AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫರ್ಹಾನಾ’ ಸಿನಿಮಾ ವಿವಾದ: ನಟಿ ಐಶ್ವರ್ಯಾ ರಾಜೇಶ್​ಗೆ ಪೊಲೀಸ್​ ಭದ್ರತೆ

Farhana Movie: ದಿ ಕೇರಳ ಸ್ಟೋರಿ ಸಿನಿಮಾ ಬೆನ್ನಲ್ಲೆ ಇದೀಗ ತಮಿಳಿನ ಫರ್ಹಾನಾ ಸಿನಿಮಾ ಸಹ ವಿವಾದಕ್ಕೆ ಗುರಿಯಾಗಿದೆ. ಮುಸ್ಲಿಂ ಸಮುದಾಯವು ಸಿನಿಮಾಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಫರ್ಹಾನಾ ಸಿನಿಮಾದ ನಾಯಕಿ ಐಶ್ವರ್ಯಾ ರಾಜೇಶ್​ಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

'ಫರ್ಹಾನಾ' ಸಿನಿಮಾ ವಿವಾದ: ನಟಿ ಐಶ್ವರ್ಯಾ ರಾಜೇಶ್​ಗೆ ಪೊಲೀಸ್​ ಭದ್ರತೆ
ಫರ್ಹಾನಾ
ಮಂಜುನಾಥ ಸಿ.
|

Updated on: May 16, 2023 | 10:35 PM

Share

ದಿ ಕೇರಳ ಸ್ಟೋರಿ‘ (The Kerala Story) ಸಿನಿಮಾ ವಿವಾದ ಎಬ್ಬಿಸಿರುವ ಬೆನ್ನಲ್ಲೆ ತಮಿಳಿನ ಮತ್ತೊಂದು ಸಿನಿಮಾ ಸಹ ವಿವಾದಕ್ಕೆ ಗುರಿಯಾಗಿದೆ. ಎರಡೂ ಸಿನಿಮಾಗಳನ್ನು ಮುಸ್ಲಿಂ ಸಮುದಾಯ ವಿರೋಧಿಸುತ್ತಿದೆ. ಕೆಲವು ದಿನಗಳ ಹಿಂದಷ್ಟೆ ‘ಫರ್ಹಾನಾ‘ (Farhana) ಹೆಸರಿನ ತಮಿಳು ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾಕ್ಕೆ ಕೆಲವು ಮೂಲಭೂತವಾದಿ ವ್ಯಕ್ತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನಲ್ಲೆ ಸಿನಿಮಾದ ನಟಿ ಐಶ್ವರ್ಯಾ ರಾಜೇಶ್​ಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಫರ್ಹಾನಾ ಸಿನಿಮಾದಲ್ಲಿ ಐಶ್ವರ್ಯಾ ರಾಜೇಶ್ ನಾಯಕಿಯಾಗಿ ನಟಿಸಿದ್ದು, ಸಿನಿಮಾದ ವಿರುದ್ಧ ಮುಸ್ಲಿಂ ಸಮುದಾಯದ ಕೆಲ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆಯ ಬೆದರಿಕೆ ಒಡ್ಡಿರುವ ಹಿನ್ನೆಲೆಯಲ್ಲಿ ನಟಿಗೆ ಭದ್ರತೆ ನೀಡಲಾಗಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾದ ನಟಿ ಅದಾ ಶರ್ಮಾಗೂ ಸಹ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಫರ್ಹಾನಾ ಸಿನಿಮಾವು ಮುಸ್ಲಿಂ ಗೃಹಿಣಿಯೊಬ್ಬಳ ಕತೆಯನ್ನು ಒಳಗೊಂಡಿದೆ. ಬಡತನದ ಕುಟುಂಬದ ಸೊಸೆ ಫರ್ಹಾನಾ, ತನ್ನ ಪರಿಸ್ಥಿತಿ ತನ್ನ ಮಕ್ಕಳಿಗೆ ಬರಬಾರದೆಂಬ ಕಾರಣಕ್ಕೆ ಲೈಂಗಿಕತೆ ಕುರಿತಾಗಿ ಮಾತನಾಡುವ ಕಾಲ್ ಸೆಂಟರ್​ ಸೇರಿಕೊಳ್ಳುತ್ತಾಳೆ. ಅಲ್ಲಿ ಆಕೆ ಎದುರಿಸುವ ಸಮಸ್ಯೆಗಳು, ಆ ವೃತ್ತಿಯಿಂದಾಗಿ ಕುಟುಂಬದವರಿಂದ ಎದುರಿಸುವ ಸಮಸ್ಯೆ, ಬ್ಲಾಕ್​ಮೇಲರ್ ಒಬ್ಬನಿಗೆ ಎದುರಿಸುವ ಸಮಸ್ಯೆಗಳನ್ನು ಫರ್ಹಾನಾ ಹೇಗೆ ನಿಭಾಯಿಸುತ್ತಾಳೆ ಎಂಬುದೇ ಸಿನಿಮಾದ ಕತೆ. ಸಿನಿಮಾವು ಮೇ 12 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಕಂಡಿದೆ.

ಇಂಡಿಯನ್ ನ್ಯಾಷನಲ್ ಲೀಗ್ ಮತ್ತು ಇನ್ನು ಕೆಲವು ಮುಸ್ಲಿಂ ಸಂಘಟನೆಗಳು ಸಿನಿಮಾದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಿನಿಮಾವು ಮುಸ್ಲಿಂ ಮಹಿಳೆಯರನ್ನು ಕೆಟ್ಟದಾಗಿ ಚಿತ್ರಿಸಿದೆ ಹಾಗೂ ಸಿನಿಮಾದಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಕೆಟ್ಟ ಸಂದೇಶ ಸಮಾಜಕ್ಕೆ ರವಾನೆ ಆಗುತ್ತದೆ ಎಂದು ಆರೋಪಿಸಿದ್ದಾರೆ.

ಫರ್ಹಾನಾ ಸಿನಿಮಾ ನಿರ್ಮಾಪಕರು ಸಹ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದು, “ಸಿಬಿಎಫ್​ಸಿಯಿಂದ ಸೆನ್ಸಾರ್ ಮಾಡಲಾದ ಫರ್ಹಾನಾ ಬಗ್ಗೆ ಕೆಲವು ಜನರು ಸೃಷ್ಟಿಸಿದ ವಿವಾದಗಳು ನಮಗೆ ತುಂಬಾ ನೋವನ್ನುಂಟುಮಾಡಿದೆ. ಫರ್ಹಾನಾ ಸಿನಿಮಾವು ಯಾವುದೇ ಧರ್ಮ ಅಥವಾ ಅವರ ಭಾವನೆಗಳಿಗೆ ವಿರುದ್ಧವಾಗಿಲ್ಲ. ನಮ್ಮ ಗುರಿ ಉತ್ತಮ ಚಲನಚಿತ್ರಗಳನ್ನು ನೀಡುವುದಷ್ಟೆ, ನಿರ್ದಿಷ್ಟ ಧಾರ್ಮಿಕ ಭಾವನೆಗಳಿಗೆ ಮತ್ತು ನಂಬಿಕೆಗಳಿಗೆ ವಿರುದ್ಧವಾದ ವಿಷಯಗಳಿಗೆ ನಾವು ಎಂದಿಗೂ ಘಾಸಿ ಉಂಟು ಮಾಡಿಲ್ಲ. ಮಾನವೀಯತೆ ಮತ್ತು ಮಾನವೀಯತೆಗೆ ವಿರುದ್ಧವಾದ ಕಥೆಗಳನ್ನು ನಾವು ಹೇಳುವುದಿಲ್ಲ. ನಮ್ಮ ಸಿನಿಮಾದ ಬಗ್ಗೆ ವಿವಾದಗಳನ್ನು ಸೃಷ್ಟಿಸುತ್ತಿರುವ ನಮ್ಮ ಸಹೋದರ ಸಹೋದರಿಯರು ಇದನ್ನು ಅರ್ಥಮಾಡಿಕೊಳ್ಳಬೇಕು. ನಮ್ಮ ತಮಿಳುನಾಡು ಧಾರ್ಮಿಕ ಸೌಹಾರ್ದತೆಯ ಸ್ವರ್ಗ, ಕಲಾಕೃತಿಗಳನ್ನು ಪೋಷಿಸುತ್ತಿರುವ ನಾಡು, ಸೆನ್ಸಾರ್ ಆದ ಚಿತ್ರವನ್ನು ಅಪಾರ್ಥಗಳಿಂದ ವಿರೋಧಿಸಿ ವಿವಾದ ಸೃಷ್ಟಿಸುವುದು ಸರಿಯಲ್ಲ, ವಿರೋಧಿಸುವವರಿಗೆ ಸರಿಯಾದ ತಿಳುವಳಿಕೆ ಇಲ್ಲ ಎನಿಸುತ್ತದೆ. ನೂರಾರು ಜನರ ಶ್ರಮದಿಂದ ಚಿತ್ರ ನಿರ್ಮಿಸಲಾಗಿದೆ. ಯಾವುದೇ ದೋಷವಿಲ್ಲದ ಚಿತ್ರವನ್ನು ತಮಿಳು ಅಭಿಮಾನಿಗಳು ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ” ಎಂದಿದ್ದಾರೆ.

ಫರ್ಹಾನಾ ಸಿನಿಮಾವನ್ನು ನೆಲ್ಸನ್ ವೆಂಕಟೇಸನ್ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬಾಬು ಹಾಗೂ ಎಸ್​ಆರ್ ಬಾಬು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಐಶ್ವರ್ಯಾ ರಾಜೇಶ್ ಜೊತೆಗೆ ಸೆಲ್ವ ರಾಘವನ್, ಜಿತಿನ್ ರಮೇಶ್, ಅನುಮೋಲ್, ಐಶ್ವರ್ಯಾ ದತ್ತ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?