ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು

ಫಿಲ್ಮ್‌ಫೇರ್‌ನಿಂದ ಕನ್ನಡ ಚಿತ್ರರಂಗದ ನಿರಂತರ ಕಡೆಗಣನೆ ಮತ್ತೊಮ್ಮೆ ಸಾಬೀತಾಗಿದೆ. ಸೈಮಾ ನಂತರ ಈಗ ಫಿಲ್ಮ್‌ಫೇರ್ ಮ್ಯಾಗಜಿನ್ ಫೋಟೋಶೂಟ್‌ನಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಯಶ್, ಸುದೀಪ್, ರಿಷಬ್ ಶೆಟ್ಟಿ ಸೇರಿದಂತೆ ಯಾವುದೇ ಕನ್ನಡ ನಟರಿಲ್ಲದಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಕಲಾವಿದರನ್ನು ನಿರ್ಲಕ್ಷಿಸಿರುವ ಫಿಲ್ಮ್‌ಫೇರ್ ಕ್ರಮವನ್ನು ಖಂಡಿಸಿ, ಸಾರ್ವಜನಿಕರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.

ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು
ಫಿಲ್ಮ್ ಫೇರ್

Updated on: Mar 27, 2026 | 10:51 AM

ಕನ್ನಡ ಚಿತ್ರರಂಗವನ್ನು ಅನೇಕ ಕಡೆಗಳಲ್ಲಿ ಕಡೆಗಣಿಸುವ ಕೆಲಸ ಆಗುತ್ತಲೇ ಬರುತ್ತಿದೆ. ಈ ಮೊದಲು ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂದ ನಟರನ್ನು ಕಡೆಗಣಿಸಿದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಈಗ ಫಿಲ್ಮ್​​ಫೇರ್ (Filma Fare) ಅದೇ ತಪ್ಪನ್ನು ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ. ತಪ್ಪನ್ನು ತಿದ್ದುಕೊಂಡು ಅವರು ಕ್ಷಮೆ ಕೇಳಬೇಕು ಎಂಬ ಆಗ್ರಹಕೂಡ ವ್ಯಕ್ತವಾಗಿದೆ.

ಫಿಲ್ಮ್​ ಫೇರ್ ಅವಾರ್ಡ್ ಆರಂಭ ಆಗಿದ್ದು 1954ರಲ್ಲಿ. ಹಿಂದಿ ಸಿನಿಮಾ ರಂಗದ ಕಲಾವಿದರು ಹಾಗೂ ತಂತ್ರಜ್ಞರನ್ನು ಗೌರವಿಸುವ ಉದ್ದೇಶದಿಂದ ಇದನ್ನು ಮಾಡಲಾಯಿತು. ಆ ಬಳಿಕ 1964ರಲ್ಲಿ ‘ಫಿಲ್ಮ್​ ಫೇರ್ ಸೌತ್’ ಅವಾರ್ಡ್ ಕಾರ್ಯಕ್ರಮ ಆರಂಭಿಸಲಾಯಿತು. ಈಗ ಫಿಲ್ಮ್​​ ಫೇರ್ ಮ್ಯಾಗಜಿನ್ ಫೋಟೋಶೂಟ್ ಮಾಡಿಸಲಾಗಿದೆ. ಇದರಲ್ಲಿ ಕನ್ನಡ ಚಿತ್ರರಂಗದವರನ್ನು ಕಡೆಗಣಿಸಲಾಗಿದೆ.

ಇದನ್ನೂ ಓದಿ: 15ನೇ ವಯಸ್ಸಿಗೆ ನಟಿ; 8 ಫಿಲ್ಮ್​ಫೇರ್ ಅವಾರ್ಡ್; ಜಯಾ ಬಚ್ಚನ್ ನಡೆದು ಬಂದ ಹಾದಿ

ಫಿಲ್ಮ್​​ಫೇರ್ ಮ್ಯಾಗಜಿನ್ ಮುಖಪುಟ ರಿವೀಲ್ ಮಾಡಲಾಗಿದೆ. ಇದರಲ್ಲಿ ತಮಿಳಿನಿಂದ ಶಿವಕಾರ್ತಿಕೇಯ, ಅರವಿಂದ್ ಸ್ವಾಮಿ, ಮಲಯಾಳಂನಿಂದ ಮಮ್ಮೂಟ್ಟಿ, ತೆಲುಗಿನಿಂದ ಅಲ್ಲು ಅರ್ಜುನ್ ಇದ್ದಾರೆ. ದಕ್ಷಿಣದ ನಟಿಯರಾದ ಭಾವನಾ, ಕಾಜಲ್ ಅಗರ್​​​ವಾಲ್, ಸಾಯಿ ಪಲ್ಲವಿ ಪೋಸ್ಟರ್​​​ನಲ್ಲಿದ್ದಾರೆ. ಆದರೆ ಎಲ್ಲಿಯೂ ಕನ್ನಡದ ಕಲಾವಿದರಿಲ್ಲ.

ಯಶ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕಿಚ್ಚ ಸುದೀಪ್ ಪರಿಚಯ ಇಡೀ ದೇಶದವರಿಗೆ ಇದೆ. ‘ಕಾಂತಾರ’ ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಹೆಸರು ಮಾಡಿದ್ದಾರೆ. ಶಿವರಾಜ್​​​ಕುಮಾರ್ ಅತ್ಯಂತ ಹಿರಿಯ ನಟರು. ರುಕ್ಮಿಣಿ ವಸಂತ್ ಕೂಡ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಇವರ ಪೈಕಿ ಯಾರಾದರೂ ಒಬ್ಬರಾದರೂ ಮ್ಯಾಗಜಿನ್ ಶೂಟ್​​​ನಲ್ಲಿ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us