ಸಮಂತಾ ದೇಹದ ಮೇಲಿರುವ ಟ್ಯಾಟೂ ಗತಿಯೇನು? ಅದರಲ್ಲಿದೆ ನಾಗ ಚೈತನ್ಯ ನೆನಪು

ಸುಮಾರು 10 ವರ್ಷಗಳ ಕಾಲ ಸಮಂತಾ ಮತ್ತು ನಾಗ ಚೈತನ್ಯ ಗೆಳೆಯರಾಗಿ, ಪ್ರೇಮಿಗಳಾಗಿದ್ದರು. ನಂತರ ಮದುವೆ ಆದರು. ಇವರ ಮದುವೆಗೆ ನಾಲ್ಕು ವರ್ಷ ತುಂಬುವುದರೊಳಗೆ ವಿಚ್ಛೇದನದ ಸುದ್ದಿ ಹೊರ ಬಿದ್ದಿದೆ.

ಸಮಂತಾ ದೇಹದ ಮೇಲಿರುವ ಟ್ಯಾಟೂ ಗತಿಯೇನು? ಅದರಲ್ಲಿದೆ ನಾಗ ಚೈತನ್ಯ ನೆನಪು
ಸಮಂತಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 07, 2021 | 2:11 PM

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಬೇರೆಯಾಗುವ ಬಗ್ಗೆ ಘೋಷಣೆ ಮಾಡಿ ವಾರ ಕಳೆಯುತ್ತಾ ಬಂದಿದೆ. ಇದಾದ ನಂತರದಲ್ಲಿ ಅವರ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿವೆ. ಇದರಲ್ಲಿ ಹಲವು ವದಂತಿಗಳು, ಇನ್ನೂ ಕೆಲವು ನಿಜ. ಈ ಮಧ್ಯೆ ಸಮಂತಾ ಅಕ್ಕಿನೇನಿ ದೇಹದ ಮೇಲಿರುವ ಟ್ಯಾಟೂ ಬಗ್ಗೆ ಅಭಿಮಾನಿಗಳು ಚಿಂತಿಸುತ್ತಿದ್ದಾರೆ. ಏಕೆಂದರೆ ಸಮಂತಾ ದೇಹದ ಮೇಲೆ ನಾಗ ಚೈತನ್ಯ ಅವರ ಸಹಿ ಇದೆ.

ಸುಮಾರು 10 ವರ್ಷಗಳ ಕಾಲ ಸಮಂತಾ ಮತ್ತು ನಾಗ ಚೈತನ್ಯ ಗೆಳೆಯರಾಗಿ, ಪ್ರೇಮಿಗಳಾಗಿದ್ದರು. ನಂತರ ಮದುವೆ ಆದರು. ಇವರ ಮದುವೆಗೆ ನಾಲ್ಕು ವರ್ಷ ತುಂಬುವುದರೊಳಗೆ ವಿಚ್ಛೇದನದ ಸುದ್ದಿ ಹೊರ ಬಿದ್ದಿದೆ. ಈ ವಿಚಾರವನ್ನು ಅಭಿಮಾನಿಗಳ ಬಳಿ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಹೀಗಿರುವಾಗಲೇ ಅವರ ದೇಹದ ಮೇಲಿರುವ ಹಚ್ಚೆ ಬಗ್ಗೆ ಚರ್ಚೆ ನಡೆಯುತ್ತಿದೆ.

ಸಮಂತಾ ದೇಹದ ಮೇಲೆ ಮೂರು ಟ್ಯಾಟೂಗಳಿವೆ. ಅವರು ಮೊದಲ ಬಾರಿಗೆ ವೈಎಂಸಿ ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಇದರ ಅರ್ಥ ‘ಯೇ ಮಾಯಾ ಚೇಸಾವೆ’. ಈ ಸಿನಿಮಾ ರಾತ್ರೋರಾತ್ರಿ ಸಮಂತಾ ಅವರನ್ನು ಸ್ಟಾರ್​ ಆಗಿ ಮಾಡಿತು. ಮತ್ತೊಂದು ಟ್ಯಾಟೂನಲ್ಲಿ ನಾಗ ಚೈತನ್ಯ ಅವರ ಸಹಿ ಇದೆ. ಸಾಕಷ್ಟು ಫೋಟೋಶೂಟ್​​ಗಳಲ್ಲಿ ಈ ಸಹಿ ಎದ್ದು ಕಾಣಿಸಿದೆ. ಮತ್ತೊಂದು ಟ್ಯಾಟೂ ಬಾಣದ ಚಿಹ್ನೆಯನ್ನು ಹೊಂದಿದೆ. ನಾಗ ಚೈತನ್ಯ ಕೂಡ ಇದೇ ಟ್ಯಾಟೂ ಹಾಕಿಸಿಕೊಂಡಿದ್ದರು.

ಬಾಲಿವುಡ್​ ಸ್ಟಾರ್​ ನಟಿ ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್​ ಅವರನ್ನು ಪ್ರೀತಿಸುತ್ತಿದ್ದಾಗ ಆರ್​ಕೆ ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಇನ್ನು, ನಯನತಾರಾ ಪಿಡಿ (ಪ್ರಭುದೇವ) ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಆದರೆ, ಇವೆರಡೂ ಸಂಬಂಧ ಉಳಿದಿಲ್ಲ. ನಂತರ ಅವರು ಲೇಸರ್​ ಸಹಾಯದಿಂದ ಈ ಟ್ಯಾಟೂ ತೆಗೆಸಿ ಹಾಕಿದ್ದರು. ಈಗ ಸಮಂತಾ ಕೂಡ ಇದೇ ಮಾರ್ಗ ತುಳಿಯಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅಭಿಮಾನಿ ವಲಯದಲ್ಲಿ ಚರ್ಚೆ ಆಗುತ್ತಿದೆ.

ವಿಚ್ಛೇದನ ಪಡೆದ ನಂತರದಲ್ಲಿ ಸಮಂತಾ ಅವರು ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ವಿಚಾರದ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.

ಇದನ್ನೂ ಓದಿ: ‘ಜಗತ್ತನ್ನು ಬದಲಾಯಿಸಬೇಕಾದರೆ ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು’; ವಿಚ್ಛೇದನದ ನಂತರ ಸಮಂತಾ ಮೊದಲ ಮಾತು

ಸಮಂತಾ ಮೇಲೆ ನಾಗ ಚೈತನ್ಯಗೆ ಇತ್ತು ಹೊಟ್ಟೆಕಿಚ್ಚು? ವಿಚ್ಛೇದನದ ಅಸಲಿ ವಿಚಾರ ಬಯಲು

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು