Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ

ಭಾರೀ ನಿರೀಕ್ಷೆಗಳೊಂದಿಗೆ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬಂದಿತ್ತು. ಸಿನಿಮಾ ತೆರೆಕಂಡ ಎರಡೇ ದಿನಕ್ಕೆ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ತಡೆ ನೀಡಿತ್ತು. ಇದು ಅಭಿಮಾನಿಗಳು ಹಾಗೂ ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿತ್ತು.

Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ
ಯುವರತ್ನದಲ್ಲಿ ಪುನೀತ್​
Follow us
|

Updated on:Apr 08, 2021 | 3:08 PM

ನೆಚ್ಚಿನ ನಟನ ಸಿನಿಮಾ ಚಿತ್ರಮಂದಿರದಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಬೇಕು, 100 ದಿನ ಓಡಬೇಕು ಎಂಬುದು ಫ್ಯಾನ್ಸ್​ ಆಸೆ. ಆದರೆ, ಕೆಲವೊಮ್ಮೆ ಸಿನಿಮಾ ಅಂದುಕೊಂಡ ರೀತಿಯಲ್ಲಿ ಮೂಡಿ ಬಂದಿರುವುದಿಲ್ಲ. ಹೀಗಾದಾಗ, ಅಭಿಮಾನಿಗಳಿಗೆ ಬೇಸರ ಆಗಿಯೇ ಆಗುತ್ತದೆ. ಆದರೆ, ಸಿನಿಮಾ ಉತ್ತಮವಾಗಿದ್ದೂ, ಯಶಸ್ಸು ಕಂಡಿಲ್ಲ ಎಂದರೆ ಅಭಿಮಾನಿಗಳಿಗೆ ದುಪ್ಪಟ್ಟು ಬೇಸರವಾಗುತ್ತದೆ. ಈಗ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​ಗೂ ಇದೇ ರೀತಿ ಆಗಿದೆ. ಯುವರತ್ನ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಎರಡನೇ ವಾರಕ್ಕೆ ಚಿತ್ರ ಒಟಿಟಿಯಲ್ಲಿ ರಿಲೀಸ್​ ಆಗುತ್ತಿರುವುದು ಬೇಸರ ತರಿಸಿದೆ. ಭಾರೀ ನಿರೀಕ್ಷೆಗಳೊಂದಿಗೆ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬಂದಿತ್ತು. ಸಿನಿಮಾ ತೆರೆಕಂಡ ಎರಡೇ ದಿನಕ್ಕೆ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ತಡೆ ನೀಡಿತ್ತು. ಇದು ಅಭಿಮಾನಿಗಳು ಹಾಗೂ ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ಪುನೀತ್​ ಹಾಗೂ ಅಭಿಮಾನಿಗಳ ಮನವಿಗೆ ಮಣಿದ ಸರ್ಕಾರ ಕೆಲ ದಿನಗಳವರೆಗೆ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿತ್ತು.

ಈಗ ಚಿತ್ರಮಂದಿರಗಳಲ್ಲಿ ಮತ್ತೆ ಶೇ. 50 ಆಸನ ವ್ಯವಸ್ಥೆ ಜಾರಿಗೆ ಬಂದಿದೆ. ಅಂದರೆ, ಥಿಯೇಟರ್​ನಲ್ಲಿರುವ ಒಟ್ಟು ಆಸನದಲ್ಲಿ ಅರ್ಧದಷ್ಟು ಮಂದಿ ಮಾತ್ರ ಕೂರಬಹುದು. ಹೀಗಾದಾಗ, ಫ್ಯಾಮಿಲಿ ಆಡಿಯನ್ಸ್​ ಚಿತ್ರಮಂದಿರಕ್ಕೆ ಹೋಗೋದು ಕಡಿಮೆ ಆಗಲಿದೆ. ಇದು ನೇರವಾಗಿ ಚಿತ್ರದ ಕಲೆಕ್ಷನ್​ ಮೇಲೆ ಪರಿಣಾಮ ಬೀರಲಿದೆ.

ಇದನ್ನು ಅರಿತ ಚಿತ್ರತಂಡ ಏಪ್ರಿಲ್​ 9ಕ್ಕೆ ಯುವರತ್ನ ಸಿನಿಮಾವನ್ನು ಪ್ರೈಮ್​ನಲ್ಲಿ ರಿಲೀಸ್​ ಮಾಡುತ್ತಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಪುನೀತ್​ ನಟನೆಯ ಸಿನಿಮಾ ರಿಲೀಸ್​ ಆದ ಎಂಟೇ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದೇಕೆ? ಹೀಗೆ ಮಾಡುತ್ತಿರುವುದು ಸರಿಯಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಒಟಿಟಿಯಲ್ಲಿ ಸಿನಿಮಾ ರಿಲೀಸ್​ ಆದರೆ ನಂತರ ಚಿತ್ರಮಂದಿರದತ್ತ ಯಾರೂ ಹೆಜ್ಜೆ ಹಾಕುವುದಿಲ್ಲ. ಹೀಗಾಗಿ, ಯುವರತ್ನ 25ನೇ ದಿನ ಸಂಭ್ರಮಾಚರಣೆಯನ್ನೂ ಆಚರಿಸಿಕೊಳ್ಳುವುದು ಅನುಮಾನವಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರಮೂಡಿಸಿದೆ.

ಇದನ್ನೂ ಓದಿ: Yuvarathnaa OTT Release: ಬಿಡುಗಡೆಯಾದ ಎಂಟೇ ಎಂಟು ದಿನಕ್ಕೆ ಅಮೇಜಾನ್​ ಪ್ರೈಂನತ್ತ ಮುಖ ಮಾಡಿದ ಯುವರತ್ನ; ಕೊರೊನಾ ಕಾಟದಿಂದ ಓಟಿಟಿಗೆ ಬಂದ ಚಿತ್ರ

Published On - 3:08 pm, Thu, 8 April 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!