ಪ್ರೇಮಿಗಳ ದಿನಕ್ಕೆ ಸಾಯಿ ಪಲ್ಲವಿ, ನಾಗ ಚೈತನ್ಯ ವಿಶೇಷ ವಿಡಿಯೋ; ಮದುವೆ ಆಗಲು ಫ್ಯಾನ್ಸ್​ ಒತ್ತಾಯ

ಎರಡನೇ ಬಾರಿ ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ರಿಯಲ್​ ಲೈಫ್​ನಲ್ಲಿಯೂ ಅವರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಫ್ಯಾನ್ಸ್ ಆಸೆಗೆ ನೀರೆರೆಯುವ ರೀತಿಯಲ್ಲಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಪ್ರೇಮಿಗಳ ದಿನದಂದು ವಿಶೇಷವಾದ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಪ್ರೇಮಿಗಳ ದಿನಕ್ಕೆ ಸಾಯಿ ಪಲ್ಲವಿ, ನಾಗ ಚೈತನ್ಯ ವಿಶೇಷ ವಿಡಿಯೋ; ಮದುವೆ ಆಗಲು ಫ್ಯಾನ್ಸ್​ ಒತ್ತಾಯ
ನಾಗ ಚೈತನ್ಯ, ಸಾಯಿ ಪಲ್ಲವಿ
Follow us
|

Updated on: Feb 14, 2024 | 6:00 PM

ಸಮಂತಾ ರುತ್​ ಪ್ರಭು ಅವರಿಗೆ ವಿಚ್ಛೇದನ ನೀಡಿರುವ ನಟ ನಾಗ ಚೈತನ್ಯ (Naga Chaitanya) ಅವರು ಈಗ ಯಾರನ್ನು ಮದುವೆ ಆಗಬಹುದು ಎಂಬುದನ್ನು ತಿಳಿಯುವ ಕೌತುಕ ಎಲ್ಲರಲ್ಲೂ ಇದೆ. ಶೋಭಿತಾ ಧೂಲಿಪಾಲ ಜೊತೆ ಅವರು ಸುತ್ತಾಡುತ್ತಿದ್ದಾರೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಅದೇನೇ ಇದ್ದರೂ ಅಭಿಮಾನಿಗಳ ಆಸೆ ಬೇರೆಯೇ ಇದೆ. ಸಾಯಿ ಪಲ್ಲವಿ (Sai Pallavi) ಜೊತೆ ನಾಗ ಚೈತನ್ಯ ಮದುವೆಯಾಗಲಿ ಎಂದು ಫ್ಯಾನ್ಸ್​ ಆಸೆಪಡುತ್ತಿದ್ದಾರೆ. ‘ವ್ಯಾಲೆಂಟೈನ್ಸ್​ ಡೇ’ (Valentine’s Day) ಸಂದರ್ಭದಲ್ಲಿ ಈ ಬಯಕೆಯನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ. ಅದಕ್ಕೆಲ್ಲ ಕಾರಣ ಆಗಿರುವುದು ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಹಂಚಿಕೊಂಡಿರುವ ಒಂದು ಸ್ಪೆಷಲ್​ ವಿಡಿಯೋ. ಇವರಿಬ್ಬರು ‘ತಂಡೇಲ್​’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ನಟಿಸುತ್ತಿರುವ ‘ತಂಡೇಲ್​’ ಸಿನಿಮಾದ ಟೀಸರ್​ ಒಂದಷ್ಟು ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಅದರಲ್ಲಿನ ಒಂದು ರೊಮ್ಯಾಂಟಿಕ್​ ಡೈಲಾಗ್​ಗೆ ಈಗ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ರೀಲ್ಸ್​ ಮಾಡಿದ್ದಾರೆ. ವಿಶೇಷವಾಗಿ ಪ್ರೇಮಿಗಳ ದಿನದಂದೇ ಅದನ್ನು ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿ ಜೊತೆ ಆಮಿರ್​ ಖಾನ್​ ಮಗನ ಸುತ್ತಾಟ; ಫೋಟೋ ವೈರಲ್​

‘ನಿಮ್ಮಿಬ್ಬರ ಜೋಡಿ ತುಂಬ ಚೆನ್ನಾಗಿ ಕಾಣುತ್ತಿದೆ’ ಎಂದು ಕೆಲವರು ಅಭಿಪ್ರಾಯ ತಿಳಿಸಿದ್ದಾರೆ. ‘ಅಣ್ಣಾ ನೀವು ಸಾಯಿ ಪಲ್ಲವಿ ಅವರನ್ನೇ ಮದುವೆ ಆಗಿ. ಅವರು ನಿಮಗೆ ತುಂಬ ಚೆನ್ನಾಗಿ ಜೋಡಿಯಾಗುತ್ತಾರೆ’ ಎಂದು ಮತ್ತೋರ್ವ ಅಭಿಮಾನಿ ಕಮೆಂಟ್​ ಮಾಡಿದ್ದಾರೆ. ಈ ರೀತಿಯ ಕಮೆಂಟ್​ಗಳಿಗೆ ಸಾಯಿ ಪಲ್ಲವಿ ಅವರಾಗಲಿ, ನಾಗ ಚೈತನ್ಯ ಅವರಾಗಲಿ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಒಟ್ಟಿನಲ್ಲಿ ವ್ಯಾಲೆಂಟೈನ್ಸ್​ ಡೇ ಪ್ರಯುಕ್ತ ಹಂಚಿಕೊಂಡ ಈ ವಿಡಿಯೋ ಸಖತ್​ ವೈರಲ್​ ಆಗಿದೆ.

ಈ ಮೊದಲು ‘ಲವ್​ ಸ್ಟೋರಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಜೋಡಿಯಾಗಿ ನಟಿಸಿದ್ದರು. ಈಗ ಅವರು ಎರಡನೇ ಬಾರಿಗೆ ‘ತಂಡೇಲ್​’ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಲವ್ ಸ್ಟೋರಿ ಮತ್ತು ದೇಶಭಕ್ತಿಯ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಟೀಸರ್​ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಒಂದು ದೊಡ್ಡ ಗೆಲುವಿಗಾಗಿ ನಾಗ ಚೈತನ್ಯ ಕಾದಿದ್ದಾರೆ. ‘ತಂಡೇಲ್​’ ಸಿನಿಮಾ ಮೂಲಕ ಅವರಿಗೆ ಆ ಗೆಲುವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ