AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡುವಾಗಲೇ ಖ್ಯಾತ ಗಾಯಕಿ ಮೇಲೆ ಬಕೆಟ್​​ಗಟ್ಟಲೆ ಹಣ ಸುರಿದ ಅಭಿಮಾನಿಗಳು; ವೈರಲ್​ ಆಯ್ತು ವಿಡಿಯೋ

ಗಾಯಕಿ ಊರ್ವಶಿ ರಾಧಾದಿಯಾ ಅವರು ಗುಜರಾತ್​ನಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ.

ಹಾಡುವಾಗಲೇ ಖ್ಯಾತ ಗಾಯಕಿ ಮೇಲೆ ಬಕೆಟ್​​ಗಟ್ಟಲೆ ಹಣ ಸುರಿದ ಅಭಿಮಾನಿಗಳು; ವೈರಲ್​ ಆಯ್ತು ವಿಡಿಯೋ
ಹಣ ಸುರಿಯುತ್ತಿರುವ ಅಭಿಮಾನಿ
TV9 Web
| Edited By: |

Updated on: Nov 20, 2021 | 2:54 PM

Share

ಫ್ಯಾನ್ಸ್​ ತಮ್ಮ ಅಭಿಮಾನವನ್ನು ನಾನಾ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ಕಟೌಟ್​ ನಿಲ್ಲಿಸಿ ಹಾಲಿನ ಅಭಿಷೇಕ ಮಾಡುವುದು, ಉರುಳು ಸೇವೆ ಮಾಡುವುದು, ಅನ್ನದಾನ ಮಾಡುವುದು ಮತ್ತಿತ್ಯಾದಿ ವಿಚಾರಗಳು ಸಾಮಾನ್ಯ ಎನ್ನಬಹುದು. ಆದರೆ, ಗುಜರಾತ್​ನಲ್ಲಿ ನಡೆದ ಘಟನೆ ತುಂಬಾನೇ ಭಿನ್ನವಾಗಿತ್ತು. ಖ್ಯಾತ ಗಾಯಕಿ ಮೇಲೆ ಅಭಿಮಾನಿಗಳು ದುಡ್ಡಿನ ಮಳೆ ಸುರಿದಿದ್ದಾರೆ. ವಿಡಿಯೋ ನೋಡಿದ ಫ್ಯಾನ್ಸ್​ ನಿಜಕ್ಕೂ ಶಾಕ್​ ಆಗಿದ್ದಾರೆ. ಏಕೆಂದರೆ, ವೇದಿಕೆ ಸಂಪೂರ್ಣವಾಗಿ ನೋಟುಗಳಿಂದ ತುಂಬಿ ಹೋಗಿತ್ತು.

ಗಾಯಕಿ ಊರ್ವಶಿ ರಾಧಾದಿಯಾ ಅವರು ಗುಜರಾತ್​ನಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಇತ್ತೀಚೆಗೆ ತುಳಸಿ ವಿವಾಹ ಕಾರ್ಯಕ್ರಮದ ನಿಮಿತ್ತ ಅವರು ಪ್ರೋಗ್ರಾಮ್​ ಒಂದನ್ನು ನೀಡಿದ್ದರು. ವೇದಿಕೆ ಮೇಲೆ ಅವರು ಹಾರ್ಮೋನಿಯಂ ನುಡಿಸುತ್ತಾ ಹಾಡುತ್ತಿದ್ದರು. ಅವರ ಹಾಡುಕೇಳಿ ಕೆಳಗೆ ಕೂತಿದ್ದ ಪ್ರೇಕ್ಷಕರು ಸಿಳ್ಳೆ ಹೊಡೆಯೋಕೆ ಪ್ರಾರಂಭಿಸಿದರು. ಕೆಲವರು ನೋಟುಗಳನ್ನು ಎಸೆದರು.

ನಂತರ ಸಾಲುಸಾಲು ಮಂದಿ ನೋಟುಗಳನ್ನು ಎಸೆಯೋಕೆ ಆರಂಭಿಸಿದರು. ಪರಿಣಾಮ ಅವರ ಮೇಲೆ ನೋಟಿನ ಮಳೆಯೇ ಸುರಿದಿತ್ತು. ಕೆಲವರು ಬಕೆಟ್​ನಲ್ಲಿ ತಂದು ಹಣ ಸುರಿದರು. ಅವರ ಹಾರ್ಮೋನಿಯಂ ಮೇಲೆ ಹಣ ಬೀಳುತ್ತಿದ್ದರೂ ಅದನ್ನು ಸರಿಸಿ ಹಾಡು ಹೇಳುವುದನ್ನು ಮುಂದುವರಿಸಿದ್ದರು ಊರ್ವಶಿ. ಅವರ ಬದ್ಧತೆ ನೋಡಿ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಸ್ವತಃ ಊರ್ವಶಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಅಮೂಲ್ಯ ಪ್ರೀತಿ’ ಎನ್ನುವ ಕ್ಯಾಪ್ಶನ್​ ನೀಡಿದ್ದು, ಹಣದ ಮಳೆ ಎನ್ನುವ ಹ್ಯಾಶ್​ಟ್ಯಾಗ್​ ನೀಡಿದ್ದಾರೆ. ಅಹಮದಾಬಾದ್​ನಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ಇಷ್ಟೊಂದು ಹಣ ತೆಗೆದುಕೊಂಡು ಎನು ಮಾಡುತ್ತೀರಾ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ನಿಮ್ಮ ಧ್ವನಿಯಲ್ಲಿರುವ ಮ್ಯಾಜಿಕ್​ ಇದು ಎಂದು ಇನ್ನೂ ಕೆಲವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  ಊರ್ವಶಿ ಅವರಿಗೆ ಗುಜರಾತಿನಲ್ಲಿ ಸಾಕಷ್ಟು ಹೆಸರಿದೆ. ದಿಗ್ಗಜರು ಇದ್ದ ವೇದಿಕೆಯಲ್ಲಿ ಹಾಡಿ ಅವರು ಸಾಕಷ್ಟು ಬಾರಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ.

ಇದನ್ನೂ ಓದಿ: Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ