Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ನಕಲಿ ಆದೇಶ ಪತ್ರ ನೀಡಿ ವಂಚನೆ; ಚಿತ್ರ ನಿರ್ಮಾಪಕ ಅರೆಸ್ಟ್

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು.

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ನಕಲಿ ಆದೇಶ ಪತ್ರ ನೀಡಿ ವಂಚನೆ; ಚಿತ್ರ ನಿರ್ಮಾಪಕ  ಅರೆಸ್ಟ್
Follow us
TV9 Web
| Updated By: ಆಯೇಷಾ ಬಾನು

Updated on:Jan 27, 2023 | 9:57 AM

ಬೆಂಗಳೂರು: ಕೆಎಂಎಫ್​ನಲ್ಲಿ ಉದ್ಯೋಗ(KMF Job Fraud) ಕೊಡಿಸುವುದಾಗಿ ವಂಚನೆ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಚಿತ್ರ ನಿರ್ಮಾಪಕ ಪ್ರಕಾಶ್​ ಅವರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು.

ಚಿತ್ರ ನಿರ್ಮಾಪಕ ಆರೋಪಿ ಪ್ರಕಾಶ್, ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯೊಬ್ಬರಿಗೆ ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ 10 ಲಕ್ಷ ಹಣ ಪಡೆದಿದ್ದಾರೆ. ಬಳಿಕ ಆ ವ್ಯಕ್ತಿಗೆ ಸರ್ಕಾರದ ನಕಲಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. ಕೆಎಂಎಫ್ ನಿರ್ದೇಶಕರ ಸಹಿ, ಸರ್ಕಾರಿ ಲಾಂಛನಗಳ ನಕಲಿ ಮಾಡಿ ಆದೇಶ ಪ್ರತಿ ನೀಡಿದ್ದಾರೆ. ಆದೇಶ ಪ್ರತಿ ಹಿಡಿದು ಕೆಎಂಎಫ್ ಗೆ ಹೋದಾಗ ಅದು ನಕಲಿ ಆದೇಶ ಪ್ರತಿ ಎಂಬುವುದು ಪತ್ತೆಯಾಗಿದೆ. ಬಳಿಕ ಕೆಎಂಎಫ್ ಅಧಿಕಾರಿಗಳು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಆರೋಪಿ ಪ್ರಕಾಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Cheetah: ಸೌತ್ ಆಫ್ರಿಕಾದಿಂದ 100 ಚೀತಾಗಳು ಭಾರತಕ್ಕೆ

ನಿಪ್ಪಾಣಿ ಗ್ರಾಮೀಣ ಠಾಣೆ ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ

ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ ಖಾತೆ ತೆರೆದು 50 ಯುವತಿಯರಿಗೆ ವಂಚಿಸಿದ್ದ ನಕಲಿ ಪಿಎಸ್​ಐ ಆರೋಪಿ ವಿಜಯಕುಮಾರ್ ಬರಲಿ(28)ನನ್ನು ಬೆಳಗಾವಿನಗರದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ​ ನಿಪ್ಪಾಣಿ ಗ್ರಾಮೀಣ ಠಾಣೆ ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ ತೆರೆಯಲಾಗಿದೆ. PSI ಅನಿಲ್ ಕುಮಾರ್ ಹೆಸರಲ್ಲಿ ಇನ್ಸ್​​ಸ್ಟಾಗ್ರಾಂ ಖಾತೆ ತೆರೆದು ವಂಚಿಸಲಾಗಿದೆ. ಯುವತಿಯರಿಂದ 4 ಲಕ್ಷ ಹಣ ಪಡೆದು ವಿಜಯಕುಮಾರ್ ವಂಚಿಸಿದ್ದಾನೆ. ಮದುವೆ ಆಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದಿದ್ದಾನೆ ಎಂಬ ಆರೋಪವೂ ಕೇಳಿ ಬಂದಿದೆ. ವಿಡಿಯೋ ಕಾಲ್ ಮಾಡುವಂತೆ  ಓರ್ವ ಯುವತಿ ಈತನಿಗೆ ಗಂಟು ಬಿದ್ದಿದ್ದಳು. ಈತ ತಿಂಗಳು ಕಳೆದ್ರೂ ವಿಡಿಯೋ ಕಾಲ್ ಮಾಡದ ಹಿನ್ನೆಲೆ ಸಂಶಯ ಬಂದು ಈ ಬಗ್ಗೆ ಬೆಳಗಾವಿಯ ಎಸ್‌ಪಿಗೆ ದೂರು ಕೊಟ್ಟಿದ್ದಾಳೆ. ಯುವತಿಯ ದೂರು ಆಧರಿಸಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:19 am, Fri, 27 January 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !