AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ ಯೂನಿವರ್ಸ್ ಆದ ಮೆಕ್ಸಿಕೊ ಸುಂದರಿ; ಕಾಲಿಗೆ ಗಾಜು ಚುಚ್ಚಿದರೂ ಬಿಡಲಿಲ್ಲ ಛಲ

74ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಮೆಕ್ಸಿಕೋದ ಫಾತಿಮಾ ಬೋಷ್ ವಿಜೇತರಾಗಿದ್ದಾರೆ. ಗಾಯ ಮತ್ತು ವಿವಾದಗಳ ನಡುವೆಯೂ ಅವರು ಕಿರೀಟ ಗೆದ್ದಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ಮಾಣಿಕಾ ವಿಶ್ವಕರ್ಮ ಟಾಪ್ 12 ಹಂತಕ್ಕೆ ತಲುಪಲು ವಿಫಲರಾದರು. ಥೈಲ್ಯಾಂಡ್‌ನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಭಾರತ ಮೂಲದ ಪ್ರವೀಣರ್ ಸಿಂಗ್ ಮೊದಲ ರನ್ನರ್ ಅಪ್ ಆದರು.

ಮಿಸ್ ಯೂನಿವರ್ಸ್ ಆದ ಮೆಕ್ಸಿಕೊ ಸುಂದರಿ; ಕಾಲಿಗೆ ಗಾಜು ಚುಚ್ಚಿದರೂ ಬಿಡಲಿಲ್ಲ ಛಲ
ಫಾತಿಮಾ
TV9 Web
| Edited By: |

Updated on: Nov 21, 2025 | 3:15 PM

Share

74ನೇ ಸಾಲಿನ ಮಿಸ್ ಯೂನಿವರ್ಸ್ ಸಂಪೂರ್ಣಗೊಂಡಿದೆ. ಥೈಲೆಂಡ್​ನಲ್ಲಿ ನಡೆದ ಈ ಸ್ಪರ್ಧೆಯಲ್ಲಿ 100ಕ್ಕೂ ಅಧಿಕ ಮಂದಿ ಸ್ಪರ್ಧೆ ಮಾಡಿದ್ದರು. ಈ ಪೈಕಿ ಮೆಕ್ಸಿಕೊದ ಫಾತಿಮಾ ಬೋಷ್ ಅವರು ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಭಾರತ ಮೂಲದ ಥೈಲೆಂಡ್ ಪ್ರಜೆ ಪ್ರವೀಣರ್ ಸಿಂಗ್ ಮೊದಲ ರನ್ನರ್ ಅಪ್ ಆದರು. ಭಾರತ ಪ್ರತಿನಿಧಿಸಿದ್ದ ಮಾಣಿಕಾ ವಿಶ್ವಕರ್ಮ ಅವರು ಟಾಪ್ 12 ಸುತ್ತಿಗೆ ಆಯ್ಕೆ ಆಗಲು ವಿಫಲರಾದರು.

ಫಾತಿಮಾ ಯಾರು?

ಫಾತಿಮಾ ಅವರು ಮೆಕ್ಸಿಕೊದ ಟಬಾಸ್ಕೋದವರು. ಟಬಾಸ್ಕೋ ಪ್ರತಿನಿಧಿಸಿ ‘ಮಿಸ್ ಯೂನಿವರ್ಸ್ ಮೆಕ್ಸಿಕೊ’ ಗೆದ್ದ ಮೊದಲಿಗರು ಅವರಾಗಿದ್ದಾರೆ. ಈಗ ಮಿಸ್ ಯೂನಿವರ್ಸ್ ಕಿರೀಟ ಕೂಡ ಧರಿಸಿದ್ದಾರೆ. ಅವರು ಜನಿಸಿದ್ದು 2000ನೇ ಇಸ್ವಿಯಲ್ಲಿ. ಅವರಿಗೆ ಈಗಿನ್ನೂ 25 ವರ್ಷ ವಯಸ್ಸು.  ಫಾತಿಮಾ ಬಾಷ್ ಅವರು ಫ್ಯಾಷನ್ ಡಿಸೈನ್ ಓದಿದ್ದಾರೆ.

ಗಾಜು ಚುಚ್ಚಿತ್ತು..

ಫಿನಾಲೆ ನಡೆಯುವುದಕ್ಕೂ ಮೊದಲು ಫಾತಿಮಾ ಹೋಟೆಲ್​ನಲ್ಲಿ ಇದ್ದರು. ಈ ವೇಳೆ ಒಡೆದ ಗಾಜಿನ ಮೇಲೆ ಕಾಲಿಟ್ಟರು. ಇದರಿಂದಾಗಿ ಅವರ ಪಾದಕ್ಕೆ ಗಾಜಿನ ಚೂರು ಚುಚ್ಚಿತ್ತು. ಈ ವೇಳೆ ವೈದ್ಯಕೀಯ ಚಿಕಿತ್ಸೆಗೆ ಸಮಯ ಇರಲಿಲ್ಲ. ಗಾಯ, ವಿವಾದ ಮತ್ತು ಭಾರೀ ಸ್ಪರ್ಧೆಯ ನಡುವೆಯೂ ಫಾತಿಮಾ ಬಾಷ್ ಶಾಂತತೆ, ಸ್ಪಷ್ಟತೆಯಿಂದ ಮಿಸ್ ಯೂನಿವರ್ಸ್ ಪಟ್ಟ ಪಡೆದರು.

ವಿವಾದ ಏನು?

ಫಾತಿಮಾ ಅವರು ಈ ತಿಂಗಳ ಆರಂಭದಲ್ಲಿ ವಿವಾದ ಒಂದಕ್ಕೆ ಸಿಲುಕಿಕೊಂಡಿದ್ದರು. ನವೆಂಬರ್ 4ರಂದು ಮಿಸ್ ಯೂನಿವರ್ಸ್ ಸ್ಪರ್ಧಿಗಳೊಂದಿಗಿನ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಸೌಂದರ್ಯ ಸ್ಪರ್ಧೆಯ ಪ್ರಚಾರ ಕಾರ್ಯಕ್ರಮದಲ್ಲಿ ಫಾತಿಮಾ ಭಾಗವಹಿಸಲಿಲ್ಲ ಎಂದು ಆರೋಪಿಸಲಾಗಿತ್ತು. ಈಗ ಅವರಿಗೆ ವಿನ್ನರ್ ಪಟ್ಟ ನೀಡಿರೋದು ಚರ್ಚೆಗೆ ಕಾರಣ ಆಗಿದೆ.  ಇನ್ನು, ಫೈನಲ್ ಆರಂಭಕ್ಕೂ ಒಂದು ದಿನ ಮೊದಲು ಇಬ್ಬರು ಜಡ್ಜ್​ಗಳು ಸ್ಪರ್ಧೆಯಿಂದ ಹೊರ ನಡೆದಿದ್ದರು. ಸ್ಪರ್ಧೆ ನಡೆಯುವ ಮೊದಲೇ ಫೈನಲಿಸ್ಟ್​ಗಳ ಹೆಸರು ಅಂತಿಮವಾಗಿತ್ತು ಎಂದು ಆರೋಪಿಸಿದ್ದಾರೆ.

ಮಾಣಿಕಾ ಹಿನ್ನೆಲೆ

ಭಾರತವನ್ನು ಪ್ರತಿನಿಧಿಸಿದ್ದ ಮಾಣಿಕಾ ಅವರು ರಾಜಸ್ಥಾನದ ಗಂಗಾನಗರದವರು. ಅವರು ರಾಜಕೀಯ ಶಾಸ್ತ್ರ ಮತ್ತು ಅರ್ಥಶಾಸ್ತ್ರದಲ್ಲಿ ಪದವಿ ಪಡೆಯುತ್ತಿದ್ದಾರೆ. ಅವರು ಸ್ಪರ್ಧೆಯ ಅಂತಿಮ ಹಂತಕ್ಕೆ ತಲುಪಿದ್ದರು. ಆದರೆ, ಗೆಲುವು ಸಿಕ್ಕಿಲ್ಲ. ಟಾಪ್ 30ಯಲ್ಲಿ ಇದ್ದ ಅವರು, ಟಾಪ್ 12 ರೌಂಡ್​ಗೆ ಆಯ್ಕೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?