪ’ ಸಿನಿಮಾದಲ್ಲಿನ ನಟನೆಗಾಗಿ ಅವರು ಆ ಪ್ರತಿಷ್ಠಿತ ಪ್ರಶಸ್ತಿ ಪಡೆದರು. ಈ ಸಾಧನೆಗಾಗಿ ಅಲ್ಲು ಅರ್ಜುನ್ ಅವರ ಆಪ್ತರು ಮತ್ತು ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಪಟ್ಟರು. ಈಗ ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರ ನಟನೆಗೆ ಪ್ರೇಕ್ಷಕರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಈ ಬಾರಿಯೂ ಅಲ್ಲು ಅರ್ಜುನ್ ಅವರು ‘ಅತ್ಯುತ್ತಮ ನಟ’ ನ್ಯಾಷನಲ್ ಅವಾರ್ಡ್​ ಪಡೆಯುತ್ತಾರಾ ಎಂಬ ಚರ್ಚೆ ಅಭಿಮಾನಿಗಳ ವಲಯದಲ್ಲಿ ಶುರುವಾಗಿದೆ.

ಅಲ್ಲು ಅರ್ಜುನ್ ಅವರು ಟಾಲಿವುಡ್​ಗೆ ಮಾತ್ರ ಸೀಮಿತವಲ್ಲ. ‘ಪುಷ್ಪ’ ಸಿನಿಮಾ ತೆರೆಕಂಡ ಬಳಿಕ ಅವರು ಉತ್ತರ ಭಾರತದಲ್ಲಿ ಅಪಾರ ಜನಪ್ರಿಯತೆ ಪಡೆದುಕೊಂಡರು. ರಾಷ್ಟ್ರ ಪ್ರಶಸ್ತಿ ಬಂದ ಬಳಿಕ ಅವರ ಮೇಲೆ ಜನರ ನಿರೀಕ್ಷೆ ಜಾಸ್ತಿ ಆಯಿತು. ಅದಕ್ಕೆ ತಕ್ಕಂತೆಯೇ ‘ಪುಷ್ಪ 2’ ಸಿನಿಮಾ ಮೂಡಿಬಂದಿದೆ ಎಂದು ಫ್ಯಾನ್ಸ್ ಹೊಗಳುತ್ತಿದ್ದಾರೆ. ‘ಇನ್ನೊಂದು ನ್ಯಾಷನಲ್ ಅವಾರ್ಡ್​ ಗ್ಯಾರಂಟಿ’ ಎಂದು ಅಭಿಮಾನಿಗಳು ಸೋಶಿಯಲ್ ಮಿಡಿಯಾದಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರ ಗೆಟಪ್ ಮತ್ತು ಮ್ಯಾನರಿಸಂ ಭಿನ್ನವಾಗಿದೆ. ಆ್ಯಕ್ಷನ್​ ದೃಶ್ಯಗಳಲ್ಲಿ ಅವರು ಅಬ್ಬರಿಸಿದ್ದಾರೆ. ಮಾಸ್ ಪ್ರೇಕ್ಷಕರಿಗೆ ಬೇಕಾದ ಮನರಂಜನೆಯನ್ನು ಅವರು ನೀಡಿದ್ದಾರೆ. ಜಾತ್ರೆ ಸನ್ನಿವೇಶ ಮತ್ತು ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಅಲ್ಲು ಅರ್ಜುನ್ ಅವರ ನಟನೆಗೆ ಹೆಚ್ಚುವರಿ ಚಪ್ಪಾಳೆ ಕೇಳಿಬರುತ್ತಿದೆ. ಪ್ರೇಕ್ಷಕರು ಈ ದೃಶ್ಯಗಳನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ನೋಡಲು ಫ್ಯಾಮಿಲಿ ಸಮೇತ ಬಂದ ಅಲ್ಲು ಅರ್ಜುನ್ ಅಭಿಮಾನಿಗಳು

ಸುಕುಮಾರ್ ಅವರ ನಿರ್ದೇಶನದಲ್ಲಿ ‘ಪುಷ್ಪ 2’ ಸಿನಿಮಾ ಮೂಡಿಬಂದಿದೆ. ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದ ರೀತಿಯಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಬಂಗಾರದ ಬೆಳೆ ತೆಗೆಯುತ್ತಿದೆ. ಬಹುತೇಕ ಎಲ್ಲ ಚಿತ್ರಮಂದಿರಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ನಟಿ ರಶ್ಮಿಕಾ ಮಂದಣ್ಣ ಅವರ ನಟನೆಗೂ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಒಟ್ಟಾರೆ ಸಿನಿಮಾ ಸೂಪರ್​ ಹಿಟ್ ಆಗಿದೆ. ಈ ಮೊದಲು ಅಬ್ಬರಿಸಿದ್ದ ಸಿನಿಮಾಗಳ ದಾಖಲೆಗಳನ್ನೆಲ್ಲ ‘ಪುಷ್ಪ 2’ ಚಿತ್ರ ಮುರಿಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ