AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಂದಲ ಮಾಡಿಕೊಂಡು ಬೇರೆ ಸಿನಿಮಾದ ಆರು ಶೋ ಹೌಸ್​​ಫುಲ್ ಮಾಡಿದ ಪ್ರಭಾಸ್ ಅಭಿಮಾನಿಗಳು

ಸಾಮಾನ್ಯವಾಗಿ ಒಂದೇ ಹೆಸರಿನ ಸಿನಿಮಾಗಳು ರಿಲೀಸ್ ಆದರೆ ಜನರಿಗೆ ಗೊಂದಲ ಉಂಟಾಗುತ್ತದೆ. ಇದಕ್ಕಾಗಿಯೇ ‘ಕಲ್ಕಿ’ ತಂಡದವರು ಈ ರೀತಿ ಮಾಡಿದ್ದಾರೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇದರಲ್ಲಿ ತಮ್ಮ ಕೈವಾಡ ಇಲ್ಲ ಎಂದು ರಾಜಶೇಖರ್ ಅವರು ಟ್ವೀಟ್ ಮಾಡಿದ್ದಾರೆ.

ಗೊಂದಲ ಮಾಡಿಕೊಂಡು ಬೇರೆ ಸಿನಿಮಾದ ಆರು ಶೋ ಹೌಸ್​​ಫುಲ್ ಮಾಡಿದ ಪ್ರಭಾಸ್ ಅಭಿಮಾನಿಗಳು
ಗೊಂದಲ ಮಾಡಿಕೊಂಡು ಬೇರೆ ಸಿನಿಮಾದ ಆರು ಶೋ ಹೌಸ್​​ಫುಲ್ ಮಾಡಿದ ಪ್ರಭಾಸ್ ಅಭಿಮಾನಿಗಳು
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jun 25, 2024 | 9:34 AM

Share

‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾಗೆ ಟಿಕೆಟ್ ಬುಕಿಂಗ್ ಆರಂಭ ಆಗಿದೆ. ವಿಶ್ವಾದ್ಯಂತ ಸಿನಿಮಾ ಜೂನ್ 27ರಂದು ರಿಲೀಸ್ ಆಗಲಿದೆ. ಹೈದರಾಬಾದ್, ಬೆಂಗಳೂರು, ಚೆನ್ನೈ ಸೇರಿ ಪ್ರಮುಖ ನಗರಗಳಲ್ಲಿ ಅಭಿಮಾನಿಗಳು ಸಂಭ್ರಮಿಸಲು ರೆಡಿ ಆಗಿದ್ದಾರೆ. ಈ ಮಧ್ಯೆ ಪ್ರಭಾಸ್ ಅಭಿಮಾನಿಗಳು ಸಖತ್ ಕನ್​ಫ್ಯೂಸ್ ಮಾಡಿಕೊಂಡಿದ್ದಾರೆ. ಅದ್ಯಾವ ಮಟ್ಟಿಗೆ ಎಂದರೆ 2019ರಲ್ಲಿ ರಿಲೀಸ್ ಆದ ‘ಕಲ್ಕಿ’ ಚಿತ್ರಕ್ಕೆ ಟಿಕೆಟ್ ಬುಕ್ ಮಾಡಿದ್ದಾರೆ. ಈ ಸಿನಿಮಾ ರೀ-ರಿಲೀಸ್ ಆಗಿದ್ದು ಆರು ಶೋಗಳು ಹೌಸ್​ಫುಲ್ ಆಗಿವೆ.

ತೆಲುಗು ನಟ ರಾಜಶೇಖರ್ ನಟನೆಯ ‘ಕಲ್ಕಿ’ ಸಿನಿಮಾ 2019ರಲ್ಲಿ ರಿಲೀಸ್ ಆಗಿತ್ತು. ಈ ಚಿತ್ರದ ಟಿಕೆಟ್​ನ ಫ್ಯಾನ್ಸ್ ಬುಕ್ ಮಾಡಿದ್ದಾರೆ. ಆ ಬಳಿಕ ಅವರಿಗೆ ತಪ್ಪಿನ ಅರಿವಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆಗುತ್ತಿದ್ದು, ಇದರಿಂದ ಲಾಭ ಮಾಡಿಕೊಳ್ಳಲು ರಾಜಶೇಖರ್ ಸಿನಿಮಾ ತಂಡದವರು ಮುಂದಾದರೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಪ್ರಭಾಸ್ ಫ್ಯಾನ್ಸ್​ ಚಿತ್ರತಂಡವನ್ನು ಶಪಿಸುತ್ತಿದ್ದಾರೆ.

ಸಾಮಾನ್ಯವಾಗಿ ಒಂದೇ ಹೆಸರಿನ ಸಿನಿಮಾಗಳು ರಿಲೀಸ್ ಆದರೆ ಜನರಿಗೆ ಗೊಂದಲ ಉಂಟಾಗುತ್ತದೆ. ಇದಕ್ಕಾಗಿಯೇ ‘ಕಲ್ಕಿ’ ತಂಡದವರು ಈ ರೀತಿ ಮಾಡಿದ್ದಾರೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇದರಲ್ಲಿ ತಮ್ಮ ಕೈವಾಡ ಇಲ್ಲ ಎಂದು ರಾಜಶೇಖರ್ ಅವರು ಟ್ವೀಟ್ ಮಾಡಿದ್ದಾರೆ. ‘ನನಗೂ ಇದಕ್ಕೂ ಸಂಬಂಧವಿಲ್ಲ’ ಎಂದಿದ್ದಾರೆ ಅವರು. ‘ಪ್ರಭಾಸ್, ನಾಗ್ ಅಶ್ವಿನ್​, ಅಶ್ವಿನಿ ದತ್, ವೈಜಯಂತಿ ಫಿಲ್ಮ್ಸ್​ಗೆ ನನ್ನ ಶುಭಾಶಯ. ಸಿನಿಮಾ ಇತಿಹಾಸ ಸೃಷ್ಟಿಸಿ’ ಎಂದು ರಾಜಶೇಖರ್ ಟ್ವೀಟ್ ಮಾಡಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಅಮಿತಾಭ್​, ದೀಪಿಕಾ ಪಡುಕೋಣೆ, ಪ್ರಭಾಸ್​, ಕಮಲ್ ಹಾಸನ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ದೀಪಿಕಾ ಪ್ರೆಗ್ನೆಂಟ್, ಆದಾಗ್ಯೂ ಅವರು ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ.  ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ದೊಡ್ಡ ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಇವರಿಗೆ ಇನ್ನೂ ಇಲ್ಲ.

ಇದನ್ನೂ ಓದಿ:

ಮಹಾಭಾರತದಿಂದ ಆರಂಭ ಆಗೋ ಕಥೆ 6000 ವರ್ಷ ಸಾಗದಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಬಗ್ಗೆ ಪ್ರಭಾಸ್ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಸಲಾರ್’ ಬಳಿಕ ಅವರು ಮತ್ತೊಂದು ಗೆಲುವು ಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ