AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ನಕಲಿ ಆದೇಶ ಪತ್ರ ನೀಡಿ ವಂಚನೆ; ಚಿತ್ರ ನಿರ್ಮಾಪಕ ಅರೆಸ್ಟ್

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು.

ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ನಕಲಿ ಆದೇಶ ಪತ್ರ ನೀಡಿ ವಂಚನೆ; ಚಿತ್ರ ನಿರ್ಮಾಪಕ  ಅರೆಸ್ಟ್
TV9 Web
| Edited By: |

Updated on:Jan 27, 2023 | 9:57 AM

Share

ಬೆಂಗಳೂರು: ಕೆಎಂಎಫ್​ನಲ್ಲಿ ಉದ್ಯೋಗ(KMF Job Fraud) ಕೊಡಿಸುವುದಾಗಿ ವಂಚನೆ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಚಿತ್ರ ನಿರ್ಮಾಪಕ ಪ್ರಕಾಶ್​ ಅವರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು.

ಚಿತ್ರ ನಿರ್ಮಾಪಕ ಆರೋಪಿ ಪ್ರಕಾಶ್, ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯೊಬ್ಬರಿಗೆ ಕೆಎಂಎಫ್​ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ 10 ಲಕ್ಷ ಹಣ ಪಡೆದಿದ್ದಾರೆ. ಬಳಿಕ ಆ ವ್ಯಕ್ತಿಗೆ ಸರ್ಕಾರದ ನಕಲಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. ಕೆಎಂಎಫ್ ನಿರ್ದೇಶಕರ ಸಹಿ, ಸರ್ಕಾರಿ ಲಾಂಛನಗಳ ನಕಲಿ ಮಾಡಿ ಆದೇಶ ಪ್ರತಿ ನೀಡಿದ್ದಾರೆ. ಆದೇಶ ಪ್ರತಿ ಹಿಡಿದು ಕೆಎಂಎಫ್ ಗೆ ಹೋದಾಗ ಅದು ನಕಲಿ ಆದೇಶ ಪ್ರತಿ ಎಂಬುವುದು ಪತ್ತೆಯಾಗಿದೆ. ಬಳಿಕ ಕೆಎಂಎಫ್ ಅಧಿಕಾರಿಗಳು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಆರೋಪಿ ಪ್ರಕಾಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Cheetah: ಸೌತ್ ಆಫ್ರಿಕಾದಿಂದ 100 ಚೀತಾಗಳು ಭಾರತಕ್ಕೆ

ನಿಪ್ಪಾಣಿ ಗ್ರಾಮೀಣ ಠಾಣೆ ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ

ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ ಖಾತೆ ತೆರೆದು 50 ಯುವತಿಯರಿಗೆ ವಂಚಿಸಿದ್ದ ನಕಲಿ ಪಿಎಸ್​ಐ ಆರೋಪಿ ವಿಜಯಕುಮಾರ್ ಬರಲಿ(28)ನನ್ನು ಬೆಳಗಾವಿನಗರದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ​ ನಿಪ್ಪಾಣಿ ಗ್ರಾಮೀಣ ಠಾಣೆ ಪಿಎಸ್​ಐ ಹೆಸರಲ್ಲಿ ನಕಲಿ ಇನ್​ಸ್ಟಾಗ್ರಾಂ ತೆರೆಯಲಾಗಿದೆ. PSI ಅನಿಲ್ ಕುಮಾರ್ ಹೆಸರಲ್ಲಿ ಇನ್ಸ್​​ಸ್ಟಾಗ್ರಾಂ ಖಾತೆ ತೆರೆದು ವಂಚಿಸಲಾಗಿದೆ. ಯುವತಿಯರಿಂದ 4 ಲಕ್ಷ ಹಣ ಪಡೆದು ವಿಜಯಕುಮಾರ್ ವಂಚಿಸಿದ್ದಾನೆ. ಮದುವೆ ಆಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದಿದ್ದಾನೆ ಎಂಬ ಆರೋಪವೂ ಕೇಳಿ ಬಂದಿದೆ. ವಿಡಿಯೋ ಕಾಲ್ ಮಾಡುವಂತೆ  ಓರ್ವ ಯುವತಿ ಈತನಿಗೆ ಗಂಟು ಬಿದ್ದಿದ್ದಳು. ಈತ ತಿಂಗಳು ಕಳೆದ್ರೂ ವಿಡಿಯೋ ಕಾಲ್ ಮಾಡದ ಹಿನ್ನೆಲೆ ಸಂಶಯ ಬಂದು ಈ ಬಗ್ಗೆ ಬೆಳಗಾವಿಯ ಎಸ್‌ಪಿಗೆ ದೂರು ಕೊಟ್ಟಿದ್ದಾಳೆ. ಯುವತಿಯ ದೂರು ಆಧರಿಸಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:19 am, Fri, 27 January 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ