AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ನಕಲಿ ಆದೇಶ ಪತ್ರ ನೀಡಿ ವಂಚನೆ; ಚಿತ್ರ ನಿರ್ಮಾಪಕ ಅರೆಸ್ಟ್

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು.

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ನಕಲಿ ಆದೇಶ ಪತ್ರ ನೀಡಿ ವಂಚನೆ; ಚಿತ್ರ ನಿರ್ಮಾಪಕ  ಅರೆಸ್ಟ್
TV9 Web
| Edited By: |

Updated on:Jan 27, 2023 | 9:57 AM

Share

ಬೆಂಗಳೂರು: ಕೆಎಂಎಫ್​ನಲ್ಲಿ ಉದ್ಯೋಗ(KMF Job Fraud) ಕೊಡಿಸುವುದಾಗಿ ವಂಚನೆ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಚಿತ್ರ ನಿರ್ಮಾಪಕ ಪ್ರಕಾಶ್​ ಅವರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು.

ಚಿತ್ರ ನಿರ್ಮಾಪಕ ಆರೋಪಿ ಪ್ರಕಾಶ್, ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯೊಬ್ಬರಿಗೆ ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ 10 ಲಕ್ಷ ಹಣ ಪಡೆದಿದ್ದಾರೆ. ಬಳಿಕ ಆ ವ್ಯಕ್ತಿಗೆ ಸರ್ಕಾರದ ನಕಲಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. ಕೆಎಂಎಫ್ ನಿರ್ದೇಶಕರ ಸಹಿ, ಸರ್ಕಾರಿ ಲಾಂಛನಗಳ ನಕಲಿ ಮಾಡಿ ಆದೇಶ ಪ್ರತಿ ನೀಡಿದ್ದಾರೆ. ಆದೇಶ ಪ್ರತಿ ಹಿಡಿದು ಕೆಎಂಎಫ್ ಗೆ ಹೋದಾಗ ಅದು ನಕಲಿ ಆದೇಶ ಪ್ರತಿ ಎಂಬುವುದು ಪತ್ತೆಯಾಗಿದೆ. ಬಳಿಕ ಕೆಎಂಎಫ್ ಅಧಿಕಾರಿಗಳು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಆರೋಪಿ ಪ್ರಕಾಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Cheetah: ಸೌತ್ ಆಫ್ರಿಕಾದಿಂದ 100 ಚೀತಾಗಳು ಭಾರತಕ್ಕೆ

ನಿಪ್ಪಾಣಿ ಗ್ರಾಮೀಣ ಠಾಣೆ ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ

ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ ಖಾತೆ ತೆರೆದು 50 ಯುವತಿಯರಿಗೆ ವಂಚಿಸಿದ್ದ ನಕಲಿ ಪಿಎಸ್​ಐ ಆರೋಪಿ ವಿಜಯಕುಮಾರ್ ಬರಲಿ(28)ನನ್ನು ಬೆಳಗಾವಿನಗರದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ​ ನಿಪ್ಪಾಣಿ ಗ್ರಾಮೀಣ ಠಾಣೆ ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ ತೆರೆಯಲಾಗಿದೆ. PSI ಅನಿಲ್ ಕುಮಾರ್ ಹೆಸರಲ್ಲಿ ಇನ್ಸ್​​ಸ್ಟಾಗ್ರಾಂ ಖಾತೆ ತೆರೆದು ವಂಚಿಸಲಾಗಿದೆ. ಯುವತಿಯರಿಂದ 4 ಲಕ್ಷ ಹಣ ಪಡೆದು ವಿಜಯಕುಮಾರ್ ವಂಚಿಸಿದ್ದಾನೆ. ಮದುವೆ ಆಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದಿದ್ದಾನೆ ಎಂಬ ಆರೋಪವೂ ಕೇಳಿ ಬಂದಿದೆ. ವಿಡಿಯೋ ಕಾಲ್ ಮಾಡುವಂತೆ  ಓರ್ವ ಯುವತಿ ಈತನಿಗೆ ಗಂಟು ಬಿದ್ದಿದ್ದಳು. ಈತ ತಿಂಗಳು ಕಳೆದ್ರೂ ವಿಡಿಯೋ ಕಾಲ್ ಮಾಡದ ಹಿನ್ನೆಲೆ ಸಂಶಯ ಬಂದು ಈ ಬಗ್ಗೆ ಬೆಳಗಾವಿಯ ಎಸ್‌ಪಿಗೆ ದೂರು ಕೊಟ್ಟಿದ್ದಾಳೆ. ಯುವತಿಯ ದೂರು ಆಧರಿಸಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:19 am, Fri, 27 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?