AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟಿ ಫಾತಿಮಾಗಾಗಿ ಆಮಿರ್​ ವಿಚ್ಛೇದನ ಪಡೆದರು’; ಮತ್ತೆ ಚರ್ಚೆ ಆಗುತ್ತಿದೆ ಹಳೆಯ ವದಂತಿ

2016ರಲ್ಲಿ ತೆರೆಗೆ ಬಂದ ‘ದಂಗಲ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ನಿತೇಶ್​ ತಿವಾರಿ ನಿರ್ದೇಶನದ ಈ ಸಿನಿಮಾ ಬಾಕ್ಸ್​ ಆಫೀಸ್​​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಈ ಚಿತ್ರದಲ್ಲಿ ಫಾತಿಮಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು

‘ನಟಿ ಫಾತಿಮಾಗಾಗಿ ಆಮಿರ್​ ವಿಚ್ಛೇದನ ಪಡೆದರು’; ಮತ್ತೆ ಚರ್ಚೆ ಆಗುತ್ತಿದೆ ಹಳೆಯ ವದಂತಿ
ಆಮಿರ್​ ಖಾನ್​-ಫಾತಿಮಾ
TV9 Web
| Edited By: |

Updated on: Jul 03, 2021 | 6:18 PM

Share

ನಟ ಆಮಿರ್​ ಖಾನ್​ ಹಾಗೂ ನಿರ್ಮಾಪಕಿ ಕಿರಣ್​ ರಾವ್​ ಬೇರೆ ಆಗುತ್ತಿರುವುದಾಗಿ ಇಂದು ಘೋಷಣೆ ಮಾಡಿದ್ದಾರೆ. 15 ವರ್ಷಗಳ ದಾಂಪತ್ಯಕ್ಕೆ ದಂಪತಿ ಕೊನೆ ಹಾಡುತ್ತಿರುವ ವಿಚಾರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಇಬ್ಬರೂ ವಿಚ್ಛೇದನ ಪಡೆಯುತ್ತಿರುವ ಬೆನ್ನಲ್ಲೇ ಫಾತಿಮಾ ಸೈನಾ ಷೇಖ್​ ಹೆಸರು ಮುನ್ನೆಲೆಗೆ ಬಂದಿದೆ. ಫಾತಿಮಾಗಾಗಿಯೇ ಆಮಿರ್​ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ.

2016ರಲ್ಲಿ ತೆರೆಗೆ ಬಂದ ‘ದಂಗಲ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ನಿತೇಶ್​ ತಿವಾರಿ ನಿರ್ದೇಶನದ ಈ ಸಿನಿಮಾ ಬಾಕ್ಸ್​ ಆಫೀಸ್​​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಈ ಚಿತ್ರದಲ್ಲಿ ಫಾತಿಮಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ದಂಗಲ್’​ ನಂತರ ಆಮಿರ್ ನಟನೆಯ ‘ಥಗ್ಸ್​ ಆಫ್​ ಹಿಂದುಸ್ತಾನ್​’ ಸಿನಿಮಾದಲ್ಲೂ ಫಾತಿಮಾ ನಟಿಸಿದರು. ಇದಾದ ಬೆನ್ನಲ್ಲೇ ಅನೇಕರು ಇಬ್ಬರ ನಡುವೆ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳೋಕೆ ಆರಂಭಿಸಿದರು.

‘ಆಮಿರ್​-ಫಾತಿಮಾ ರೊಮ್ಯಾನ್ಸ್​ ಮಾಡುತ್ತಿದ್ದಾರೆ. ಇದರಿಂದ ಕಿರಣ್​ ಅಪ್ಸೆಟ್​ ಆಗಿದ್ದಾರೆ’ ಎಂದು ವರದಿಗಳು ಬಿತ್ತರಗೊಂಡವು. ಇದು ಫಾತಿಮಾಗೆ ಬೇಸರ ತರಿಸಿತ್ತು. ಹೀಗಾಗಿ, ಖುದ್ದು ಅವರೇ ಈ ಬಗ್ಗೆ ಮೌನ ಮುರಿದರು. ‘ನಾನು ಭೇಟಿ ಮಾಡದೇ ಇರುವ ವ್ಯಕ್ತಿಗಳು ನನ್ನ ಬಗ್ಗೆ ಈ ರೀತಿ ಬರೆದುಕೊಂಡಿದ್ದಾರೆ. ಇದರಲ್ಲಿ ಸತ್ಯ ಇದೆಯೇ ಅಥವಾ ಇಲ್ಲವೇ ಎಂಬುದು ಅವರಿಗೂ ಕೂಡ ಗೊತ್ತಿಲ್ಲ. ಜನರು ಇದನ್ನು ಓದಿ ನಾನು ಒಳ್ಳೆಯ ವ್ಯಕ್ತಿ ಅಲ್ಲ ಎಂದು ನಿರ್ಧರಿಸುತ್ತಾರೆ. ನಾನು ಇದನ್ನು ನಿರ್ಲಕ್ಷಿಸೋಕೆ ಪ್ರಯತ್ನಿಸಿದೆ. ಆದರೆ, ಈಗ ಅದು ಸಾಧ್ಯವಾಗುತ್ತಿಲ್ಲ’ ಎಂದು ಫಾತಿಮಾ ಹೇಳಿದ್ದರು.

ಬಾಲಿವುಡ್​ ನಟ ಆಮಿರ್​ ಖಾನ್​ ಇಂದು ವಿಚ್ಛೇದನ ಘೋಷಣೆ ಮಾಡಿದ್ದಾರೆ. 10 ವರ್ಷದ ಪುತ್ರ ಆಜಾದ್​ ರಾವ್​ ಖಾನ್​ನ ಜವಾಬ್ದಾರಿಯನ್ನು ಇಬ್ಬರೂ ವಹಿಸಿಕೊಂಡಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಈ ಸುದ್ದಿ ಹೊರಬಿದ್ದ ನಂತರ ಫಾತಿಮಾ ವಿಚಾರ ಟ್ವಿಟರ್​ನಲ್ಲಿ ಟ್ರೆಂಡ್​ ಆಗಿದೆ.

ಇದನ್ನೂ ಓದಿ: ಆಮಿರ್​​ ಖಾನ್​ ಸಂಬಂಧಿ ಇಮ್ರಾನ್​ ಖಾನ್​ ಮೂರು ಮತ್ತೊಂದು ಸಿನಿಮಾ ಮಾಡಿ ನಟನೆಗೆ ಗುಡ್​ಬೈ ಹೇಳಿದ್ದು ಯಾಕೆ?

Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?