AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಅಸ್ತಿಯನ್ನು ನಮಗೆ ಕೊಡಿಸಿ ಪೊಲೀಸರ ಮೊರೆ ಹೋದ ಅಭಿಮಾನಿಗಳು

Vishnuvardhan Fans: ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಅವರು ಏನೂ ಮಾಡಲಾಗದ ಸ್ಥಿತಿ ಇದೆ. ನೆಲಸಮಗೊಳಿಸಲಾಗಿರುವ ಸಮಾಧಿಯಲ್ಲಿದ್ದ ವಿಷ್ಣುವರ್ಧನ್ ಅವರ ಅಸ್ತಿಗಾಗಿ ಇದೀಗ ಅಭಿಮಾನಿಗಳು ಪೊಲೀಸರ ಮೊರೆ ಹೋಗಿದ್ದಾರೆ. ಮಾಹಿತಿ ಇಲ್ಲಿದೆ....

ವಿಷ್ಣುವರ್ಧನ್ ಅಸ್ತಿಯನ್ನು ನಮಗೆ ಕೊಡಿಸಿ ಪೊಲೀಸರ ಮೊರೆ ಹೋದ ಅಭಿಮಾನಿಗಳು
Dr Vishnuvardhan
ಮಂಜುನಾಥ ಸಿ.
|

Updated on:Aug 09, 2025 | 3:07 PM

Share

ವಿಷ್ಣುವರ್ಧನ್ (Vishnuvardhan) ಸ್ಮಾರಕ ವಿಚಾರ ವರ್ಷಗಳಿಂದಲೂ ವಿವಾದಗಳಲ್ಲಿದೆ. ಅಭಿಮಾನಿಗಳು ಅಭಿಮಾನ್ ಸ್ಟುಡಿಯೋನಲ್ಲಿಯೇ ಸ್ಮಾರಕ ನಿರ್ಮಾಣ ಆಗಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಬಾಲಣ್ಣ ಅವರ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದರು. ಇನ್ನು ವಿಷ್ಣುವರ್ಧನ್ ಕುಟುಂಬದವರು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ ಮಾಡಿದ್ದರು ಅಂತೆಯೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಈಗಾಗಲೇ ಆಗಿದೆ. ಆದರೆ ಇದೀಗ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮಗೊಳಿಸಲಾಗಿದ್ದು, ಇದು ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿಷ್ಣುವರ್ಧನ್ ಅಸ್ತಿಯನ್ನು ನಮಗೆ ಕೊಡಿ ಎಂದು ಇದೀಗ ಅಭಿಮಾನಿಗಳು ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಪೊಲೀಸರು. ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಪುಣ್ಯಭೂಮಿಯನ್ನು ನೆಲಸಮಗೊಳಿಸಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಮೇರುನಟನೊಬ್ಬನ ಸಮಾಧಿಯನ್ನು ನೆಲಸಮಗೊಳಿಸಿದ್ದು ಕರ್ನಾಟಕ ಸಾಂಸ್ಕೃತಿಕ ಪರಂಪರೆಗೆ ಮುಜುಗರವೇ ಸರಿ. ಇಂಥಹಾ ಘಟನೆಗಳು ಇನ್ನಾದರೂ ನಿಲ್ಲಲಿ ಎಂದು ಆಶಿಸುತ್ತಾ, ಪುಣ್ಯಭೂಮಿಯಲ್ಲಿ ಇದ್ದ ವಿಷ್ಣುವರ್ಧನ್ ಅಸ್ತಿಯನ್ನು ಅಭಿಮಾನಿಗಳಿಗೆ ಹಸ್ತಾಂತರಿಸಬೇಕು ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ.

‘ಆ ಅಸ್ತಿಯ ಜೊತೆ ಅಭಿಮಾನಿಗಳಿಗೆ ಭಾವನಾತ್ಮಕ ಸಂಬಂಧ ಇರುವುದರಿಂದ ಹಾಗೂ ಆ ಅಸ್ತಿಗೆ ಪ್ರತಿವರ್ಷವೂ ಪೂಜೆ, ಸಂಸ್ಕಾರ ಮಾಡುವ ಉದ್ದೇಶ ಇರುವ ಕಾರಣ ಅದನ್ನು ಅಭಿಮಾನಿಗಳಿಗೆ ಹಸ್ತಾಂತರಿಸಬೇಕು ಎಂದು ಕೋರುತ್ತೇವೆ. ಒಂದೊಮ್ಮೆ ಆ ಅಸ್ತಿಯನ್ನು ಅವರು ನಾಶಪಡಿಸಿದ್ದರೆ ಕಾನೂನು ಹೋರಾಟ ಮಾಡುತ್ತೇವೆ’ ಎಂದು ಕೆಂಗೇರಿ ಪೊಲೀಸರಿಗೆ ಅಭಿಮಾನಿಗಳು ಬರೆದಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಅದೇ ಜಾಗದಲ್ಲಿ ವಿಷ್ಣುವರ್ಧನ್ ಪುಣ್ಯಭೂಮಿ ಆಗಬೇಕು: ಫ್ಯಾನ್ಸ್ ಪ್ರತಿಭಟನೆ

ಅಭಿಮಾನ್ ಸ್ಟುಡಿಯೋ ವಿವಾದ ವರ್ಷಗಳಿಂದಲೂ ನಡೆಯುತ್ತಲೇ ಇದೆ. ಹಲವು ಬಾರಿ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ. ಸ್ವತಃ ಅಭಿಮಾನಿಗಳು ಸಹ ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಾಲಯವು ಅಭಿಮಾನಿಗಳ ಮನವಿಯನ್ನು ಸ್ಪಷ್ಟವಾಗಿ ನಿರಾಕರಿಸಿತು. ಬಾಲಣ್ಣ ಅವರ ಕುಟುಂಬದವರು ಒಪ್ಪಿದರಷ್ಟೆ ಅಲ್ಲಿ ಸ್ಮಾರಕ ನಿರ್ಮಾಣ ಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಯ್ತು. ಕೊನೆಗೆ ಈಗಾಗಲೇ ನಿರ್ಮಾಣವಾಗಿದ್ದ ಸಮಾಧಿಯನ್ನು ತೆರವು ಗೊಳಿಸುವ ಅಥವಾ ಉಳಿಸಿಕೊಳ್ಳುವ ಅಧಿಕಾರವೂ ಬಾಲಣ್ಣ ಕುಟುಂಬದವರದ್ದೇ ಆಯ್ತ. ಇದೀಗ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Sat, 9 August 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ