AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ

ಭಾರೀ ನಿರೀಕ್ಷೆಗಳೊಂದಿಗೆ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬಂದಿತ್ತು. ಸಿನಿಮಾ ತೆರೆಕಂಡ ಎರಡೇ ದಿನಕ್ಕೆ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ತಡೆ ನೀಡಿತ್ತು. ಇದು ಅಭಿಮಾನಿಗಳು ಹಾಗೂ ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿತ್ತು.

Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ
ಯುವರತ್ನದಲ್ಲಿ ಪುನೀತ್​
ರಾಜೇಶ್ ದುಗ್ಗುಮನೆ
|

Updated on:Apr 08, 2021 | 3:08 PM

Share

ನೆಚ್ಚಿನ ನಟನ ಸಿನಿಮಾ ಚಿತ್ರಮಂದಿರದಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಬೇಕು, 100 ದಿನ ಓಡಬೇಕು ಎಂಬುದು ಫ್ಯಾನ್ಸ್​ ಆಸೆ. ಆದರೆ, ಕೆಲವೊಮ್ಮೆ ಸಿನಿಮಾ ಅಂದುಕೊಂಡ ರೀತಿಯಲ್ಲಿ ಮೂಡಿ ಬಂದಿರುವುದಿಲ್ಲ. ಹೀಗಾದಾಗ, ಅಭಿಮಾನಿಗಳಿಗೆ ಬೇಸರ ಆಗಿಯೇ ಆಗುತ್ತದೆ. ಆದರೆ, ಸಿನಿಮಾ ಉತ್ತಮವಾಗಿದ್ದೂ, ಯಶಸ್ಸು ಕಂಡಿಲ್ಲ ಎಂದರೆ ಅಭಿಮಾನಿಗಳಿಗೆ ದುಪ್ಪಟ್ಟು ಬೇಸರವಾಗುತ್ತದೆ. ಈಗ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​ಗೂ ಇದೇ ರೀತಿ ಆಗಿದೆ. ಯುವರತ್ನ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಎರಡನೇ ವಾರಕ್ಕೆ ಚಿತ್ರ ಒಟಿಟಿಯಲ್ಲಿ ರಿಲೀಸ್​ ಆಗುತ್ತಿರುವುದು ಬೇಸರ ತರಿಸಿದೆ. ಭಾರೀ ನಿರೀಕ್ಷೆಗಳೊಂದಿಗೆ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬಂದಿತ್ತು. ಸಿನಿಮಾ ತೆರೆಕಂಡ ಎರಡೇ ದಿನಕ್ಕೆ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ತಡೆ ನೀಡಿತ್ತು. ಇದು ಅಭಿಮಾನಿಗಳು ಹಾಗೂ ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ಪುನೀತ್​ ಹಾಗೂ ಅಭಿಮಾನಿಗಳ ಮನವಿಗೆ ಮಣಿದ ಸರ್ಕಾರ ಕೆಲ ದಿನಗಳವರೆಗೆ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿತ್ತು.

ಈಗ ಚಿತ್ರಮಂದಿರಗಳಲ್ಲಿ ಮತ್ತೆ ಶೇ. 50 ಆಸನ ವ್ಯವಸ್ಥೆ ಜಾರಿಗೆ ಬಂದಿದೆ. ಅಂದರೆ, ಥಿಯೇಟರ್​ನಲ್ಲಿರುವ ಒಟ್ಟು ಆಸನದಲ್ಲಿ ಅರ್ಧದಷ್ಟು ಮಂದಿ ಮಾತ್ರ ಕೂರಬಹುದು. ಹೀಗಾದಾಗ, ಫ್ಯಾಮಿಲಿ ಆಡಿಯನ್ಸ್​ ಚಿತ್ರಮಂದಿರಕ್ಕೆ ಹೋಗೋದು ಕಡಿಮೆ ಆಗಲಿದೆ. ಇದು ನೇರವಾಗಿ ಚಿತ್ರದ ಕಲೆಕ್ಷನ್​ ಮೇಲೆ ಪರಿಣಾಮ ಬೀರಲಿದೆ.

ಇದನ್ನು ಅರಿತ ಚಿತ್ರತಂಡ ಏಪ್ರಿಲ್​ 9ಕ್ಕೆ ಯುವರತ್ನ ಸಿನಿಮಾವನ್ನು ಪ್ರೈಮ್​ನಲ್ಲಿ ರಿಲೀಸ್​ ಮಾಡುತ್ತಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಪುನೀತ್​ ನಟನೆಯ ಸಿನಿಮಾ ರಿಲೀಸ್​ ಆದ ಎಂಟೇ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದೇಕೆ? ಹೀಗೆ ಮಾಡುತ್ತಿರುವುದು ಸರಿಯಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಒಟಿಟಿಯಲ್ಲಿ ಸಿನಿಮಾ ರಿಲೀಸ್​ ಆದರೆ ನಂತರ ಚಿತ್ರಮಂದಿರದತ್ತ ಯಾರೂ ಹೆಜ್ಜೆ ಹಾಕುವುದಿಲ್ಲ. ಹೀಗಾಗಿ, ಯುವರತ್ನ 25ನೇ ದಿನ ಸಂಭ್ರಮಾಚರಣೆಯನ್ನೂ ಆಚರಿಸಿಕೊಳ್ಳುವುದು ಅನುಮಾನವಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರಮೂಡಿಸಿದೆ.

ಇದನ್ನೂ ಓದಿ: Yuvarathnaa OTT Release: ಬಿಡುಗಡೆಯಾದ ಎಂಟೇ ಎಂಟು ದಿನಕ್ಕೆ ಅಮೇಜಾನ್​ ಪ್ರೈಂನತ್ತ ಮುಖ ಮಾಡಿದ ಯುವರತ್ನ; ಕೊರೊನಾ ಕಾಟದಿಂದ ಓಟಿಟಿಗೆ ಬಂದ ಚಿತ್ರ

Published On - 3:08 pm, Thu, 8 April 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ