AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥ ಸಿನಿಮಾದಿಂದ ಹೊರಬಂದಿದ್ದು ಒಳ್ಳೆಯದೇ ಆಯ್ತು; ದುಲ್ಕರ್ ಸಲ್ಮಾನ್​​ಗೆ ಫ್ಯಾನ್ಸ್ ಮೆಚ್ಚುಗೆ

ಸೋಶಿಯಲ್ ಮೀಡಿಯಾದಲ್ಲಿ ‘ಥಗ್​ ಲೈಫ್’ ಸಿನಿಮಾ ಬಗ್ಗೆ ಹೀನಾಯವಾಗಿ ಟ್ರೋಲ್ ಮಾಡಲಾಗುತ್ತಿದೆ. ಕಮಲ್ ಹಾಸನ್ ನಟನೆಯ ಈ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಸಿಗುತ್ತಿದೆ. ಹಳೇ ಘಟನೆಯನ್ನೂ ನೆನಪಿಸಿಕೊಳ್ಳಲಾಗಿದೆ. ಈ ಚಿತ್ರದಿಂದ ದುಲ್ಕರ್ ಸಲ್ಮಾನ್, ರವಿ ಮೋಹನ್ ಹೊರನಡೆದಿದ್ದು ಒಳ್ಳೆಯದೇ ಆಯಿತು ಎನ್ನುತ್ತಿದ್ದಾರೆ ಫ್ಯಾನ್ಸ್.

ಇಂಥ ಸಿನಿಮಾದಿಂದ ಹೊರಬಂದಿದ್ದು ಒಳ್ಳೆಯದೇ ಆಯ್ತು; ದುಲ್ಕರ್ ಸಲ್ಮಾನ್​​ಗೆ ಫ್ಯಾನ್ಸ್ ಮೆಚ್ಚುಗೆ
Dulquer Salmaan, Kamal Haasan
ಮದನ್​ ಕುಮಾರ್​
|

Updated on: Jun 05, 2025 | 8:55 PM

Share

ನಟ ಕಮಲ್ ಹಾಸನ್ (Kamal Haasan) ಅವರು ‘ಥಗ್ ಲೈಫ್’ ಸಿನಿಮಾ ಮೇಲೆ ಸಖತ್ ಭರವಸೆ ಇಟ್ಟುಕೊಂಡಿದ್ದರು. ತಮ್ಮ ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟ ಆಗಲಿದೆ ಎಂದು ಅವರು ಭಾವಿಸಿದ್ದರು. ಆದರೆ ಆಗಿದ್ದೇ ಬೇರೆ. ಇಂದು (ಜೂನ್ 5) ಕರ್ನಾಟಕ ಹೊರತುಪಡಿಸಿ ಇನ್ನುಳಿದ ಕಡೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ‘ಥಗ್​ ಲೈಫ್’ (Thug Life) ಸಿನಿಮಾ ನೋಡಿದ ಅನೇಕರು ನೆಗೆಟಿವ್ ವಿಮರ್ಶೆ ನೀಡಿದ್ದಾರೆ. ಇನ್ನೂ ಕೆಲವರು ಹೀನಾಯವಾಗಿ ಟ್ರೋಲ್ ಮಾಡುತ್ತಿದ್ದಾರೆ. ಇದರ ನಡುವೆ ದುಲ್ಕರ್ ಸಲ್ಮಾನ್ (Dulquer Salmaan) ಮತ್ತು ರವಿ ಮೋಹನ್ ಅವರ ಹೆಸರುಗಳನ್ನು ಕೂಡ ಎಳೆದು ತರುತ್ತಿದ್ದಾರೆ. ಅದಕ್ಕೆ ಕಾರಣ ಇದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಥಗ್ ಲೈಫ್’ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ಮತ್ತು ರವಿ ಮೋಹನ್ ಅವರು ನಟಿಸಬೇಕಿತ್ತು. 2023ರಲ್ಲಿ ಈ ಸಿನಿಮಾ ಅನೌನ್ಸ್ ಆಯಿತು. ಬಳಿಕ ಕಮಲ್ ಹಾಸನ್ ಜೊತೆ ನಟಿಸಲು ದುಲ್ಕರ್ ಸಲ್ಮಾನ್ ಮತ್ತು ರವಿ ಮೋಹನ್ ಅವರಿಗೆ ಆಫರ್ ನೀಡಲಾಗಿತ್ತು. ಮೊದಲಿಗೆ ಅವರು ಒಪ್ಪಿಕೊಂಡಿದ್ದರು. ಆದರೆ ನಂತರ ಚಿತ್ರತಂಡದಿಂದ ಹೊರನಡೆದರು.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

ಡೇಟ್ಸ್ ಹೊಂದಾಣಿಕೆ ಆಗುತ್ತಿಲ್ಲ ಎಂಬ ಕಾರಣಕ್ಕೆ ‘ಥಗ್​ ಲೈಫ್’ ಸಿನಿಮಾವನ್ನು ದುಲ್ಕರ್ ಸಲ್ಮಾನ್ ಹಾಗೂ ರವಿ ಮೋಹನ್ ಕೈಬಿಟ್ಟರು. ಆ ಸಂದರ್ಭದಲ್ಲಿ ಅವರನ್ನು ಕೆಲವರು ಟೀಕಿಸಿದ್ದರು. ನಿರ್ದೇಶಕ ಮಣಿರತ್ನಂ ಮತ್ತು ನಟ ಕಮಲ್ ಹಾಸನ್ ಅವರಂತಹ ಹಿರಿಯರ ಜೊತೆ ಕೆಲಸ ಮಾಡುವ ಅವಕಾಶವನ್ನು ದುಲ್ಕರ್ ಸಲ್ಮಾನ್ ಹಾಗೂ ರವಿ ಮೋಹನ್ ಕಳೆದುಕೊಂಡರು ಎಂದು ಟೀಕಿಸಲಾಗಿತ್ತು. ಆದರೆ ಈಗ ಪ್ರೇಕ್ಷಕರ ಅಭಿಪ್ರಾಯ ಬದಲಾಗಿದೆ.

‘ಥಗ್​ ಲೈಫ್’ ಸಿನಿಮಾ ನೋಡಿ ಬಂದ ಬಳಿಕ ಜನರು ವಿವಿಧ ಬಗೆಯಲ್ಲಿ ಪ್ರತಿಕ್ರಿಯೆ ತಿಳಿಸುತ್ತಿದ್ದಾರೆ. ದುಲ್ಕರ್ ಸಲ್ಮಾನ್ ಮತ್ತು ರವಿ ಮೋಹನ್ ಅವರು ಈ ಸಿನಿಮಾದಿಂದ ಹೊರಬಂದಿದ್ದು ಒಳ್ಳೆಯದೇ ಆಯಿತು ಎಂದು ಅವರ ಅಭಿಮಾನಿಗಳು ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಹಲವರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ

ಈ ಸಿನಿಮಾದ ಪ್ರಚಾರದ ವೇಳೆ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅದರಿಂದ ಕನ್ನಡಿಗರು ಗರಂ ಆದರು. ಪರಿಣಾಮವಾಗಿ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ ಅಡ್ಡಿ ಆಯಿತು. ಇದರಿಂದ, ನಿರ್ಮಾಪಕರೂ ಆಗಿರುವ ಕಮಲ್ ಹಾಸನ್ ಅವರಿಗೆ ಬಹುಕೋಟಿ ರೂಪಾಯಿ ನಷ್ಟ ಆಗಿದೆ. ಅದರ ಬೆನ್ನಲ್ಲೇ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಕೂಡ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು