AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಪಕ್ಕದಲ್ಲಿ ಹೊಸ ಹುಡುಗಿ; ಅಭಿಮಾನಿಗಳಿಗೆ ಹೆಚ್ಚಿತು ಕುತೂಹಲ

‘ಕಿಂಗ್​ಡಮ್’ ಸಿನಿಮಾದ ಪೋಸ್ಟರ್​ನಲ್ಲಿ ಈ ದೃಶ್ಯ ಇದೆ. ರೈಲ್ವೇ ನಿಲ್ದಾಣದಲ್ಲಿ ಹೊಸ ನಟಿಯ ಜೊತೆ ವಿಜಯ್ ದೇವರಕೊಂಡ ಕುಳಿತಿದ್ದಾರೆ. ಆಕೆ ಯಾರು ಎಂಬುದನ್ನು ಪತ್ತೆ ಹಚ್ಚಲು ಅಭಿಮಾನಿಗಳು ಎಐ ಸಹಾಯ ಕೇಳಿದ್ದಾರೆ. ಮಾಸ್ ಆಗಿ ಮೂಡಿಬರುತ್ತಿರುವ ‘ಕಿಂಗ್​ಡಮ್​’ ಸಿನಿಮಾದ ಪ್ರಚಾರಕ್ಕೆ ಈಗಲೇ ಚಾಲನೆ ನೀಡಲಾಗಿದೆ.

ವಿಜಯ್ ದೇವರಕೊಂಡ ಪಕ್ಕದಲ್ಲಿ ಹೊಸ ಹುಡುಗಿ; ಅಭಿಮಾನಿಗಳಿಗೆ ಹೆಚ್ಚಿತು ಕುತೂಹಲ
Vijay Deverakonda
ಮದನ್​ ಕುಮಾರ್​
|

Updated on: Apr 29, 2025 | 7:28 PM

Share

ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Deverakonda) ಅವರಿಗೆ ಸಖತ್ ಜನಪ್ರಿಯತೆ ಇದೆ. ಆದರೆ ಬಾಕ್ಸ್ ಆಫೀಸ್​ನಲ್ಲಿ ಅದಕ್ಕೆ ತಕ್ಕಂತಹ ಫಲಿತಾಂಶ ಸಿಗುತ್ತಿಲ್ಲ. ವಿಜಯ್ ದೇವರಕೊಂಡ ಇತ್ತೀಚಿನ ವರ್ಷಗಳಲ್ಲಿ ನಟಿಸಿದ ಸಿನಿಮಾಗಳು ಅಂದುಕೊಂಡ ಮಟ್ಟಕ್ಕೆ ಯಶಸ್ಸು ಕಂಡಿಲ್ಲ. ‘ಲೈಗರ್’, ‘ಫ್ಯಾಮಿಲಿ ಸ್ಟಾರ್’, ‘ಖುಷಿ’ ಸಿನಿಮಾಗಳು ಸೋತಿವೆ. ಆದರೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಈಗ ವಿಜಯ್ ದೇವರಕೊಂಡ ಅವರು ‘ಕಿಂಗ್​ಡಮ್’ (Kingdom) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ಆದರೆ ಹೀರೋಯಿನ್ (Kingdom Movie Heroine) ಯಾರು ಎಂಬುದು ಇನ್ನೂ ಖಚಿತ ಆಗಿಲ್ಲ. ಅದಕ್ಕಾಗಿ ಅಭಿಮಾನಿಗಳು ಹುಡುಕಾಟ ನಡೆಸುತ್ತಿದ್ದಾರೆ.

‘ಕಿಂಗ್​ಡಮ್’ ಸಿನಿಮಾದಿಂದ ಮೊದಲ ಹಾಡನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಅದನ್ನು ತಿಳಿಸುವ ಸಲುವಾಗಿ ಹೊಸ ಪೋಸ್ಟರ್ ಅನಾವರಣ ಮಾಡಲಾಗಿದೆ. ಇದರಲ್ಲಿ ನಟಿಯೊಬ್ಬರ ಫೋಟೋ ಇದೆ. ಆದರೆ ಅವರ ಮುಖ ಕಾಣಿಸಿಲ್ಲ. ರೈಲ್ವೇ ಸ್ಟೇಷನ್​ನಲ್ಲಿ ವಿಜಯ್ ದೇವರಕೊಂಡ ಜೊತೆ ಕುಳಿತಿರುವ ನಟಿ ಯಾರು ಎಂಬುದನ್ನು ತಿಳಿಯುವ ಕೌತುಕ ಎಲ್ಲರಲ್ಲೂ ಮೂಡಿದೆ.

ಏಪ್ರಿಲ್ 30ರಂದು ‘ಕಿಂಗ್​ಡಮ್’ ಸಿನಿಮಾದ ಮೊದಲ ಹಾಡು ರಿಲೀಸ್ ಆಗಲಿದೆ. ಅದನ್ನು ನೋಡಲು ಫ್ಯಾನ್ಸ್ ಕಾತರರಾಗಿದ್ದಾರೆ. ಹಾಡಿನಲ್ಲಿ ಹೀರೋಯಿನ್ ಮುಖ ಬಹಿರಂಗ ಆಗಲಿದೆ. ಅಲ್ಲಿಯವರೆಗೂ ಕಾಯುವ ತಾಳ್ಮೆ ಅಭಿಮಾನಿಗಳಿಗೆ ಇಲ್ಲ. ಹಾಗಾಗಿ ಎಐ ಸಹಾಯ ಪಡೆದು ಹೀರೋಯಿನ್ ಹೆಸರು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ
Image
‘ನನ್ನ ತಂಗಿಗೆ ಸವಲತ್ತು ಸಿಗಬಾರದು’; ರಶ್ಮಿಕಾ ಮಂದಣ್ಣ ಹೀಗೆ ಅಂದಿದ್ಯಾಕೆ?
Image
ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು
Image
‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ
Image
‘ಎಲ್ಲರಿಗೂ ಆ ವಿಚಾರ ಗೊತ್ತಿದೆ’; ಮದುವೆ ಬಗ್ಗೆ ನೇರವಾಗಿ ಮಾತನಾಡಿದ ರಶ್ಮಿಕಾ

‘ಮಿಸ್ಟರ್ ಬಚ್ಚನ್’ ಖ್ಯಾತಿಯ ನಟಿ ಭಾಗ್ಯಶ್ರೀ ಅವರು ‘ಕಿಂಗ್​ಡಮ್’ ಸಿನಿಮಾಗೆ ನಾಯಕಿ ಎನ್ನಲಾಗಿದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ. ಇದು ಮಾಸ್ ಕಮರ್ಷಿಯಲ್ ಸಿನಿಮಾ ಆಗಿರಲಿದ್ದು, ಗೌತಮ್ ತಿನ್ನನೂರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ನಡೆಯುತ್ತಿವೆ.

ಇದನ್ನೂ ಓದಿ: ಪಾಕ್ ವಿರುದ್ಧ ಭಾರತ ಯುದ್ಧ ಮಾಡುವ ಅಗತ್ಯ ಇಲ್ಲ: ವಿಜಯ್ ದೇವರಕೊಂಡ ಹೀಗೆ ಹೇಳಿದ್ದು ಯಾಕೆ?

ವಿಜಯ್ ದೇವರಕೊಂಡ ಅವರು ‘ಕಿಂಗ್​ಡಮ್’ ಸಿನಿಮಾಗಾಗಿ ಸಾಕಷ್ಟು ಶ್ರಮಪಟ್ಟಿದ್ದಾರೆ. ಬಾಡಿ ಟ್ರಾನ್ಸ್​ಫರ್​ಮೇಷನ್ ಕೂಡ ಮಾಡಿಕೊಂಡಿದ್ದಾರೆ. ಸಂಭಾವನೆ ವಿಚಾರದಲ್ಲೂ ಅವರು ರಾಜಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು