AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ

ಭಾರೀ ನಿರೀಕ್ಷೆಗಳೊಂದಿಗೆ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬಂದಿತ್ತು. ಸಿನಿಮಾ ತೆರೆಕಂಡ ಎರಡೇ ದಿನಕ್ಕೆ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ತಡೆ ನೀಡಿತ್ತು. ಇದು ಅಭಿಮಾನಿಗಳು ಹಾಗೂ ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿತ್ತು.

Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ
ಯುವರತ್ನದಲ್ಲಿ ಪುನೀತ್​
ರಾಜೇಶ್ ದುಗ್ಗುಮನೆ
|

Updated on:Apr 08, 2021 | 3:08 PM

Share

ನೆಚ್ಚಿನ ನಟನ ಸಿನಿಮಾ ಚಿತ್ರಮಂದಿರದಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಬೇಕು, 100 ದಿನ ಓಡಬೇಕು ಎಂಬುದು ಫ್ಯಾನ್ಸ್​ ಆಸೆ. ಆದರೆ, ಕೆಲವೊಮ್ಮೆ ಸಿನಿಮಾ ಅಂದುಕೊಂಡ ರೀತಿಯಲ್ಲಿ ಮೂಡಿ ಬಂದಿರುವುದಿಲ್ಲ. ಹೀಗಾದಾಗ, ಅಭಿಮಾನಿಗಳಿಗೆ ಬೇಸರ ಆಗಿಯೇ ಆಗುತ್ತದೆ. ಆದರೆ, ಸಿನಿಮಾ ಉತ್ತಮವಾಗಿದ್ದೂ, ಯಶಸ್ಸು ಕಂಡಿಲ್ಲ ಎಂದರೆ ಅಭಿಮಾನಿಗಳಿಗೆ ದುಪ್ಪಟ್ಟು ಬೇಸರವಾಗುತ್ತದೆ. ಈಗ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​ಗೂ ಇದೇ ರೀತಿ ಆಗಿದೆ. ಯುವರತ್ನ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಎರಡನೇ ವಾರಕ್ಕೆ ಚಿತ್ರ ಒಟಿಟಿಯಲ್ಲಿ ರಿಲೀಸ್​ ಆಗುತ್ತಿರುವುದು ಬೇಸರ ತರಿಸಿದೆ. ಭಾರೀ ನಿರೀಕ್ಷೆಗಳೊಂದಿಗೆ ಯುವರತ್ನ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬಂದಿತ್ತು. ಸಿನಿಮಾ ತೆರೆಕಂಡ ಎರಡೇ ದಿನಕ್ಕೆ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ತಡೆ ನೀಡಿತ್ತು. ಇದು ಅಭಿಮಾನಿಗಳು ಹಾಗೂ ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ಪುನೀತ್​ ಹಾಗೂ ಅಭಿಮಾನಿಗಳ ಮನವಿಗೆ ಮಣಿದ ಸರ್ಕಾರ ಕೆಲ ದಿನಗಳವರೆಗೆ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿತ್ತು.

ಈಗ ಚಿತ್ರಮಂದಿರಗಳಲ್ಲಿ ಮತ್ತೆ ಶೇ. 50 ಆಸನ ವ್ಯವಸ್ಥೆ ಜಾರಿಗೆ ಬಂದಿದೆ. ಅಂದರೆ, ಥಿಯೇಟರ್​ನಲ್ಲಿರುವ ಒಟ್ಟು ಆಸನದಲ್ಲಿ ಅರ್ಧದಷ್ಟು ಮಂದಿ ಮಾತ್ರ ಕೂರಬಹುದು. ಹೀಗಾದಾಗ, ಫ್ಯಾಮಿಲಿ ಆಡಿಯನ್ಸ್​ ಚಿತ್ರಮಂದಿರಕ್ಕೆ ಹೋಗೋದು ಕಡಿಮೆ ಆಗಲಿದೆ. ಇದು ನೇರವಾಗಿ ಚಿತ್ರದ ಕಲೆಕ್ಷನ್​ ಮೇಲೆ ಪರಿಣಾಮ ಬೀರಲಿದೆ.

ಇದನ್ನು ಅರಿತ ಚಿತ್ರತಂಡ ಏಪ್ರಿಲ್​ 9ಕ್ಕೆ ಯುವರತ್ನ ಸಿನಿಮಾವನ್ನು ಪ್ರೈಮ್​ನಲ್ಲಿ ರಿಲೀಸ್​ ಮಾಡುತ್ತಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಪುನೀತ್​ ನಟನೆಯ ಸಿನಿಮಾ ರಿಲೀಸ್​ ಆದ ಎಂಟೇ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದೇಕೆ? ಹೀಗೆ ಮಾಡುತ್ತಿರುವುದು ಸರಿಯಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಒಟಿಟಿಯಲ್ಲಿ ಸಿನಿಮಾ ರಿಲೀಸ್​ ಆದರೆ ನಂತರ ಚಿತ್ರಮಂದಿರದತ್ತ ಯಾರೂ ಹೆಜ್ಜೆ ಹಾಕುವುದಿಲ್ಲ. ಹೀಗಾಗಿ, ಯುವರತ್ನ 25ನೇ ದಿನ ಸಂಭ್ರಮಾಚರಣೆಯನ್ನೂ ಆಚರಿಸಿಕೊಳ್ಳುವುದು ಅನುಮಾನವಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರಮೂಡಿಸಿದೆ.

ಇದನ್ನೂ ಓದಿ: Yuvarathnaa OTT Release: ಬಿಡುಗಡೆಯಾದ ಎಂಟೇ ಎಂಟು ದಿನಕ್ಕೆ ಅಮೇಜಾನ್​ ಪ್ರೈಂನತ್ತ ಮುಖ ಮಾಡಿದ ಯುವರತ್ನ; ಕೊರೊನಾ ಕಾಟದಿಂದ ಓಟಿಟಿಗೆ ಬಂದ ಚಿತ್ರ

Published On - 3:08 pm, Thu, 8 April 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ