AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾತ್ರ 2’ ಪ್ರದರ್ಶನದ ವೇಳೆ ಪವನ್ ಕಲ್ಯಾಣ್-ಜಗನ್ ಅಭಿಮಾನಿಗಳ ನಡುವೆ ಮಾರಾಮಾರಿ

Yatra 2: ಆಂಧ್ರ ಪ್ರದೇಶ ಸಿಎಂ ಜಗನ್ ಅವರ ಜೀವನ ಆಧರಿಸಿದ ‘ಯಾತ್ರ 2’ ಸಿನಿಮಾ ಪ್ರದರ್ಶನದ ವೇಳೆ ಪವನ್ ಕಲ್ಯಾಣ್ ಅಭಿಮಾನಿಗಳು ಹಾಗೂ ಸಿಎಂ ಜಗನ್ ಅಭಿಮಾನಿಗಳು ಕೈ-ಕೈ ಮಿಲಾಯಿಸಿದ್ದಾರೆ. ವಿಡಿಯೋ ಇಲ್ಲಿದೆ.

‘ಯಾತ್ರ 2’ ಪ್ರದರ್ಶನದ ವೇಳೆ ಪವನ್ ಕಲ್ಯಾಣ್-ಜಗನ್ ಅಭಿಮಾನಿಗಳ ನಡುವೆ ಮಾರಾಮಾರಿ
ಮಂಜುನಾಥ ಸಿ.
|

Updated on: Feb 08, 2024 | 7:08 PM

Share

ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ರಾಜಕೀಯ ನಾಯಕರು ಸಿನಿಮಾಗಳನ್ನು ಪ್ರಚಾರಕ್ಕ ಬಳಸಿಕೊಳ್ಳುವುದು ಆಂಧ್ರದಲ್ಲಿ ತುಸು ಹೆಚ್ಚು. ಇತ್ತೀಚೆಗೆ ಈ ಟ್ರೆಂಡ್ ಬಾಲಿವುಡ್​ನಲ್ಲಿಯೂ ಆರಂಭವಾಗಿದೆ. ಇದೀಗ ಆಂಧ್ರ ಸಿಎಂ ಜಗನ್ ಅವರ ಜೀವನ ಆಧರಿಸಿದ ‘ಯಾತ್ರ 2’ (Yatra 2) ಸಿನಿಮಾ ಬಿಡುಗಡೆ ಆಗಿದೆ. ಬಿಡುಗಡೆ ಆದ ಮೊದಲ ದಿನವೇ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳು ಹಾಗೂ ಸಿಎಂ ಜಗನ್ ಅಭಿಮಾನಿಗಳ ನಡುವೆ ಮಾರಾ-ಮಾರಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್​ನ ಪ್ರಸಾದ್ ಐಮ್ಯಾಕ್ಸ್​ನಲ್ಲಿ ‘ಯಾತ್ರ 2’ ಸಿನಿಮಾ ಪ್ರದರ್ಶನವಾಗುತ್ತಿತ್ತು. ಈ ವೇಳೆ ಪವನ್ ಕಲ್ಯಾಣ್ ಹಾಗೂ ಜಗನ್ ಅವರ ಅಭಿಮಾನಿಗಳ ನಡುವೆ ಜಗಳವಾಗಿದೆ. ಎರಡೂ ಕಡೆಯ ಗುಂಪಿನವರು ಪರಸ್ಪರ ಕೈ-ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಕೆಲವರಿಗೆ ಗಾಯಗಳಾಗಿವೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಂಧ್ರದ ಇನ್ನೂ ಕೆಲವೆಡೆ ಇಂಥಹುದೇ ಘಟನೆಗಳು ನಡೆದಿವೆ ಎನ್ನಲಾಗುತ್ತಿದೆ.

‘ಯಾತ್ರ 2’ ಸಿನಿಮಾದಲ್ಲಿ ಆಂಧ್ರ ಮಾಜಿ ಸಿಎಂ ರಾಜಶೇಖರ ರೆಡ್ಡಿ ಮರಣ ಅದರ ಬಳಿಕ ಪ್ರವರ್ಧಮಾನಕ್ಕೆ ಬಂದ ಜಗನ್ ಅವರ ಕತೆಯನ್ನು ಹೇಳಲಾಗಿದೆ. ಸಿನಿಮಾದಲ್ಲಿ ಜಗನ್​ರ ರಾಜಕೀಯ ಎದುರಾಳಿಗಳನ್ನು ವಿಲನ್ ರೀತಿ ಚಿತ್ರಿಸಲಾಗಿದ್ದು, ಜಗನ್ ಅನ್ನು ಹೀರೋ ರೀತಿಯಲ್ಲಿ ಬಿಂಬಿಸಲಾಗಿದೆ. ಜಗನ್​ ಹಾಗೂ ಕಾಂಗ್ರೆಸ್ ಹೈಕಮಾಂಡ್ ಜೊತೆ ತಿಕ್ಕಾಟ, ಪಾದಯಾತ್ರೆ, ಹೊಸ ಪಕ್ಷ ಸ್ಥಾಪನೆ, ಜೈಲು ವಾಸ ಇನ್ನಿತರೆ ಘಟನೆಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ:ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ

ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ‘ಯಾತ್ರ’ ಸಿನಿಮಾದ ಮೊದಲ ಭಾಗ ಬಿಡುಗಡೆ ಆಗಿತ್ತು. ರಾಜಶೇಖರ ರೆಡ್ಡಿ ಅವರ ರಾಜಕೀಯ ಪಯಣದ ಬಗೆಗಿನ ಕತೆಯನ್ನು ಆ ಸಿನಿಮಾ ಒಳಗೊಂಡಿತ್ತು. ರಾಜಶೇಖರ ರೆಡ್ಡಿಯ ಪಾದಯಾತ್ರೆ, ಸಿಎಂ ಆದ ಬಗೆ, ಸಿಎಂ ಆದ ಬಳಿಕ ತೆಗೆದುಕೊಂಡು ಬಂದ ಯೋಜನೆಗಳನ್ನು ಭಾವನಾತ್ಮಕವಾಗಿ ತೋರಿಸಲಾಗಿತ್ತು. ಕಳೆದ ಚುನಾವಣೆಯ ಜಗನ್ ಗೆಲುವಿನಲ್ಲಿ ಆ ಸಿನಿಮಾದ ಪಾತ್ರವೂ ಇದೆ. ಅದೇ ಕಾರಣಕ್ಕೆ ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ‘ಯಾತ್ರ 2’ ಸಿನಿಮಾ ಬಿಡುಗಡೆ ಮಾಡಲಾಗಿದೆ.

‘ಯಾತ್ರ 2’ ಸಿನಿಮಾದಲ್ಲಿ ಜಗನ್ ಪಾತ್ರದಲ್ಲಿ ತಮಿಳಿನ ಜನಪ್ರಿಯ ನಟ ಜೀವ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್ ಚಂದ್ರಬಾಬು ನಾಯ್ಡು ಪಾತ್ರದಲ್ಲಿ ನಟಿಸಿದ್ದಾರೆ. ಜಗನ್​ರ ಪತ್ನಿಯ ಪಾತ್ರದಲ್ಲಿ ಕೇತಕಿ ನಾರಾಯಣ್ ನಟಿಸಿದ್ದಾರೆ. ಸಿನಿಮಾವನ್ನು ಮಹಿ ರಾಘವ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡಿರುವುದು ಮೇಕ ಶಿವ. ಸಂಗೀತವನ್ನು ಸಂತೋಷ್ ನಾರಾಯಣ್ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ